ದುಪ್ಪಟ್ಟ ಧರಿಸಲು ಅವಕಾಶ ನೀಡುವಂತೆ ಸರಕಾರಕ್ಕೆ ಸಿದ್ದರಾಮಯ್ಯ ಮನವಿ
ನಾನು ಹಿಜಾಬ್ ಬಗ್ಗೆ ಪ್ರಸ್ತಾಪಿಸುವುದಕ್ಕೆ ಹೋಗುವುದಿಲ್ಲ..
Team Udayavani, Mar 24, 2022, 5:34 PM IST
ವಿಧಾನಸಭೆ : ಮುಸ್ಲಿಂ ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿ ದುಪ್ಪಟ್ಟ ಧರಿಸುವುದಕ್ಕೆ ಅವಕಾಶ ನೀಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.
ನಾನು ಹಿಜಾಬ್ ಬಗ್ಗೆ ಪ್ರಸ್ತಾಪಿಸುವುದಕ್ಕೆ ಹೋಗುವುದಿಲ್ಲ. ಏಕೆಂದರೆ ಅದೀಗ ಸುಪ್ರೀಂಕೋರ್ಟ್ ನಲ್ಲಿ ವಿಚಾರಣಾ ಹಂತದಲ್ಲಿದೆ . ಆದರೆ ನಿನ್ನೆ ಕೆಲ ಮುಸ್ಲಿಂ ಧರ್ಮ ಗುರುಗಳು ನಮ್ಮನ್ನು ಭೇಟಿ ಮಾಡಿ ಈ ಮನವಿ ಸಲ್ಲಿಸಿದ್ದಾರೆ ಎಂದರು.
ಅವರು ಶಾಲೆ- ಕಾಲೇಜಿನಲ್ಲಿ ಸಮವಸ್ತ್ರವನ್ನೇ ಧರಿಸುತ್ತಾರೆ. ಆದರೆ ಅದೇ ಬಣ್ಣದ ದುಪ್ಪಟವನ್ನು ಬಳಸುವುದಕ್ಕೆ ಅವಕಾಶ ಕೋರಿದ್ದಾರೆ. ಅದು ಬುರ್ಖಾ ಅಥವಾ ಹಿಜಾಬ್ ಅಲ್ಲ. ಸರಕಾರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು. ಇದು ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕಿನ ಪ್ರಶ್ನೆ ಎಂದು ಅಭಿಪ್ರಾಯಪಟ್ಟರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶಿಕ್ಷಣದಿಂದ ವಂಚಿತರಾಗದಂತೆ ನಾವು ಸಾಕಷ್ಟು ಸಲಹೆ ನೀಡಿದರೂ ಆ ಆರು ಮಂದಿ ವಿದ್ಯಾರ್ಥಿನಿಯರು ನಮ್ಮಮಾತು ಕೇಳಿಲ್ಲ. ನೀವೇ ಸ್ವಲ್ಪ ಅವರ ಮನವೊಲಿಸಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ