ಅಹಿಂದ ನಾಯಕರನ್ನು ಪಕ್ಷಾತೀತವಾಗಿ ಮುಗಿಸಲು ಸಿದ್ದರಾಮಯ್ಯ ಯತ್ನ : ಬಿಜೆಪಿ
ಪರಮೇಶ್ವರ್ ರನ್ನು ಸೋಲಿಸಿ, ಇಬ್ರಾಹಿಂರನ್ನು ಪಕ್ಷದಿಂದ ಓಡಿಸಿದರು
Team Udayavani, Feb 18, 2022, 1:25 PM IST
ಬೆಂಗಳೂರು : ಸಚಿವ ಈಶ್ವರಪ್ಪ ರಾಜೀನಾಮೆಗೆ ಹೋರಾಟ ರೂಪಿಸುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಅಹಿಂದ ವರ್ಗದ ಯಾವುದೇ ಮುಖಂಡರ ಏಳಿಗೆ ಸಹಿಸುತ್ತಿಲ್ಲ ಎಂದು ಬಿಜೆಪಿ ಆರೋಪಿಸಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ತಾನೊಬ್ಬ ಅಹಿಂದ ವರ್ಗದ ನಾಯಕ ಎಂದು ಬಿಂಬಿಸಿಕೊಂಡಿರುವ ಸಿದ್ದರಾಮಯ್ಯ ಈಗ ಅಹಿಂದ ವರ್ಗದ ನಾಯಕರನ್ನು ಪಕ್ಷಾತೀತವಾಗಿ ಮುಗಿಸಲು ಮುಂದಾಗಿದ್ದಾರೆ ಎಂದು ದೂರಿದೆ.
ಕುರುಬ ಸಮಾಜಕ್ಕೆ ಸೇರಿದ ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಧರಣಿಯ ಹಿಂದೆ ಸಿದ್ದರಾಮಯ್ಯ ಅವರ ದಮನಕಾರಿ ಷಡ್ಯಂತ್ರವಿದೆ. ಸಿದ್ದರಾಮಯ್ಯ ಅವರು ಅಹಿಂದ ನಾಯಕರ ಏಳಿಗೆ ಸಹಿಸುವುದಿಲ್ಲ.
ಇದಕ್ಕೆ ನೂರಾರು ದೃಷ್ಟಾಂತಗಳಿವೆ.ದಲಿತ ನಾಯಕ ಪರಮೇಶ್ವರ್ ಅವರನ್ನು ಸೋಲಿಸಿ, ಇಬ್ರಾಹಿಂ ಅವರನ್ನು ಪಕ್ಷದಿಂದ ಓಡಿಸಲು ಸಂಚು ನಡೆಸಿದರು.ಈಗ ಹಿಂದುಳಿದ ಸಮಾಜದ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಸಿದ್ದರಾಮಯ್ಯ ಅಹಿಂದ ವಿರೋಧಿ ಎನ್ನುವುದಕ್ಕೆ ಬೇರೆ ಸಾಕ್ಷಿ ಬೇಕೇ ? ಎಂದು ಪ್ರಶ್ನಿಸಿದೆ.
ಹಿಂದುಳಿದ ಸಮಾಜಕ್ಕೆ ನಾನೇ ಪ್ರಶ್ನಾತೀತ ನಾಯಕ ಎಂದು ಭ್ರಮಿಸಿರುವ ಸಿದ್ದರಾಮಯ್ಯ ಅವರು ಈಗ ಕುಟುಂಬ ರಾಜಕಾರಣಕ್ಕೆ ಇಳಿದಿದ್ದಾರೆ. ತಮ್ಮ ಪುತ್ರ ಡಾ. ಯತೀಂದ್ರ ಅವರನ್ನು ಮುನ್ನೆಲೆಗೆ ತರಲು ಈಗ ತನ್ನದೇ ಸಮಾಜದ ಪ್ರಭಾವಿ ನಾಯಕರನ್ನು ಈಗಿಂದೀಗಲೇ ಮಟ್ಟಹಾಕಲು ಷಡ್ಯಂತ್ರ್ಯ ರೂಪಿಸುತ್ತಿದ್ದಾರೆ ಎಂದು ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ