ಸದ್ದಿಲ್ಲದೆ ಮುಗಿಯಿತಾ ಪಿಯು ಪಠ್ಯ ಪರಿಷ್ಕರಣೆ?
Team Udayavani, Jun 1, 2022, 12:20 AM IST
ಬೆಂಗಳೂರು: ರೋಹಿತ್ ಚಕ್ರತೀರ್ಥ ಸಮಿತಿಯು ಪರಿಷ್ಕರಣೆ ಮಾಡಿರುವ ಶಾಲಾ ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ, ಮತ್ತೊಂದು ವಿವಾದ ಸೃಷ್ಟಿಯಾಗಿದೆ.
ಶಿಕ್ಷಣ ಇಲಾಖೆಯು ಅನುಮತಿ ನೀಡುವ ಮೊದಲೇ ದ್ವಿತೀಯ ಪಿಯುಸಿ ಇತಿಹಾಸ ಪಠ್ಯವನ್ನು ಕೂಡ ಪರಿಷ್ಕರಣೆ ಮಾಡಿ ಮುಗಿಸಲಾಗಿದೆ. ಪರಿಷ್ಕೃತ ಪ್ರತಿಯು ಪಿಯು ಇಲಾಖೆ ಕಚೇರಿ ಸೇರಿದ್ದು, ಸರಕಾರ ಅನುಮತಿ ನೀಡದ ಕಾರಣ ಪ್ರಧಾನ ಕಾರ್ಯದರ್ಶಿಗಳಿಗೆ ನೀಡಬೇಕೋ ಬೇಡವೋ ಎಂಬ ಗೊಂದಲದಲ್ಲಿ ಇಲಾಖೆ ಸಿಲುಕಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ದ್ವಿತೀಯ ಪಿಯು ಇತಿಹಾಸ ಪಠ್ಯಪುಸ್ತಕದಲ್ಲಿ “ಹೊಸ ಧರ್ಮದ ಉದಯ’ ಎಂಬ ಅಧ್ಯಾಯವನ್ನು ಪರಿಷ್ಕರಣೆ ಮಾಡಿದೆ. ಬ್ರಾಹ್ಮಣ ಸಮುದಾಯಕ್ಕೆ ಕೆಟ್ಟ ಹೆಸರು ತರುವಂತಹ ಅಂಶಗಳಿದ್ದವು ಎಂಬ ಕಾರಣಕ್ಕೆ ಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಉನ್ನತ ಮೂಲಗಳು ಖಚಿತ ಪಡಿಸಿದೆ.
ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವರು ಇಲಾಖೆಗೆ ಕಳೆದ ಫೆಬ್ರ ವರಿಯಲ್ಲಿ ಟಿಪ್ಪಣಿ ಬರೆದಿದ್ದರು. ಆದರೆ, ಇಲಾಖೆಯು ಪರಿಷ್ಕರಣೆಗೆ ಅಧಿಕೃತವಾಗಿ ಆದೇಶ ಮಾಡಿಲ್ಲ. ಹೀಗಾಗಿ, ಪರಿಷ್ಕರಣೆ ಮಾಡಿರುವ ಪ್ರತಿಯು ಪಿಯು ಇಲಾಖೆಯಲ್ಲಿದೆ. ಪ್ರಧಾನ ಕಾರ್ಯದರ್ಶಿಗಳಿಗೆ ನೀಡುತ್ತಿಲ್ಲ ಎಂದು ತಿಳಿದು ಬಂದಿದೆ.
ದ್ವಿತೀಯ ಪಿಯುಸಿ ಇತಿಹಾಸ ಪಾಠದಲ್ಲಿ ಹೊಸ ಧರ್ಮಗಳ ಉದಯ ಅಧ್ಯಾಯದಲ್ಲಿ ಜಾತಿ ದ್ವೇಷ ಬಳಸುವ ಪಾಠವಿದೆ. ಮೇಲ್ವರ್ಗ, ಕೆಳ ವರ್ಗ ಎಂದು ಬಳಸಲಾಗಿದೆ. ಈ ಸಾಲನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಬೇರೆ ಇದ್ಯಾವ ಪಾಠವನ್ನು ಕೂಡ ಪರಿಷ್ಕರಣೆ ಮಾಡುತ್ತಿಲ್ಲ.
– ಬಿ.ಸಿ. ನಾಗೇಶ್, ಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್