ದಾವಣಗೆರೆ ಜಿಲ್ಲೆಯಲ್ಲಿಂದು ಆರು ಮಂದಿಗೆ ಕೋವಿಡ್-19 ಸೋಂಕು ದೃಢ
Team Udayavani, Jun 28, 2020, 8:34 PM IST
ದಾವಣಗೆರೆ: ಜಿಲ್ಲೆಯಲ್ಲಿ ಭಾನುವಾರ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಆರು ಜನರಲ್ಲಿ ಮಹಾಮಾರಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ದಾವಣಗೆರೆಯ ತರಳಬಾಳು ಬಡಾವಣೆ 37 ವರ್ಷದ ವ್ಯಕ್ತಿ (ರೋಗಿ ನಂಬರ್ 11950), 64 ವರ್ಷದ ವೃದ್ಧ (ರೋಗಿ ನಂಬರ್ 11951), 30 ವರ್ಷದ ಮಹಿಳೆ (ರೋಗಿ ನಂಬರ್ 11952), 55 ವರ್ಷದ ವ್ಯಕ್ತಿ (ರೋಗಿ ನಂಬರ್ 11953), ಹಗೇದಿಬ್ಬ ವೃತ್ತದ 68 ವರ್ಷದ ವೃದ್ಧ (ರೋಗಿ ನಂಬರ್ 11954), ಹರಿಹರದ ಗಂಗಾನಗರದ 65 ವರ್ಷದ ವೃದ್ಧ (ರೋಗಿ ನಂಬರ್ 11955)ನಲ್ಲಿ ಸೋಂಕು ಕಾಣಿಸಿಕೊಂಡಿದೆ.
ಕೋವಿಡ್-19 ಗುಣಮುಖರಾದ ಚನ್ನಗಿರಿಯ ಕುಂಬಾರಬೀದಿಯ 31 ವರ್ಷದ ವ್ಯಕ್ತಿ( ರೋಗಿ ನಂಬರ್ 8799) , ದಾವಣಗೆರೆಯ ಆನೆಕೊಂಡದ 39 ವರ್ಷದ ವ್ಯಕ್ತಿ(ರೋಗಿ ನಂಬರ್ 8800), ಚನ್ನಗಿರಿಯ ಕುಂಬಾರ ಬೀದಿಯ 56 ವರ್ಷದ ಮಹಿಳೆ (ರೋಗಿ ನಂಬರ್8803), ಚನ್ನಗಿರಿಯ ಕುಂಬಾರ ಬೀದಿಯ 68 ವರ್ಷದ ಮಹಿಳೆ (ರೋಗಿ ನಂಬರ್8804), ಚನ್ನಗಿರಿಯ ಕುಂಬಾರ ಬೀದಿಯ 59 ವರ್ಷದ ವ್ಯಕ್ತಿ(ರೋಗಿ ನಂಬರ್ 8805), ಚನ್ನಗಿರಿಯ ಗೌಡರ ಬೀದಿಯ 47 ವರ್ಷದ ವ್ಯಕ್ತಿ(ರೋಗಿ ನಂಬರ್ 8806) ಭಾನುವಾರ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ ಭಾನುವಾರ 18 ಜನರು ಸೇರಿ ಒಟ್ಟು 1,131 ಜನರು ಅವಲೋಕನದಲ್ಲಿದ್ದಾರೆ. 21 ಜನರು ಒಳಗೊಂಡಂತೆ 307 ಜನರು ಹೋಂ ಕ್ವಾರಂಟೈನ್ನಲ್ಲಿದ್ದಾರೆ. 8 ಜನರು ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ. ನಿನ್ನೆ 17 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದುವರೆಗೆ 787 ಜನರು ಆಸ್ಪತ್ರೆಯಲ್ಲಿದ್ದಾರೆ. ನಿನ್ನೆ 603 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. 577 ಮಾದರಿಗಳ ವರದಿ ನೆಗೆಟಿವ್ ಎಂಬುದಾಗಿ ಬಂದಿದೆ.
ಕೋವಿಡ್-19 ಪರೀಕ್ಷೆಗೆ ಸಂಬಂಧಿಸಿದಂತೆ ಕಳುಹಿಸಲಾಗಿರುವ 19,927 ಗಂಟಲು ದ್ರವ ಮಾದರಿಗಳಲ್ಲಿ 16,161 ಮಾದರಿಗಳ ವರದಿ ನೆಗೆಟಿವ್ ಆಗಿದೆ. ಇನ್ನೂ 3,471 ಮಾದರಿಗಳ ವರದಿ ಬರಬೇಕಾಗಿದೆ.
ಜಿಲ್ಲೆಯಲ್ಲಿ ಒಟ್ಟು 295 ಪ್ರಕರಣಗಳಲ್ಲಿ ಇದುವರೆಗೆ 246 ಜನರು ಬಿಡುಗಡೆಯಾಗಿದ್ದಾರೆ. ಏಳು ಜನರು ಮೃತಪಟ್ಟಿದ್ದು, 42 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ