ಕೋಟತಟ್ಟು: ನಿರ್ಮಾಣ ಹಂತದ ಮನೆಯ ಸ್ಲ್ಯಾಬ್ ಕುಸಿದು ಕಾರ್ಮಿಕ ಸಾವು; ಇನ್ನೋರ್ವನಿಗೆ ಗಾಯ
Team Udayavani, Nov 3, 2021, 5:37 PM IST
ಕೋಟ: ನಿರ್ಮಾಣ ಹಂತದಲ್ಲಿದ್ದ ಮನೆಯ ಸ್ಲ್ಯಾಬ್ ಕುಸಿದು ಕಾರ್ಮಿಕ ಮೃತಪಟ್ಟ ಘಟನೆ ಕೋಟತಟ್ಟು ಪಡುಕೆರೆಯ ಶಿರಸಿ ಮಾರಿಕಾಂಬಾ ದೇವಸ್ಥಾನದ ಸಮೀಪದಲ್ಲಿ ಬುಧವಾರ ಜರಗಿದೆ.
ಗಾರೆ ಕಾರ್ಮಿಕ ಸಾಲಿಗ್ರಾಮ ಗೆಂಡೆಕೆರೆ ನಿವಾಸಿ ಮಂಜುನಾಥ್ (36) ಮೃತ ವ್ಯಕ್ತಿ. ಸೆಂಟ್ರಿಂಗ್ ಕಾರ್ಮಿಕ ಅಚ್ಲಾಡಿ ನಿವಾಸಿ ಚೇತನ್ ಪೂಜಾರಿ (27) ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವೈಜ್ಞಾನಿಕ ಕಾಮಗಾರಿ ಆರೋಪ:
ಇಲ್ಲಿನ ರಾಜಶೇಖರ್ ಹಂದೆ ಎನ್ನುವರ ನಿರ್ಮಾಣ ಹಂತದ ಮನೆಯಲ್ಲಿ ಈ ದುರ್ಘಟನೆ ನಡೆದಿದ್ದು, ಕಟ್ಟಡಕ್ಕೆ ಯಾವುದೇ ಫಿಲ್ಲರ್, ಇನ್ನಿತರ ಆಧಾರವಿಲ್ಲದೆ ಸುಮಾರು 30 ಫೀಟ್ ಉದ್ದ, 3 ಫೀಟ್ ಆಗಲದ ಸ್ಲ್ಯಾಬ್ ಹಾಕಲಾಗಿತ್ತು. ಸ್ಲ್ಯಾಬ್ಗೆ ಅಳವಡಿಸಿದ್ದ ಕಂಬವನ್ನು ತೆರವುಗೊಳಿಸುತ್ತಿದ್ದಂತೆ ಗೋಡೆಯ ಒಂದು ಸಾಲು ಕಲ್ಲಿನ ಸಮೇತ ಸ್ಲ್ಯಾಬ್ ನೆಲಕ್ಕುರುಳಿದ್ದು, ಈ ಸಂದರ್ಭ ಕೆಳಗಡೆ ಗಾರೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಮಂಜುನಾಥ ಅವರ ತಲೆಯ ಮೇಲೆ ಹಾಗೂ ಸೆಂಟ್ರಿಂಗ್ ಸಹಾಯಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಚೇತನ್ನ ಕಾಲಿನ ಮೇಲೆ ಸ್ಲ್ಯಾಬ್ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಮಂಜುನಾಥ್ ಅವರನ್ನು ಸ್ಥಳೀಯ ಜೀವನ್ಮಿತ್ರ ಆಂಬುಲೆನ್ಸ್ ಮೂಲಕ ತತ್ಕ್ಷಣ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರು ಆಸ್ಪತ್ರೆ ತಲುಪುವಾಗ ಮೃತಪಟ್ಟಿದ್ದಾರೆ. ಚೇತನ್ ಪೂಜಾರಿಯವರ ಕಾಲಿಗೆ ಬಲವಾದ ಪೆಟ್ಟಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಅವೈಜ್ಞಾನಿಕ ಕಾಮಗಾರಿಯೇ ದುರಂತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಡ ಕುಟುಂಬ:
ಮೃತ ಮಂಜುನಾಥ ತಂದೆ, ತಾಯಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಇವರ ತಂದೆ ಗಂಭೀರವಾದ ಖಾಯಿಲೆಯಿಂದ ಬಳಲುತ್ತಿದ್ದು ಮನೆಗೆ ಆಧಾರದವಾಗಿದ್ದ ಮಗನನ್ನು ಕಳೆದುಕೊಂಡ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ.
ಕೋಟ ಪೊಲೀಸ್ ಠಾಣಾಧಿಕಾರಿ ಸಂತೋಷ್ ಬಿ.ಪಿ. ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಕೋಟ ಠಾಣೆಯಲ್ಲಿ ಮನೆಯ ಮಾಲೀಕರು, ಇಂಜಿನಿಯರ್, ಸೆಂಟ್ರಿಂಗ್ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Kundapur: ಬೈಕ್ ಢಿಕ್ಕಿ; ಸ್ಕೂಟರ್ ಸವಾರೆಗೆ ಗಾಯ
Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ
ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ
ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ