ಎಟಿಎಂನಲ್ಲಿ ಹೊಗೆ;ಕೆಲ ಕಾಲ ಆತಂಕ


Team Udayavani, Sep 26, 2021, 6:57 PM IST

atm

ಭಟ್ಕಳ: ಇಲ್ಲಿನ ರಂಗೀಕಟ್ಟೆಯಲ್ಲಿರುವ ಖಾಸಗಿ ಬ್ಯಾಂಕೊಂದರ ಎಟಿಎಂನಲ್ಲಿ ಹೊಗೆ ಕಾಣಿಸಿಕೊಂಡು ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ.

ಬ್ಯಾಂಕ್ ನ ಎಟಿಎಂ ಕೋಣೆಯಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣ ಗ್ರಾಹಕರೋರ್ವರು ಅಗ್ನಿ ಶಾಮಕ ದಳಕ್ಕೆ ಸುದ್ದಿ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ತಂಡ ಎಟಿಎಂ ಒಳಗೆ ಇರುವ ಬ್ಯಾಟರಿ ರೂಮಿನಿಂದ ಹೊಗೆ ಬರುವುದನ್ನು ಗಮನಿಸಿ ಬಾಗಿಲನ್ನು ಒಡೆದು ಅಗ್ನಿ ಅನಾಹುತವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಎಟಿಎಂ ನಲ್ಲಿ ಅಳವಡಿಸಲಾಗಿದ್ದ ಮೂರು ಬ್ಯಾಟರಿಗಳು, ಯು.ಪಿ.ಎಸ್.ಗೆ ಹಾನಿಯಾಗಿದೆ . ತಕ್ಷಣ ಹಾನಿಯಾದ ವಸ್ತುಗಳನ್ನು ಹೊರ ಹಾಕಿದ್ದರಿಂದ ಬೆಂಕಿ ಅನಾಹುತ ತಪ್ಪಿಸಲು ಸಾಧ್ಯವಾಗಿದೆ . ಒಟ್ಟೂ ಹಾನಿಯನ್ನು ಇನ್ನಷ್ಟೇ ಅಂದಾಜಿಸ ಬೇಕಿದೆ.

ನಿರ್ಲಕ್ಷ
ಶನಿವಾರ ಸಂಜೆಯೇ ರೂಮಿನಲ್ಲಿರುವ ಬ್ಯಾಟರಿಗಳಿಂದ ಸುಟ್ಟ ವಾಸನೆ ಬರುತ್ತಿರುವ ಕುರಿತು ಎಟಿಎಂ. ನಿರ್ವಾಹಕ ಎಜೆನ್ಸಿಗೆ ಹೇಳಲಾಗಿದ್ದರೂ ಸಹ ಅವರು ಬಂದು ಬ್ಯಾಟರಿಗಳನ್ನು ಪರೀಕ್ಷಿಸದೇ ಇರುವುದು ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಅಲ್ಲದೇ ಬ್ಯಾಟರಿಗಳನ್ನು ಬಂದ್ ಮಾಡಿದ್ದ ರೂಮಿನಲ್ಲಿಟ್ಟಿದ್ದ ಕಾರಣ ಬಿಸಿಯಾಗಿ ಅಗ್ನಿ ಅನಾಹುತ ಸಂಭವಿಸಿದೆ ಎಂದೂ ಹೇಳಲಾಗಿದೆ.

ಮಾಹಿತಿ ಅಲಭ್ಯ
ಎಟಿಎಂ. ರೂಮಿನಲ್ಲಿ ಅವಘಡ ಸಂಭವಿಸಿದರೆ ಮಾಹಿತಿ ನೀಡುವ ಕುರಿತು ಯಾವುದೇ ಸೂಚನಾ ಫಲಕವಿಲ್ಲ, ಕನಿಷ್ಟ ತುರ್ತು ಪೊಲೀಸ್, ಅಗ್ನಿಶಾಮಕ ಹಾಗೂ ಸಂಪರ್ಕ ಮಾಡಬೇಕಾಗ ಅಧಿಕಾರಿಗಳ ಇಲ್ಲವೇ ಏಜೆನ್ಸಿಯ ದೂರವಾಣಿ ಸಂಖ್ಯೆ ಸಹ ಇಲ್ಲ ಎನ್ನಲಾಗಿದೆ.

ಅಗ್ನಿಶಾಮಕ ದಳದ ಅಧಿಕಾರಿಗಳು ಈ ಕುರಿತು ಸೂಕ್ತ ಮಾಹಿತಿಯನ್ನು ಎಟಿಎಂ ಒಳಗಡೆಯಲ್ಲಿ ಒದಗಿಸುವಂತೆ ಎಲ್ಲಾ ಎಟಿಎಂ ನಿರ್ವಾಹಕರಿಗೆ ತಿಳಿಸುವುದಾಗಿ ಹೇಳಿದ್ದು, ಕನಿಷ್ಟ ಸಂಪರ್ಕಿಸಬೇಕಾದ ತುರ್ತು ಸಂಖ್ಯೆ ಗಳನ್ನು ನಮೂದಿಸುವುದು ಅಗತ್ಯ ಎಂದಿದ್ದಾರೆ .

ಟಾಪ್ ನ್ಯೂಸ್

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.