ಸಾವಿರಾರು ಹಾವುಗಳನ್ನು ರಕ್ಷಿಸಿದ ಸ್ನೇಕ್ ಡ್ಯಾನಿಯಲ್‌ ನಾಗರ ಹಾವು ಕಚ್ಚಿ ಸಾವು


Team Udayavani, Dec 16, 2020, 10:47 AM IST

ಸಾವಿರಾರು ಹಾವುಗಳನ್ನು ರಕ್ಷಿಸಿದ ಸ್ನೇಕ್ ಡ್ಯಾನಿಯಲ್‌ ನಾಗರ ಹಾವು ಕಚ್ಚಿ ಸಾವು

ಬಾಗಲಕೋಟೆ: ನಗರದ ಖ್ಯಾತ ಉರಗ ಪ್ರೇಮಿ, ಜಲಚರ ಪ್ರಾಣಿಗಳ ರಕ್ಷಕ ಡ್ಯಾನಿಯಲ್‌ ನ್ಯೂಟನ್‌ (43) ಹಾವು ಕಡಿತದಿಂದಲೇ ಮಂಗಳವಾರ ಮೃತಪಟ್ಟಿದ್ದಾರೆ. ಕಳೆದ ಹಲವು ವರ್ಷಗಳಿಂದ ಜಿಲ್ಲೆಯಾದ್ಯಂತ ಹಾವುಗಳನ್ನು ಹಿಡಿದು ಕಾಡಿಗೆ ಬಿಡುತ್ತಿದ್ದರು. ಅತ್ಯಂತ ವಿಷಕಾರಿ ಹಾವುಗಳನ್ನು ಹಿಡಿದು ಜನರ ಪ್ರಾಣ ಉಳಿಸುವಲ್ಲಿ ಶ್ರಮಿಸಿದ್ದರು.

ಅಲ್ಲದೇ ಹಳೆಯ ಕಾಲದ ಬಾವಿಗಳಲ್ಲಿ ಎಮ್ಮೆ, ಆಡು, ಕುರಿ ಬಿದ್ದಾಗಲೂ ಜೀವದ ಹಂಗು ತೊರೆದು ಅವುಗಳ ರಕ್ಷಿಸಿದ್ದರು. ಮಂಗಳವಾರ ತಾಲೂಕಿನ ಶಿಗಿಕೇರಿ ಕ್ರಾಸ್‌ ಬಳಿಯ ಕೆಎಚ್‌ಬಿ ಕಾಲೋನಿ ಮನೆಯೊಂದರಲ್ಲಿ ಹಾವು ಬಂದಿದೆ ಎಂದು ಕರೆ ಬಂದಾಗ ಕೂಡಲೇ ಅಲ್ಲಿಗೆ ಧಾವಿಸಿದ್ದ ಡ್ಯಾನಿಯಲ್‌ ನಾಗರಹಾವು ಹಿಡಿದಿದ್ದರು. ಬಳಿಕ ಅದನ್ನು ಕಾಡಿಗೆ ಬಿಡಲೆಂದು
ಚೀಲದಲ್ಲಿ ಹಾಕುವ ವೇಳೆ ಹಾವು ಕಚ್ಚಿದ್ದರಿಂದ ಕೂಡಲೇ ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಅಸುನೀಗಿದ್ದಾರೆ.

ಡ್ಯಾನಿಯಲ್‌ ಈವರೆಗೆ 3411 ಹಾವುಗಳನ್ನು ಹಿಡಿದು ಕಾಡಿಗೆ ಬಿಟ್ಟಿದ್ದು, ಅದರಲ್ಲಿ 1026 ನಾಗರ ಹಾವುಗಳಿದ್ದವು. ಹಾವು ಹಿಡಿಯುವ ವೇಳೆ ಒಟ್ಟು 74 ಬಾರಿ ಅವರಿಗೆ ವಿವಿಧ ಜಾತಿಯ ಹಾವುಗಳು ಕಚ್ಚಿದ್ದವು. ಕಳೆದ ಆಗಸ್ಟ್‌ ತಿಂಗಳಲ್ಲೂ ಹಾವು ಹಿಡಿಯುವಾಗ ಮಿಡಿ ನಾಗರಹಾವು ಕಚ್ಚಿ ತೀವ್ರ ಅಸ್ವಸ್ಥಗೊಂಡಿದ್ದರು. ಆಗ ಸುಮಾರು ದಿನ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ಪಡೆದು
ಮನೆಗೆ ಬಂದಿದ್ದರು.

ಇದನ್ನೂ ಓದಿ:ಪಾಂಟಿಂಗ್‌ ಸೆಂಚುರಿ ದಾಖಲೆ ಮುರಿಯುವತ್ತ ವಿರಾಟ್‌ ಕೊಹ್ಲಿ

ಎರಡು ತಿಂಗಳ ಹಿಂದೆ ಮದುವೆ: ಅಪ್ಪಟ ದೇಶಭಕ್ತಿ ಹೊಂದಿದ್ದ ಡ್ಯಾನಿಯಲ್‌, ಅಪಾರ ಅಧ್ಯಯನ ಕೂಡ ಮಾಡಿದ್ದರು. ಎರಡು ತಿಂಗಳ ಹಿಂದಷ್ಟೇ ತಾವು ಪ್ರೀತಿಸಿದ ಯುವತಿಯೊಂದಿಗೆ ಅಂತರ್ಜಾತಿ ವಿವಾಹ ಕೂಡ ಆಗಿದ್ದರು. ಹಾವುಗಳನ್ನು
ರಕ್ಷಿಸುತ್ತಿದ್ದ ಡ್ಯಾನಿಯಲ್‌ ಅದೇ ಹಾವು ಕಡಿತದಿಂದ ಮೃತಪಟ್ಟಿರುವುದು ದುರಂತ. ಡ್ಯಾನಿಯಲ್‌ ನಿಧನಕ್ಕೆ ಬಾಗಲಕೋಟೆ ಶಾಸಕ ಡಾ|ವೀರಣ್ಣ ಚರಂತಿಮಠ, ಜಿಲ್ಲಾಧಿಕಾರಿ ಡಾ|ಕೆ.ರಾಜೇಂದ್ರ, ವಿಕಲಚೇತನರ ಹೋರಾಟಗಾರ ಘನಶ್ಯಾಂ ಬಾಂಡಗೆ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.