
ಮಂಗಳೂರಲ್ಲಿ ಸೋಲಾರ್ ಪಾರ್ಕ್: ಸಿಎಂ ಸಮ್ಮುಖ 52 ಸಾವಿರ ಕೋ.ರೂ. ಒಪ್ಪಂದಕ್ಕೆ ಸಹಿ
Team Udayavani, Jun 7, 2022, 7:15 AM IST

ಬೆಂಗಳೂರು: ಮಂಗಳೂರಿನಲ್ಲಿ ಹೈಡ್ರೋಜನ್ ಮತ್ತು ಅಮೋನಿಯಾ ಘಟಕ, ಪೂರಕವಾಗಿ ಸೋಲಾರ್ಘಟಕ ಸ್ಥಾಪನೆಗೆ 52 ಸಾವಿರ ಕೋಟಿ ರೂ. ಹೂಡಿಕೆ ಮಾಡುವ ಸಂಬಂಧ ಗುರುಗ್ರಾಮ ಮೂಲದ ಆಕೆ¾ ಕ್ಲೀನ್ ಟೆಕ್ ಸೊಲ್ಯುಷನ್ಸ್ ಕಂಪೆನಿಯು ರಾಜ್ಯ ಸರಕಾರದೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಸಮ್ಮುಖ ದಲ್ಲಿ ಸೋಮವಾರ ಮಹತ್ವದ ಒಪ್ಪಂದ ಮಾಡಿಕೊಂಡಿದೆ.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ| ಇ.ವಿ. ರಮಣ ರೆಡ್ಡಿ ಮತ್ತು ಆಕೆ¾ ಗ್ರೂಪ್ ಕಂಪೆನಿಯ ಸಿಒಒ ಸಂದೀಪ್ ಕಶ್ಯಪ್ ಅವರು ಒಪ್ಪಂದಕ್ಕೆ ಸಹಿ ಮಾಡಿದರು.
ಕರ್ನಾಟಕವು ನವೀಕರಿಸ ಬಹು ದಾದ ಇಂಧನ ಕ್ಷೇತ್ರದಲ್ಲಿ ಕರ್ನಾಟಕ ಮಂಚೂಣಿಯಲ್ಲಿದೆ. ರಾಜ್ಯ ಸರಕಾರವು ಹಸುರು ಜಲಜನಕ ನೀತಿ ಯನ್ನು ರೂಪಿಸುತ್ತಿದ್ದು, ಇದರ ಲಾಭ ಪಡೆದುಕೊಳ್ಳುವಂತೆ ಆಕೆ¾ ಗ್ರೂಪ್ನವರಿಗೆ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಸಲಹೆ ನೀಡಿದರು.
ಕರ್ನಾಟಕ ರಾಜ್ಯವು ಸದಾ ಹೊಸ ತಂತ್ರಜ್ಞಾನ, ಭವಿಷ್ಯದ ಯೋಜನೆಗಳಿಗೆ ಉತ್ತೇಜನ ನೀಡುತ್ತ ಬಂದಿದೆ. ಈ ಯೋಜನೆ ಅನುಷ್ಠಾನಕ್ಕೆ ಸರಕಾರ ತ್ವರಿತವಾಗಿ ಎಲ್ಲ ಅಗತ್ಯ ಬೆಂಬಲ ನೀಡಲಿದೆ. ನೀವು ಕೂಡ ಸಕಾಲದಲ್ಲಿ ಯೋಜನೆ ಜಾರಿಗೊಳಿಸಿ ಎಂದರು.
ಆಕೆ¾ ಗ್ರೂಪ್ ಜಾಗತಿಕ ಮಟ್ಟದಲ್ಲಿ ಹೈಡ್ರೋಜನ್ -ಅಮೋನಿಯ ಘಟಕ ಗಳ ಸ್ಥಾಪನೆಯಲ್ಲಿ ಮುಂಚೂಣಿ ಯಲ್ಲಿದೆ. ರಾಜಸ್ಥಾನದ ಬಿಕಾನೇರ್ನಲ್ಲಿ ವಿಶ್ವದ ಮೊದಲ ಹೈಡ್ರೋಜನ್ ಅಮೋನಿಯ, ಸೋಲಾರ್ ಘಟಕ ವನ್ನು ಸ್ಥಾಪಿಸಿದ್ದು, ಕಾರ್ಯಾರಂಭ ಮಾಡಿದೆ ಎಂದು ಆಕೆ¾ ಗ್ರೂಪ್ನ ಉಪಾಧ್ಯಕ್ಷ ಶಶಿ ಶೇಖರ್ ತಿಳಿಸಿದರು.
ಇಂಧನ ಸಚಿವ ವಿ. ಸುನಿಲ್ ಕುಮಾರ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ, ಆಕೆ¾ ಗ್ರೂಪ್ನ ಅಧಿಕಾರಿಗಳಾದ ಎಂ.ವಿ.ವಿ.ಎಸ್. ರೆಡ್ಡಿ, ಅರುಣ್ ಚೋಪ್ರಾ ಉಪಸ್ಥಿತರಿದ್ದರು.
ಬಂಡವಾಳ ಹೂಡಿಕೆಗೆ ಕರ್ನಾಟಕ ಪ್ರಶಸ್ತ ತಾಣ ಎಂಬುದು ಮತ್ತೂಮ್ಮೆ ಸಾಬೀತಾಗಿದೆ. ಕಳೆದ ಮೂರು ತ್ತೈಮಾಸಿಕ ಅವಧಿಯಲ್ಲಿ ಕರ್ನಾಟಕಕ್ಕೆ ಹರಿದುಬಂದಿರುವ ಎಫ್ಡಿಐ ಮೊತ್ತವೇ ಇದಕ್ಕೆ ಸಾಕ್ಷಿ.
– ಬಸವರಾಜ್ ಬೊಮ್ಮಾಯಿ,
ಮುಖ್ಯಮಂತ್ರಿ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
