2025ರಲ್ಲಿ ಅಪ್ಪಳಿಸಲಿದೆ ಸೌರ ಚಂಡಮಾರುತ?- ಅಂತರ್ಜಾಲ ವ್ಯವಸ್ಥೆಯ ಮೇಲೆ ಭಾರಿ ಪರಿಣಾಮ


Team Udayavani, Jul 13, 2023, 7:45 AM IST

solar

ವಾಷಿಂಗ್ಟನ್‌: 2025ರಲ್ಲಿ ಭೂಮಿಗೆ ಸೌರ ಚಂಡಮಾರುತವು ಅಪ್ಪಳಿಸಲಿದ್ದು, ಇದರಿಂದ ಅಂತರ್ಜಾಲ ವ್ಯವಸ್ಥೆಯ ಮೇಲೆ ಭಾರಿ ಪರಿಣಾಮ ಬೀರಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಈ ಕುರಿತು ನಾಸಾ ವಿಜ್ಞಾನಿಗಳು ಇದುವರೆಗೂ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಈ ಹಿಂದೆ ಸೌರ ಚಂಡಮಾರುತ ಅಪ್ಪಳಿಸಿದ ಪರಿಣಾಮ 1859ರಲ್ಲಿ ಟೆಲಿಗ್ರಾಫ್ ಕೇಬಲ್‌ಗ‌ಳಲ್ಲಿ ಕಿಡಿ ಕಾಣಿಸಿತು. 1989ರಲ್ಲಿ ಇದರ ಪರಿಣಾಮ ಅನೇಕ ಗಂಟೆಗಳು ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಿತ್ತು.

“ಸೌರ ಚಂಡಮಾರುತದ ತೀವ್ರ ಪರಿಸ್ಥಿತಿಯನ್ನು ನಾವು ಅನುಭವಿಸಿಲ್ಲ ಹಾಗೂ ಇದಕ್ಕೆ ನಮ್ಮ ಮೂಲಸೌಕರ್ಯ ವ್ಯವಸ್ಥೆಯು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದು ತಿಳಿದಿಲ್ಲ. ನಮ್ಮ ವೈಫ‌ಲ್ಯ ಪರೀಕ್ಷೆಯು ಸಹ ಅಂತಹ ಸನ್ನಿವೇಶಗಳನ್ನು ಒಳಗೊಂಡಿಲ್ಲ’ ಎಂದು ಕ್ಯಾಲಿಫೋರ್ನಿಯ ವಿಶ್ವವಿದ್ಯಾಲಯದ ಕಂಪ್ಯೂಟರ್‌ ಸೈನ್ಸ್‌ ಪ್ರಾಧ್ಯಾಪಕಿ ಸಂಗೀತಾ ಅಬ್ದು ಜ್ಯೋತಿ ಹೇಳಿದ್ದಾರೆ.

“ತೀವ್ರ ಸೌರ ಚಂಡಮಾರುತವು ದೂರ ಸಂಪರ್ಕಕ್ಕೆ ಅಡ್ಡಿಪಡಿಸಬಹುದಾದ ಸಾಗರದೊಳಗಿನ ಸಂವಹನ ಕೇಬಲ್‌ಗ‌ಳಂತಹ ದೊಡ್ಡ ಪ್ರಮಾಣದ ಮೂಲಸೌಕರ್ಯಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಇದರಿಂದ ಅಂತರ್ಜಾಲ ವ್ಯವಸ್ಥೆಯ ಮೇಲೆ ದೊಡ್ಡ ಮಟ್ಟದ ಪರಿಣಾಮ ಬೀರುವ ಸಾಧ್ಯತೆಯಿದೆ’ ಎಂದು ತಿಳಿಸಿದ್ದಾರೆ.

ಕೆಲವು ತಿಂಗಳ ಕಾಲ ಅಂತರ್ಜಾಲ ಇಲ್ಲದೇ ವ್ಯವಸ್ಥೆ ಅಲ್ಲೋಲ-ಕಲ್ಲೋಲ ಆಗಲಿದೆ. ಉದಾಹರಣೆಗೆ, ಒಂದು ದಿನ ಅಮೆರಿಕದಲ್ಲಿ ಅಂತರ್ಜಾಲ ಇಲ್ಲದಿದ್ದರೆ 1,100 ಕೋಟಿ ಡಾಲರ್‌ ನಷ್ಟವಾಗಲಿದೆ. ಸೌರ ಚಂಡಮಾರುತದಿಂದ ಆರ್ಥಿಕತೆ ಮೇಲೆ ಹೊಡೆತ ಬೀಳಲಿದೆ ಎನ್ನಲಾಗಿದೆ.

ಭೂಮಿಯೊಳಗಿನ ತಾಪಮಾನ ಹೆಚ್ಚಳ
ಭೂಮಿಯಾಳದಲ್ಲಿ ತಾಪಮಾನ ದಿನೇದಿನೆ ಹೆಚ್ಚುತ್ತಿದ್ದು, ಇದರಿಂದ ದೊಡ್ಡ ಅಪಾರ್ಟ್‌ಮೆಂಟ್‌ಗಳು, ಕಚೇರಿಗಳು ಸೇರಿದಂತೆ ಹೆಚ್ಚಿನ ಅಂತಸ್ತು ಹೊಂದಿರುವ ದೊಡ್ಡ ಕಟ್ಟಡಗಳ ಮೇಲೆ ಪರಿಣಾಮ ಬೀರಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಸಂಶೋಧಕರ ಪ್ರಕಾರ, ಪ್ರಪಂಚದಾದ್ಯಂತ ನಗರ ಪ್ರದೇಶಗಳಲ್ಲಿ ದೊಡ್ಡ ಕಟ್ಟಡಗಳಿಂದ ಹಾಗೂ ಸುರಂಗ ಮಾರ್ಗದ ಸಾರಿಗೆಯಿಂದ ಹೊರಸೂಸುವ ಬಿಸಿ ತಾಪದ ಪರಿಣಾಮ, ಪ್ರತಿ ದಶಕದಲ್ಲಿ ಭೂಮಿಯ ತಾಪಮಾನ 0.1ರಿಂದ 2.5 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗುತ್ತಿದೆ. ತಾಪಮಾನ ಹೆಚ್ಚಳವನ್ನು ತಡೆದುಕೊಳ್ಳುವ ರೀತಿಯಲ್ಲಿ ದೊಡ್ಡ ಕಟ್ಟಡಗಳನ್ನು ನಿರ್ಮಿಸಿಲ್ಲ. ಹೀಗಾಗಿ ಕಟ್ಟಡದ ತಳಪಾಯದ ಮೇಲೆ ಪರಿಣಾಮ ಹಾಗೂ ಕೆಲವೊಮ್ಮೆ ಗೋಡೆಗಳಲ್ಲಿ ಬಿರುಕು ಕಾಣಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.