ಕೆಲ ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಇಲ್ಲ; ಗೋವಾ ಸಿಎಂ ಸಾವಂತ್
Team Udayavani, Oct 7, 2021, 4:49 PM IST
ಪಣಜಿ: ಬಿಜೆಪಿಯ ಕೆಲ ಶಾಸಕರಿಗೆ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಸ್ಫರ್ಧಿಸಲು ಟಿಕೇಟ್ ಲಭಿಸುವುದಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿಕೆ ನೀಡಿದ್ದಾರೆ.
ಬಿಜೆಪಿಯು ರಾಷ್ಟ್ರೀಯ ಪಕ್ಷವಾಗಿದ್ದು, ಇದರಿಂದಾಗಿ ಎಲ್ಲ ನಿರ್ಣಯವನ್ನು ಕೇಂದ್ರ ಮಟ್ಟದಲ್ಲಿಯೇ ತೆಗೆದುಕೊಳ್ಳಲಾಗುತ್ತದೆ. ರಾಜ್ಯದಿಂದ ಕೇವಲ ಶಿಫಾರಸ್ಸು ಮಾಡಲಾಗುತ್ತದೆ. ಹಾಲಿ ಶಾಸಕರಿಗೆಲ್ಲ ಚುನಾವಣೆಗೆ ಸ್ಫರ್ಧಿಸಲು ಟಿಕೇಟ್ ನೀಡಲೇಬೇಕು ಎಂದಿಲ್ಲ. ಬಿಜೆಪಿ ಪುನಃ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕಿದೆ. ಇದರಿಂದಾಗಿ ಕೆಲ ಬದಲಾವಣೆಗಳನ್ನು ಮಾಡಲೇಬೇಕಾಗುತ್ತದೆ. ಸದ್ಯ ಯಾರು ಶಾಸಕರಿದ್ದಾರೋ ಅವರಿಗೆಲ್ಲ ಮತ್ತೆ ಚುನಾವಣೆಗೆ ಸ್ಫರ್ಧಿಸಲು ಅವಕಾಶ ಲಭಿಸಲಿದೆ ಎಂದು ಹೇಳಲು ಸಾಧ್ಯವಿಲ್ಲ. ಈ ಕುರಿತು ಸಂಸದೀಯ ಮಂಡಳಿ ಅಂತಿಮ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಪ್ರತಿಕ್ರಿಯೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಈ ಹೇಳಿಕೆಯು ರಾಜ್ಯ ಬಿಜೆಪಿ ಶಾಸಕರಲ್ಲಿ ಆತಂಕ ಹೆಚ್ಚುವಂತೆ ಮಾಡಿದ್ದು. ತಾವು ಹಾಲಿ ಶಾಸಕರಾಗಿದ್ದರೂ ಕೂಡ ಮತ್ತೆ ಚುನಾವಣೆಗೆ ಸ್ಫರ್ಧಿಸಲು ಅವಕಾಶ ಲಭಿಸುವುದು ಸದ್ಯಕ್ಕೆ ಖಾತ್ರಿ ಇಲ್ಲ ಎಂಬಂತಾಗಿದೆ.
ಗೋವಾ ದಲ್ಲಿ ಮತ್ತೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಏರಲು ಬಿಜೆಪಿ ರಣತಂತ್ರಗಳನ್ನು ಈಗಾಗಲೇ ಆರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ