ಹಣಕಾಸು ಅವ್ಯವಹಾರ ಕೇಸ್-ವಿಚಾರಣೆಗೆ ಹಾಜರಾಗಲು ಇನ್ನಷ್ಟು ಕಾಲಾವಕಾಶ ಕೊಡಿ: ಇ.ಡಿ.ಗೆ ಸೋನಿಯಾ
ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸೋನಿಯಾ ಮತ್ತು ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿತ್ತು.
Team Udayavani, Jun 22, 2022, 4:07 PM IST
ನವದೆಹಲಿ:ಕೋವಿಡ್ 19 ಮತ್ತು ಶ್ವಾಸಕೋಶದ ಸೋಂಕಿನಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ವಿಚಾರಣೆಗೆ ಹಾಜರಾಗುವುದನ್ನು ಕೆಲವು ವಾರಗಳ ಕಾಲ ಮುಂದೂಡಬೇಕೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೊಮ್ಮೆ ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಉಡುಪಿ: ಮೆಹಂದಿ ಸಂಭ್ರಮದಲ್ಲಿ ನೃತ್ಯ ಮಾಡುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
ಕೋವಿಡ್ ಮತ್ತು ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದರಿಂದ, ಸೋನಿಯಾ ಗಾಂಧಿ ಅವರು ತಾನು ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಕೆಲವು ವಾರಗಳ ಕಾಲ ವಿಚಾರಣೆಗೆ ಹಾಜರಾಗುವುದನ್ನು ಮುಂದೂಡಬೇಕೆಂದು ಪತ್ರ ಬರೆದಿರುವುದಾಗಿ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಸೋಮವಾರ ಡಿಸ್ ಚಾರ್ಜ್ ಆಗಿದ್ದರು. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸೋನಿಯಾ ಮತ್ತು ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿತ್ತು.
ನ್ಯಾಷನಲ್ ಹೆರಾಲ್ಡ್ ನ ಹಣಕಾಸು ಅವ್ಯವಹಾರ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸತತ ದಿನಗಳ ಕಾಲ 50ಗಂಟೆಗಿಂತಲೂ ಹೆಚ್ಚು ಸಮಯ ವಿಚಾರಣೆಗೊಳಪಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ