ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ
ಅಬ್ದುಲ್ಲಾ ಖಾನ್ ಮತ್ತು ಅದೀಬ್ ಖಾನ್ ಸೀತಾಪುರ್ ಜಿಲ್ಲಾ ಕಾರಾಗೃಹಕ್ಕೆ ಬಂದಿದ್ದು, ತಂದೆಯ ಬಿಡುಗಡೆಗೆ ಸಂತಸ ವ್ಯಕ್ತಪಡಿಸಿದ್ದಾರೆ.
Team Udayavani, May 20, 2022, 10:15 AM IST
ಲಕ್ನೋ: ವಂಚನೆ ಪ್ರಕರಣದಲ್ಲಿ ಸುಮಾರು 2 ವರ್ಷಗಳ ಕಾಲ ಜೈಲಿನಲ್ಲಿದ್ದ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಅಜಂ ಖಾನ್ ಶುಕ್ರವಾರ (ಮೇ 20) ಸೀತಾಪುರ್ ಜಿಲ್ಲೆಯ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ
ನನ್ನ ತಂದೆಗೆ ಸುಪ್ರೀಂಕೋರ್ಟ್ ನ್ಯಾಯ ನೀಡಿದೆ ಎಂದು ಅಜಂ ಖಾನ್ ಪುತ್ರ ಅಬ್ದುಲ್ಲಾ ಖಾನ್ ತಂದೆ ಅಜಂ ಖಾನ್ ಬಿಡುಗಡೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದರು. ಇಂದು ಬೆಳಗ್ಗೆ ಮಕ್ಕಳಾದ ಅಬ್ದುಲ್ಲಾ ಖಾನ್ ಮತ್ತು ಅದೀಬ್ ಖಾನ್ ಸೀತಾಪುರ್ ಜಿಲ್ಲಾ ಕಾರಾಗೃಹಕ್ಕೆ ಬಂದಿದ್ದು, ತಂದೆಯ ಬಿಡುಗಡೆಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಉತ್ತಪ್ರದೇಶದ ಕೋಟ್ವಾಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗುರುವಾರ ಅಜಂ ಖಾನ್ ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಸುಪ್ರೀಂಕೋರ್ಟ್ ನ ಜಸ್ಟೀಸ್ ಎಲ್ ನಾಗೇಶ್ವರ ರಾವ್, ಜಸ್ಟೀಸ್ ಬಿಆರ್ ಗವಾಯಿ ಹಾಗೂ ಜಸ್ಟೀಸ್ ಎಎಸ್ ಬೋಪಣ್ಣ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಎರಡು ವಾರದೊಳಗೆ ಸಂಬಂಧಪಟ್ಟ ಸ್ಥಳೀಯ ಕೋರ್ಟ್ ನಲ್ಲಿ ರೆಗ್ಯುಲರ್ ಜಾಮೀನಿಗೆ ಅರ್ಜಿ ಸಲ್ಲಿಸಲು ಅನುಮತಿ ನೀಡಿದೆ.
#WATCH | Samajwadi Party leader Azam Khan released from Sitapur district jail, in a matter concerning Kotwali PS in Rampur pic.twitter.com/2TDWwFHi4W
— ANI UP/Uttarakhand (@ANINewsUP) May 20, 2022
ಮಂಗಳವಾರ ಅಜಂ ಖಾನ್ ಜಾಮೀನು ಅರ್ಜಿಯ ವಿಚಾರಣೆ ವೇಳೆ ಉತ್ತರಪ್ರದೇಶದ ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು ಜಾಮೀನು ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಕರಣದ ಬಗ್ಗೆ ವಾದ, ಪ್ರತಿವಾದ ಆಲಿಸಿದ್ದ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ