ಅಧಿಕಾರಿಗೆ ಎಲ್ಲರೆದುರೇ ಗಂಭೀರವಾಗಿ ಕ್ಲಾಸ್ ತೆಗೆದುಕೊಂಡ ಸ್ಪೀಕರ್ ಕಾಗೇರಿ


Team Udayavani, Dec 30, 2021, 5:25 PM IST

1-ddsa

ಶಿರಸಿ: ಸಹಕಾರಿ‌ ಇಲಾಖೆಯ ಅಧಿಕಾರಿಯೋರ್ವರಿಗೆ ಇತರ ಅಧಿಕಾರಿಗಳೆಲ್ಲರ ಎದುರೇ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗಂಭೀರವಾಗಿ ಕ್ಲಾಸ್ ‌ತೆಗೆದುಕೊಂಡ ಪ್ರಸಂಗ‌ ಗುರುವಾರ ನಡೆಯಿತು.

ನಗರದ ಮಿನಿ ವಿಧಾ‌ನ ಸೌಧದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ವೇಳೆ ಸಹಕಾರಿ‌ ಇಲಾಖೆಯ ಅಧಿಕಾರಿ‌ ಲಿಂಗರಾಜು ಅವರ ಬಗ್ಗೆ ದೂರುಗಳಿವೆ ಎಂದು ಪ್ರಸ್ತಾಪಿಸಿ ಖಡಕ್ ಎಚ್ಚರಿಕೆ ಕೂಡ ನೀಡಿದರು.

ಶಿರಸಿ ಸಿದ್ದಾಪುರ ನನ್ನ‌ ಕ್ಷೇತ್ರ. ನಿಮ್ಮ ವರ್ತನೆ, ನಡುವಳಿಕೆ ಚೆನ್ನಾಗಿದ್ದರೆ ನನಗೂ‌ ಖುಷಿ. ಆದರೆ, ತಪ್ಪಾಗಿ ನಡೆದರೆ ಶಾಸನ ಸಭೆಯಲ್ಲೇ ನೇರವಾಗಿ ಇಲಾಖೆಯ‌ ಮುಖ್ಯಸ್ಥರ ಗಮನಕ್ಕೆ ತರುವದಾಗಿ ಹೇಳಿದರು. ಮಾರ್ಚ್ ಕೊನೆಯೊಳಗೆ ಎಲ್ಲ ಇಲಾಖೆ ಕಾರ್ಯ ಮುಗಿಸಬೇಕು. ಲೊಕೋಪಯೋಗಿ ಇಲಾಖೆ, ಪಂಚಾಯತ ರಾಜ್, ಪಿಎಂಜಿಎಸ್ ವೈ ಸೇರಿದಂತೆ‌ ಎಲ್ಲರೂ ಅನುದಾನ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಹಣ ವಾಪಸ್ ಹೋಗಬಾರದು ಎಂದರು.

ಅತಿವೃಷ್ಟಿ, ಕೋವಿಡ್ ಗೆ ಜನರಿಗೆ‌ ಪರಿಹಾರ ನೀಡಿದ್ದೇವೆ. 12.5 ಕೋಟಿ‌ ರೂ. ಲೊಕೋಪಯೋಗಿ, 15  ಕೋಟಿ ಜಿಲ್ಲಾ ಪಂಚಾಯತಿಗೆ ಅನುದಾನ ಬಂದಿದೆ. ಬೇರೆ ಬೇರೆ ಅನುದಾನ ಕೂಡ ಬಂದಿದೆ. ಕಾಲ ಮಿತಿಯಲ್ಲಿ ಕಾಮಗಾರಿ ಪೂರ್ಣ ಆಗಬೇಕು ಎಂದರು.

ಶಿರಸಿ ಜಾತ್ರೆಗೆ ಸಿದ್ದತೆ‌ ಮಾಡಿಕೊಳ್ಳಬೇಕು. ಮಾರಿಕಾಂಬಾ ದೇವಸ್ಥಾನ, ಬಾಬುದಾರರ ಜೊತೆಗೂ ಜಾತ್ರೆ ಸಿದ್ದತೆ ಕೂಡ ಮಾಡಿಕೊಳ್ಳಬೇಕು ಎಂದು ಶೀಘ್ರವಾಗಿ ಸಭೆ ನಡೆಸುತ್ತೇವೆ. ಕೋವಿಡ್ ಆತಂಕ ಕೂಡ ಇದೆ ಎಂದ ಕಾಗೇರಿ, ಕರೋನಾ‌ ಮೂರನೆ ಅಲೆಗೆ ತಡೆ ನೀಡಲು ಹಾಗೂ ಆಸ್ಪತ್ರೆ ಸಿದ್ದತೆ ಕುರಿತೂ ಸಮಾಲೋಚನೆ ಮಾಡಿದ್ದೇವೆ. ಎರಡನೇ ಹಂತದ ಲಸಿಕೆ ಶೇ.೭ ಪ್ರಮಾಣ ಬಾಕಿ ಇದೆ. ಜನರಲ್ಲಿ‌ ಜಾಗೃತಿ‌ ಕೂಡ ಮೂಡಿಸಿಕೊಳ್ಳಬೇಕು. ಕೊರೋನಾ ಮೂರನೇ ಅಲೆ ತಡೆಯಲು ಎಚ್ಚರಿಕೆ ಬೇಕಾಗಿದೆ ಎಂದೂ ಹೇಳಿದರು.

ರಾಷ್ಟ್ರೀಯ ಸಾಗಾರ ಮಾಲಾ ಯೋಜನೆಯಲ್ಲಿ ಕುಮಟಾ‌ ರಸ್ತೆ ಅಭಿವೃದ್ದಿಗಾಗಿ 300 ೦ ಜನ ಕೆಲಸ ಮಾಡುತ್ತಿದ್ದಾರೆ. ಇನ್ನೂ ವೇಗ ಆಗಬೇಕು. ಬೆಳಗಾವಿಯಲ್ಲಿ ನಿತಿನ್ ಗಡ್ಕರಿ ಅವರು ಶಿರಸಿ ಹಾವೇರಿ ರಸ್ತೆಯ ಭೂಮಿ‌ ಪೂಜೆ ಕೂಡ ಮಾಡಲಿದ್ದಾರೆ. ಶಿರಸಿ ಬಿಸಲಕೊಪ್ಪ ಹಾವೇರಿ ತನಕ ಒಟ್ಟೂ 75 ಕಿಮಿಗೆ 287 ಕೋಟಿ ರೂ. ಹಣ ಮಂಜೂರಿ ಆಗಿದೆ. 174 ಕೋಟಿಗೆ ಟೆಂಡರ್ ಆಗಿದೆ‌. ಶಿರಸಿ ಬೈಪಾಸ್ ಪ್ರಸ್ತಾವ ಕೂಡ ಇದೆ ಎಂದರು. ಲವ್ ಜಿಹಾದ್, ಹೆಣ್ಮಕ್ಕಳ ನಾಪತ್ತೆ ಪ್ರಕರಣವನ್ನು‌ ಪೊಲೀಸ ಇಲಾಖೆ ಗಂಭೀರವಾಗಿ ತೆಗೆದುಕೊಳ್ಳಲು ಸೂಚಿಸಿದ್ದೇವೆ‌. ಪೊಲೀಸ ಇಲಾಖೆ ಸಡಿಲವಾಗಿದೆ ಎಂಬ ಸಂದೇಶ ಹೋಗಬಾರದು ಎಂದೂ ಹೇಳಿದರು.

ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಆಯುಕ್ತೆ ಆಕೃತಿ ಬನ್ಸಾಲ, ತಹಸೀಲ್ದಾರ ಎಂ.ಆರ್.ಕುಲಕರ್ಣಿ, ತೋಟಗಾರಿಕಾ ಅಧಿಕಾರಿ ಬಿ.ಪಿ.ಸತೀಶ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.