ಸಂತ್ ಫ್ರಾನ್ಸಿಸ್ ಜೇವಿಯರ್ ಫೆಸ್ತನ ವಿಶೇಷ ಪ್ರಾರ್ಥನಾ ಸಭೆ: ಸಿಎಂ ಸಾವಂತ್ ಭಾಗಿ


Team Udayavani, Dec 3, 2021, 5:46 PM IST

1-aa

ಪಣಜಿ: ನಾವು ಪವಿತ್ರ ಸ್ಥಳ ಮಾತ್ರವಲ್ಲದೆಯೇ ನಮ್ಮ ಕೇಂದ್ರ ಸರ್ಕಾರದಿಂದ, ಭಾರತದ ಪುರಾತತ್ವ ಸಮೀಕ್ಷೆ ಗುರುತಿಸಲ್ಪಟ್ಟ ವಿಶ್ವಪ್ರಸಿದ್ಧ ಪರಂಪರೆಯ ಪ್ರದೇಶದಲ್ಲಿ ನಾವು ಕೂಡಿದ್ದೇವೆ. ಗೋವಾದಲ್ಲಿ ಪರಂಪರೆಯ ಪವಿತ್ರತೆಯನ್ನು ಉಳಿಸಿಕೊಳ್ಳಬೇಕು. ಪರಪರೆಯ ಸಂರಕ್ಷಣೆಗೆ ಕಾನೂನು ಬಾಹಿರ ಮತ್ತು ಹಾನಿಕಾರಕವಾದ ಯಾವುದೇ ಕ್ರಮಗಳು ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಅಧಿಕಾರದಲ್ಲಿರುವ ಎಲ್ಲರಲ್ಲೂ ಮನವಿ ಮಾಡುತ್ತೇನೆ ಎಂದು ಗೋವಾ ದಿಯು ದಮನ್ ಆರ್ಚಬಿಷಪ್ ಪಿಲಿಪ್ ನೇರಿ ಫೆರಾವೊ ನುಡಿದರು.

ಡಿಸೆಂಬರ್ 3 ರಂದು ಶುಕ್ರವಾರ ಬೆಳಿಗ್ಗೆ ಓಲ್ಡ್ ಗೋವಾ ಚರ್ಚ್ ಪರಿಸರದಲ್ಲಿ ಆಯೋಜಿಸಿದ್ದ ಸಂತ್ ಫ್ರಾನ್ಸಿಸ್ ಜೇವಿಯರ್ ಫೆಸ್ತನ ವಿಶೇಷ ಪ್ರಾರ್ಥನಾ ಸಭೆಯಲ್ಲಿ ಅವರು ಮಾತನಾಡಿದರು.

ಓಲ್ಡಗೋವಾ ಚರ್ಚನಲ್ಲಿ ಪ್ರತಿವರ್ಷದಂತೆ ಡಿಸೆಂಬರ್ 3 ರಂದು ಶುಕ್ರವಾರ ಸಂತ್ ಫ್ರಾನ್ಸಿಸ್ ಜೇವಿಯರ್ ಫೆಸ್ತ ಆಚರಿಸಲಾಯಿತು. ದೇಶದ ವಿವಿಧ ಚರ್ಚಗಳ ಫಾದ್ರಿಗಳು ಉಪಸ್ಥಿತಿಯಲ್ಲಿ ವಿವಿಧ ಭಾಷೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲಾಯಿತು. ಶುಕ್ರವಾರ ಬೆಳಿಗ್ಗೆ ಓಲ್ಡ್ ಗೋವಾ ಚರ್ಚ್ ಪರಿಸರದಲ್ಲಿ ನಡೆದ ಪ್ರಾರ್ಥನಾ ಸಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಸೇರಿದಂತೆ ವಿವಿಧ ರಾಜ್ಯಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ನೊವೆನಾ ವಿಶೇಷ ಪ್ರಾರ್ಥನಾ ಸಭೆಯು ನೊವೆಂಬರ್ 24 ರಿಂದ ಆರಂಭಗೊಂಡಿದೆ. ಒಂಭತ್ತು ದಿನಗಳ ಕಾಲ ನಡೆಯುವ ಈ ಪ್ರಾರ್ಥನಾ ಸಭೆ ಶುಕ್ರವಾರ ಮುಯಕ್ತಾಯಗೊಂಡಿದೆ. ಫೆಸ್ತ ಆಚರಣೆಯ ಹಿನ್ನೆಲೆಯಲ್ಲಿ ಚರ್ಚ್ ಪರಿಸರದಲ್ಲಿ ಬೃಹತ್ ಜಾತ್ರೆ ನೆರೆದಿದ್ದು ಪ್ರತಿ ದಿನ ಗೋವಾ ರಾಜ್ಯದ ಮೂಲೆ ಮೂಲೆಯಿಂದ ವಿವಿಧ ರಾಜ್ಯಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಫೆಸ್ತ ಆಚರಣೆಯ ಹಿನ್ನೆಲೆ
1637 ರಲ್ಲಿ ಓಲ್ಡ್ ಗೋವಾ ಬಾಸಿಲಿಕಾ ಬೋಮ್  ಚರ್ಚ್ ನಲ್ಲಿ ಸಂತ ಫ್ರಾನ್ಸಿಸ್ ಜೇವಿಯರ್ ರವರ ಮೃತದೇಹವನ್ನು ಬೆಳ್ಳಿಯ ಶವಪೆಟ್ಟಿಗೆಯಲ್ಲಿ ಇರಿಸಲಾಗಿತ್ತು. ಸಂತ್ ಫ್ರಾನ್ಸಿಸ್ ಕ್ಯಾಥೊಲಿಕ್ ಮಿಶಿನರಿಯಾಗಿದ್ದು ಅವರು ಪ್ರಪಂಚದಾದ್ಯಂತ ಜನರಿಗೆ ಏಸುಕ್ರಿಸ್ತರ ಬಗ್ಗೆ ಬೋಧಿಸಿದ್ದರು. ಅವರು ಮರಣದ ನಂತರ 400 ವರ್ಷ ಕಳೆದರೂ ಕೂಡ ಅವರ ಮೃತದೇಹ ಇನ್ನೂ ಹಾಗೆಯೇ ಇಳಿದಿದೆ. ಅವರ ಮೃತದೇಹವನ್ನು ಪ್ರತಿ 10 ವರ್ಷಗಳಿಗೊಮ್ಮೆ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಪ್ರತಿ ವರ್ಷ ನೊವೆಂಬರ್ 24 ರಿಂದ ಡಿಸೆಂಬರ್ 3 ರವರೆಗೆ ನೊವೆನಾ ಎಂಬ ಒಂಭತ್ತು ದಿನಗಳ ಪ್ರಾರ್ಥನಾ ಸಭೆಯನ್ನು ನಡೆಸಲಾಗುತ್ತದೆ. ಈ ಸಂದರ್ಭದಲ್ಲಿ ಅವರ ನಿಧನದ ಗೌರವಾರ್ಥ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಸಲಾಗುತ್ತದೆ.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.