ಭಾರತದಲ್ಲಿ ಸ್ಪುಟ್ನಿಕ್ ಲಸಿಕೆ ಸೆಪ್ಟೆಂಬರ್‌ ನಿಂದ ಉತ್ಪಾದನೆ ಪ್ರಾರಂಭ : RDIF, SII


Team Udayavani, Jul 13, 2021, 6:06 PM IST

Sputnik Vaccine in India Starts Production from September: RDIF, SII

ನವ ದೆಹಲಿ  :  ರಷ್ಯಾದ ನೇರ ಹೂಡಿಕೆ ನಿಧಿ (ಆರ್‌ ಡಿ ಐ ಎಫ್), ರಷ್ಯಾದ ರಾಷ್ಟ್ರೀಯ ವಿತ್ತ ನಿಧಿ  ಮತ್ತು ಸೀರಮ್ ಇನ್‌ ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ ಐ ಐ) ಭಾರತದಲ್ಲಿ ರಷ್ಯಾದ ಸ್ಪುಟ್ನಿಕ್ ಲಸಿಕೆಯನ್ನು ಉತ್ಪಾದಿಸಲು  ಮುಂದಾಗಿದ್ದು,  ಎಸ್‌ ಐ ಐ ನ  ಸೌಲಭ್ಯಗಳಲ್ಲಿ ಮೊದಲ ಹಂತದ ಸ್ಪುಟ್ನಿಕ್ ಲಸಿಕೆಗಳನ್ನು ಸಪ್ಟೆಂಬರ್ ನಲ್ಲಿ ಉತ್ಪಾದಿಸುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಮತ್ತು ಸೀರಮ್ ಇನ್‌ ಸ್ಟಿಟ್ಯೂಟ್ ಆಫ್ ಇಂಡಿಯಾ ಭಾರತದಲ್ಲಿ ವರ್ಷಕ್ಕೆ 300 ಮಿಲಿಯನ್ ಗೂ ಹೆಚ್ಚಿನ ಪ್ರಮಾಣದ  ಸ್ಪುಟ್ನಿಕ್ ಲಸಿಕೆಗಳನ್ನು ಉತ್ಪಾದಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದೆ.

ಇದನ್ನೂ ಓದಿ : ದಿ. ಅಂಬರೀಷ ಅಂತಿಮ ಸಂಸ್ಕಾರ ವೆಚ್ಚದ ಮಾಹಿತಿ ಸರ್ಕಾರದ ಬಳಿ ಇಲ್ಲ: ಗಡಾದ ಆರೋಪ

ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮೋದಿಸಿದ ನಂತರ  ತಂತ್ರಜ್ಞಾನ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ, ಎಸ್‌ ಐ ಐ ಈಗಾಗಲೇ ಗಮಲೇಯ ಕೇಂದ್ರದಿಂದ ಸೆಲ್ ಮತ್ತು ವೆಕ್ಟರ್ ಮಾದರಿಗಳನ್ನು ಸ್ವೀಕರಿಸಿದ್ದು, ಪ್ರಾಯೋಗಿಕ ಪ್ರಕ್ರಿಯೆ ಪ್ರಾರಂಭವಾಗಿದೆ  ಎಂದು ವರದಿ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಆರ್‌ ಡಿ ಐ ಎಫ್ ನ ಕಾರ್ಯ ನಿರ್ವಹಣಾ ಅಧಿಕಾರಿ  ಕಿರಿಲ್ ಡಿಮಿಟ್ರಿವ್, ರಷ್ಯಾದ ಸ್ಪುಟ್ನಿಕ್ ಲಸಿಕೆ ಉತ್ಪಾದನೆಗಾಗಿ ಆರ್‌ ಡಿ ಐ ಎಫ್ ಈ ಹಿಂದೆ ಭಾರತದ ಅನೇಕ  ಔಷಧೀಯ ಕಂಪನಿಗಳೊಂದಿಗೆ (ಗ್ಲ್ಯಾಂಡ್ ಫಾರ್ಮಾ, ಹೆಟೆರೊ ಬಯೋಫಾರ್ಮಾ, ಪ್ಯಾನೇಸಿಯಾ ಬಯೋಟೆಕ್, ಸ್ಟೆಲಿಸ್ ಬಯೋಫಾರ್ಮಾ, ವಿರ್ಚೋ ಬಯೋಟೆಕ್ ಮತ್ತು ಮೊರೆಪೆನ್) ಒಪ್ಪಂದಗಳನ್ನು ಮಾಡಿಕೊಂಡಿತ್ತು.  ಈ ಕಾರ್ಯತಂತ್ರದ ಸಹಭಾಗಿತ್ವವು ನಮ್ಮ ಉತ್ಪಾದನಾ ಸಾಮರ್ಥ್ಯಗಳನ್ನು ಗಣನೀಯವಾಗಿ ಹೆಚ್ಚಿಸುವ ಪ್ರಮುಖ ಹೆಜ್ಜೆಯಾಗಿದ್ದು, ಭಾರತದಲ್ಲಿ ಮತ್ತು ಪ್ರಪಂಚದಾದ್ಯಂತ ಕೋವಿಡ್ ಸೋಂಕಿನ ವಿರುದ್ಧ ಹೋರಾಡುವುದಕ್ಕೆ ಇದು ಮಹತ್ವದ ಹೆಜ್ಜೆಯಾಗಿದೆ. ಸದ್ಯ, ಲಸಿಕೆ ಉತ್ಪಾದನೆಗಾಗಿ ತಂತ್ರಜ್ಞಾನ ವರ್ಗಾವಣೆ ಕಾರ್ಯ ನಡೆಯುತ್ತಿದ್ದು, ಮೊದಲ ಹಂತದ ಲಸಿಕೆಗಳುನ್ನು ಮುಂಬರುವ ತಿಂಗಳುಗಳಲ್ಲಿ ಎಸ್‌ ಐ ಐ ಜೊತೆ ಜಂಟಿಯಾಗಿ ಉತ್ಪಾದಿಸಲಾಗುವುದು ಎಂದು ನಿರೀಕ್ಷೆ ಇದೆ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ.

ಇನ್ನು, ಸೀರಮ್ ಇನ್‌ ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಅದರ್ ಪೂನವಾಲ ಈ ಬಗ್ಗೆ ಪ್ರತಿಕ್ರಿಯಸಿ,  ಸ್ಪುಟ್ನಿಕ್ ಲಸಿಕೆ ತಯಾರಿಸಲು ಆರ್‌ ಡಿ ಐ ಎಫ್‌ ನೊಂದಿಗೆ ಪಾಲುದಾರಿಕೆ ಹೊಂದಲು ಸಂತೋಷವಾಗಿದೆ. ಪ್ರಾಯೋಗಿಕ ಲಸಿಕೆಗಳನ್ನು ಮುಂಬರುವ ತಿಂಗಳುಗಳಲ್ಲಿ ಲಭ್ಯವಾಗುವಂತೆ ನಿರೀಕ್ಷಿಸಲಾಗಿದೆ ಎಂದಿದ್ದಾರೆ

ದೇಶ ಹಾಗೂ ಪ್ರಪಂಚದಾದ್ಯಂತ ಕೋವಿಡ್ ಸೋಂಕಿನ ವಿರುದ್ಧ ಹೋರಾಡುವುದಕ್ಕೆ ಸ್ಪುಟ್ನಿಕ್ ಲಸಿಕೆ ಸಹಕರಿಸಲಿದೆ. ಉತ್ತಮ ಪರಿಣಾಮಕಾರಿತ್ವವನ್ನು ಈ ಲಸಿಕೆ ಹೊಂದಿದೆ. ಶೀಘ್ರದಲ್ಲೇ ಲಸಿಕೆಗಳು ಬಳಕೆಗೆ ಸಿಗುವಂತೆ ಮಾಡಲು ಸಂಸ್ಥೆ ಪ್ರಯತ್ನಿಸುತ್ತದೆ. ವರ್ಷಕ್ಕೆ 300 ಮಿಲಿಯನ್ ಗೂ ಹೆಚ್ಚಿನ ಪ್ರಮಾಣದ  ಸ್ಪುಟ್ನಿಕ್ ಲಸಿಕೆಗಳನ್ನು ಭಾರತದಲ್ಲಿ ಉತ್ಪಾದಿಸುವ ಗುರಿ ಇದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ದೇಶದ ಮೊದಲ ಕೋವಿಡ್ ಸೋಂಕಿತೆಗೆ ಈಗ ಮತ್ತೆ ಮಹಾಮಾರಿ ಅಟ್ಯಾಕ್..!

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.