ಅಕ್ರಮ ಆಸ್ತಿ ಸಂಪಾದಿಸಿದ ಡಿಕೆ ಸಹೋದರರನ್ನು ಜೈಲಿಗೆ ಹಾಕಿ : ಸರಕಾರಕ್ಕೆ ಹಿರೇಮಠ ಆಗ್ರಹ
Team Udayavani, Oct 7, 2020, 5:49 PM IST
ಧಾರವಾಡ: ಅಕ್ರಮ ಆಸ್ತಿ ಸಂಪದಿಸಿದ ಡಿ.ಕೆ.ಶಿವಕುಮಾರ, ಡಿ.ಕೆ.ಸುರೇಶ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಭ್ರಷ್ಟಾಚಾರ ನಿಯಂತದರಣ ಕಾಯ್ದೆಯಡಿ ಎಫ್.ಐಆರ್ ದಾಖಲಿಸುವ ಜತೆಗೆ ಜೈಲಿಗೆ ಕಳಿಸಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಡಿ.ಕೆ.ಶಿವಕುಮಾರ ಮನೆಯ ಮೇಲಿನ ಸಿಬಿಐ ದಾಳಿ ಸ್ವಾಗತ. ಡಿಕೆಶಿ ಅಕ್ರಮ ಆಸ್ತಿಗಳ ಬಾಹು ಬಹಳ ವಿಸ್ತಾರವಿದೆ. ವಿ.ಜಿ. ಸಿದ್ಧಾರ್ಥ್ ಕಾಫಿ ಡೇ ಸೇರಿ ಇತ್ಯಾದಿ ಅಕ್ರಮದಲ್ಲಿ ಭಾಗಿ ಆಗಿದ್ದಾರೆ ಎಂದು ದೂರಿದರು.
ಡಿಕೆಶಿ ಕುಟುಂಬದ ಸದಸ್ಯರು ಆದಾಯಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿ ಸಂಪಾದಿಸಿದ್ದು, ಸಿಬಿಐ ದಾಳಿಯಿಂದ ತಿಳಿದು ಬಂದಿದೆ. ಮುಂದೆ ಯಾರು ಇಂಥ ದುಸ್ಸಾಹಸಕ್ಕೆ ಕೈ ಹಾಕದಂತೆ ಇವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿದರು.
ಇದನ್ನೂ ಓದಿ:ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾಗೆ ಸೇರಿದ 2 ಸಾವಿರ ಕೋಟಿ ಮೌಲ್ಯದ ಆಸ್ತಿ ಜಪ್ತಿ!
ಡಿ.ಕೆ.ಶಿವಕುಮಾರ ಅವರ ಅಕ್ರಮ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದು ಒತ್ತಾಯಿಸಿದ್ದಾಗಿ ತಿಳಿಸಿದರು.
ಡಾ. ವೆಂಕನಗೌಡ ಪಾಟೀಲ ಮಾತನಾಡಿ, ರೈತ ವಿರೋಧಿ ನೀತಿ ಕಾಯ್ದೆ ತಿದ್ದುಪಡಿ ಹಾಗೂ ಸರ್ಕಾರದ ಈ ನಿರ್ಲಕ್ಷ್ಯ ದೋರಣೆ ಖಂಡಿಸಿ, ಅ.2ರಿಂದ ಈಗಾಗಲೇ ವಿವಿಧ ಕಾರ್ಯಕ್ರಮಗಳ ಮೂಲಕ ಜನಜಾಗೃತಿ ಮೂಡಿಸುತ್ತಿದೆ. ಇದೇ ಅ.11ರಂದು ಇದರ ಸಮಾರೋಪ ಧಾರವಾಡದಲ್ಲಿ ನಡೆಯಲಿದೆ. ದೇಶದ ವಿವಿಧಡೆಯಿಂದ ಚಿಂತಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳ: ಲಾಕ್ಡೌನ್ ಸಮಯದಲ್ಲಿ ಪ್ರಕರಣಗಳಲ್ಲಿ ಏರಿಕೆ !
ಉತ್ತರ ಪ್ರದೇಶದ ಹತ್ರಾಸ್ ನ ಮನಿಷಾ ವಾಲ್ಮೀಕಿ ಮೇಲಿನ ಅತ್ಯಾಚಾರ, ನಾಲಿಗೆ ಕತ್ತರಿಸಿ ಹೀನ ಕೃತ್ಯ ಮೆರೆದಿದ್ದು ಖೇದಕರ. ಈ ವಿಷಯವಾಗಿ ಮಾಧ್ಯಮ ಹತ್ತಿಕ್ಕುವ ಕೆಲಸ ನಾಚಿಗೇಡಿತನ ಪ್ರಕರಣ ಸುಪ್ರೀಂ ಕೋರ್ಟ್ ನಿವೃತ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಿ, ತಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಜತೆಗೆ ಮನಿಷಾ ಕುಟುಂಬಕ್ಕೆ ಭದ್ರತೆ ನೀಡವಂತೆ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು