1 ಕೋ.ರೂ.ಗಳಲ್ಲಿ 40 ಶ್ಮಶಾನಗಳ ಪುನಶ್ಚೇತನ :ಧರ್ಮಸ್ಥಳ ಯೋಜನೆಯಿಂದ ರುದ್ರಭೂಮಿಗಳಿಗೆ ಕಾಯಕಲ್ಪ


Team Udayavani, Apr 21, 2021, 1:32 AM IST

1 ಕೋ.ರೂ.ಗಳಲ್ಲಿ 40 ಶ್ಮಶಾನಗಳ ಪುನಶ್ಚೇತನ :ಧರ್ಮಸ್ಥಳ ಯೋಜನೆಯಿಂದ ರುದ್ರಭೂಮಿಗಳಿಗೆ ಕಾಯಕಲ್ಪ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪ್ರಾರಂಭಿಸಲಾಗಿರುವ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಕಾರ್ಯ ಕ್ರಮದನ್ವಯ ಇದುವರೆಗೆ ರಾಜ್ಯಾ ದ್ಯಂತ 550 ರುದ್ರಭೂಮಿಗಳನ್ನು ಪುನಶ್ಚೇತನ ಗೊಳಿಸಲಾಗಿದೆ. ಪ್ರಸ್ತುತ ಸಾಲಿನಲ್ಲಿ ಈ ಯೋಜನೆಗೆ 1 ಕೋ.ರೂ. ಮೀಸಲಿಟ್ಟಿದ್ದು, 40 ರುದ್ರಭೂಮಿಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಹಿಂದೂ ಧರ್ಮೀಯರ ಶವ ಸಂಸ್ಕಾರವನ್ನು ವ್ಯವಸ್ಥಿತವಾಗಿ ನಡೆಸುವುದಕ್ಕೆ ಪ್ರತೀ ಗ್ರಾಮ ದಲ್ಲಿಯೂ ಸೂಕ್ತ ಪರಿಕರಗಳನ್ನು ಕಲ್ಪಿಸುವ ದೃಷ್ಟಿಯಿಂದ ಹಿಂದೂ ರುದ್ರ ಭೂಮಿ ಯೋಜನೆ ಪ್ರಾರಂಭಿಸಿದ್ದರು. ಇದರ ಮೂಲಕ ಕ್ಷೇತ್ರದಿಂದ ಅಗತ್ಯ ಪರಿಕರಗಳಾದ ಶವದಹನ ಚೇಂಬರ್‌ ಮತ್ತು ಇತರ ಉಪ ಕರಣಗಳನ್ನು ಅಳವಡಿಸಿ ಕೊಳ್ಳಲು 2.50 ಲಕ್ಷ ರೂ. ವರೆಗೆ ನೆರವು ನೀಡಲಾಗುತ್ತಿದೆ.

ಸರ್ವ ಸೌಲಭ್ಯ
ದಹನ ಚೌಕಿಯನ್ನು ಮಳೆ, ಬಿಸಿಲು, ಗಾಳಿಯಿಂದ ರಕ್ಷಿಸಲು ಸೂಕ್ತ ಮಾಡು ನಿರ್ಮಿಸಿ, ಕಟ್ಟಿಗೆ ದಾಸ್ತಾನು, ಸ್ನಾನ, ಶೌಚದ ವ್ಯವಸ್ಥೆ, ಪೂಜಾ ಕೊಠಡಿಯ ವ್ಯವಸ್ಥೆ ಮುಂತಾದವುಗಳನ್ನು ಕೂಡ ಈ ಯೋಜನೆಯಲ್ಲಿ ಅಳವಡಿಸಲಾಗುತ್ತದೆ.
ಇದುವರೆಗೆ ಈ ಕಾರ್ಯಕ್ರಮದನ್ವಯ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯ ದಾದ್ಯಂತ 550 ರುದ್ರಭೂಮಿಗಳಿಗೆ 6.75 ಕೋ.ರೂ. ವಿನಿಯೋಗಿಸಿರುತ್ತಾರೆ. ಸ್ಥಳೀಯ ಸಹಭಾಗಿತ್ವನ್ನು ಲೆಕ್ಕಕ್ಕೆ ತೆಗೆದು ಕೊಂಡರೆ ಸುಮಾರು 50 ಕೋ.ರೂ. ಮೊತ್ತದ ಆರ್ಥಿಕ ವಿನಿಯೋಗ ಮಾಡಲಾ ಗಿದೆ ಎಂದು ಹೇಳಬಹುದು ಎಂದು ಯೋಜ ನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌ ತಿಳಿಸಿದ್ದಾರೆ.

ಸೌದೆ ಉಳಿತಾಯ, ಸ್ವತ್ಛತೆಗೂ ಸಹಕಾರಿ
ಕ್ಷೇತ್ರದ ನೆರವಿನಿಂದ ಖರೀದಿಸಲಾಗುವ ದಹನ ಚೌಕಿಯನ್ನು ವಿಶೇಷ ಕಬ್ಬಿಣದಿಂದ ಮಾಡಲಾಗಿದ್ದು, 1.2 ಟನ್‌ ಭಾರ ಇರುತ್ತದೆ. ಈ ಚೇಂಬರನ್ನು ಒಳಬದಿಯಿಂದ ವಿಶೇಷವಾಗಿ ತಯಾರಿಸಿದ ಅಲಾಯ್‌ಕಾಸ್ಟ್‌ ಅಯರ್‌° ಪ್ಲೇಟ್‌ಗಳಿಂದ ಮುಚ್ಚಲಾಗಿದೆ. ಇದು 1,200 ಕೆ.ಜಿ. ಭಾರವಾಗಿದ್ದು, 74 ಇಂಚು ಉದ್ದ, 39 ಇಂಚು ಅಗಲ ಹಾಗೂ 31 ಇಂಚು ಎತ್ತರವಿರುತ್ತದೆ.ಅಡಿ ಭಾಗದ ಗ್ರೇಟಿಂಗ್ಸ್‌ ಮೇಲೆ 2 ಸಾಲು ಸೌದೆ, ಅದರ ಮೇಲೆ ಶವ, ಅದರ ಮೇಲೆ ಮೂರು ಸಾಲು ಸೌದೆ ಇಡಲು ಹೆಚ್ಚೆಂದರೆ 250ರಿಂದ 300 ಕೆ.ಜಿ. ಕಟ್ಟಿಗೆ ಸಾಕಾಗುತ್ತದೆ. ಸ್ಥಳೀಯ ಕ್ರಮದಲ್ಲಿ 800ರಿಂದ 1,000 ಕೆ.ಜಿ. ಕಟ್ಟಿಗೆ ಬೇಕಾಗುತ್ತಿದ್ದು, ಸೌದೆಯ ಉಳಿತಾಯ ಮತ್ತು ಸ್ವತ್ಛತೆ ಕಾಪಾಡಲು ಇದು ಸಹಕಾರಿಯಾಗಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.