ಆರ್ಥಿಕ ಬಿಕ್ಕಟ್ಟು-ಶ್ರೀಲಂಕಾದಲ್ಲಿ ತೀವ್ರ ಇಂಧನ ಕೊರತೆ; ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
ಜುಲೈ 04ರಿಂದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಒಂದು ವಾರಗಳ ಕಾಲ ರಜೆ
Team Udayavani, Jul 4, 2022, 10:17 AM IST
ಕೊಲಂಬೋ: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ತೀವ್ರ ಇಂಧನ ಕೊರತೆಯ ಹಿನ್ನೆಲೆಯಲ್ಲಿ ಶ್ರೀಲಂಕಾ ಶಿಕ್ಷಣ ಸಚಿವಾಲಯ ಜುಲೈ 04ರಿಂದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಒಂದು ವಾರಗಳ ಕಾಲ ರಜೆ ಘೋಷಿಸಿದೆ.
ಇದನ್ನೂ ಓದಿ:ಪುತ್ತೂರು: ಮಗನನ್ನು ಬಸ್ಗೆ ಬಿಡಲು ತೆರಳುತ್ತಿರುವ ವೇಳೆ ಅಫಘಾತ; ತಂದೆ ಸಾವು
ಮುಂದಿನ ರಜೆಯ ಅವಧಿಯಲ್ಲಿ ಪಠ್ಯಕ್ರಮವನ್ನು ಪೂರ್ಣಗೊಳಿಸಬೇಕಾಗಿದೆ ಎಂದು ಶ್ರೀಲಂಕಾ ಶಿಕ್ಷಣ ಸಚಿವ ತಿಳಿಸಿರುವುದಾಗಿ ವರದಿ ಹೇಳಿದೆ. ಇದಕ್ಕೂ ಮೊದಲು ಜೂನ್ 18ರಂದು ಶ್ರೀಲಂಕಾ ಸರ್ಕಾರ ಎಲ್ಲಾ ಶಾಲಾ, ಕಾಲೇಜುಗಳಿಗೆ ಒಂದು ವಾರ ರಜೆ ಘೋಷಿಸಿತ್ತು.
ಕೊಲಂಬೋ ನಗರ ವ್ಯಾಪ್ತಿಯಲ್ಲಿರುವ, ಇತರ ಪ್ರಾಂತ್ಯಗಳಲ್ಲಿರುವ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಮುಂದಿನ ಒಂದು ವಾರಗಳ ಕಾಲ ರಜೆ ನೀಡಲಾಗಿದೆ ಎಂದು ಡೈಲಿ ಮಿರರ್ ವರದಿ ಮಾಡಿದೆ.
ಈ ಕುರಿತು ಶ್ರೀಲಂಕಾ ಶಿಕ್ಷಣ ಸಚಿವಾಲಯದ ಕಾರ್ಯದರ್ಶಿ ನಿಹಾಲ್ ರಣಸಿಂಘೆ ಸುದ್ದಿಗಾರರೊಂದಿಗೆ ಮಾತನಾಡಿ, ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ನಡೆಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸಾರಿಗೆ ಸಮಸ್ಯೆ ಎದುರಿಸದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪ್ರಾಂಶುಪಾಲರು ಡಿವಿಷನಲ್ ಹಂತದಲ್ಲಿ ಕಡಿಮೆ ಪ್ರಮಾಣದ ವಿದ್ಯಾರ್ಥಿಗಳಿಗೆ ತರಗತಿ ನಡೆಸಲು ಅನುಮತಿ ನೀಡಲಾಗುವುದು ಎಂದು ನಿಹಾಲ್ ತಿಳಿಸಿದ್ದಾರೆ.
1948ರಲ್ಲಿ ದ್ವೀಪರಾಷ್ಟ್ರ ಶ್ರೀಲಂಕಾ ಸ್ವತಂತ್ರಗೊಂಡ ನಂತರ ಇದೇ ಮೊದಲ ಬಾರಿಗೆ ಭಾರೀ ಪ್ರಮಾಣದ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ದೇಶದಲ್ಲಿನ ರಾಜಕೀಯ ಬಿಕ್ಕಟ್ಟಿನಿಂದ ಮಹಿಂದ್ರ ರಾಜಪಕ್ಸೆ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ತೀವ್ರ ಪ್ರತಿಭಟನೆ, ಹಿಂಸಾಚಾರ ನಡೆದಿತ್ತು. ಇದರ ಪರಿಣಾಮ ರಾಜಪಕ್ಸೆ ರಾಜೀನಾಮೆ ನೀಡಿದ್ದು, ರಣಿಲ್ ವಿಕ್ರಮಸಿಂಘೆ ಅವರನ್ನು ನೂತನ ಪ್ರಧಾನಿಯಾಗಿ ಆಯ್ಕೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಫ್ಘಾನ್ ನಲ್ಲಿ ತೆಹ್ರೀಕ್-ಇ-ತಾಲಿಬಾನ್ ಉನ್ನತ ಕಮಾಂಡರ್ ಸೇರಿ ಮೂವರ ಹತ್ಯೆ
ಅಕ್ಷತಾ ಪಕ್ಕ ಕೂರಬೇಕು ಎಂದೇ ಎಷ್ಟೋ ತರಗತಿಗಳನ್ನು ಬದಲಿಸಿಕೊಂಡಿದ್ದೆ: ರಿಷಿ ಸುನಕ್
ತೈವಾನ್-ಚೀನ ಶಕ್ತಿ ಪ್ರದರ್ಶನ; ಜಲಸಂಧಿಯಲ್ಲಿ ನೌಕಾಪಡೆಗಳ ಗಸ್ತು
ಇಸ್ರೇಲ್ ಕಾರ್ಯಾಚರಣೆ: ಕ್ಷಿಪಣಿ ಹಾರಿಸಿ ಉಗ್ರ ಕಮಾಂಡರ್ ಹತ್ಯೆ
ಆರ್ಯ ವಾಲ್ವೇಕರ್ ಮುಡಿಗೆ ಮಿಸ್ ಇಂಡಿಯಾ ಯುಎಸ್ಎ-2022 ಕಿರೀಟ
MUST WATCH
ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?
ತುಂಬಿ ಹರಿಯುತ್ತಿದೆ ಬಾರೇಹಳ್ಳ ಚೆಕ್ ಡ್ಯಾಂ… ನೋಡಲು ಅದೆಷ್ಟು ಸುಂದರ…
ಮಾನ ಮರ್ಯಾದೆ ಇದೆಯೇನ್ರಿ…? ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ
ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ
ಜೆಸ್ಕಾಂ ಅಧಿಕಾರಿಗಳೇ ಇಲ್ಲಿ ಗಮನಿಸಿ.. ಮನೆಯ ಮಾಳಿಗೆ ತಾಗುತ್ತಿವೆ ವಿದ್ಯುತ್ ತಂತಿಗಳು!
ಹೊಸ ಸೇರ್ಪಡೆ
ಅಕ್ಕಿ ಕಳ್ರು ಕೊರೊನಾ ಕಾಲದಲ್ಲಿ ಮಲಗಿದ್ರಾ?: ಪ್ರಿಯಾಂಕ್
ಮಳೆಗಾಲದ ಆರೋಗ್ಯಕ್ಕೆ ಮನೆ ಮದ್ದು…ಆಯುರ್ವೇದದ ಪಂಚಕರ್ಮ ಚಿಕಿತ್ಸೆಯ ಮಹತ್ವವೇನು?
ಸೊರಬ: ಅಂಗನವಾಡಿ ಕೇಂದ್ರದ ಮೇಲೆ ಉರುಳಿದ ಮರ; ಅದೃಷ್ಟವಶಾತ್ ಮಕ್ಕಳು ಪಾರು
ಬೆಳ್ಳಿ ಗೆದ್ದ ಮಹಿಳಾ ಕ್ರಿಕೆಟ್ ತಂಡಕ್ಕೆ ಸಚಿವ ಡಾ.ನಾರಾಯಣಗೌಡ ಅಭಿನಂದನೆ
ಮಾರ್ಕೋನಹಳ್ಳಿ ಜಲಾಶಯಕ್ಕೆ ಯಾವುದೇ ಅಪಾಯವಿಲ್ಲ : ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್