SSLC ಪರೀಕ್ಷೆ ಮುಕ್ತಾಯ: ಎ. 24 ರಿಂದ ಮೌಲ್ಯಮಾಪನ
Team Udayavani, Apr 16, 2023, 7:27 AM IST
ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಶನಿವಾರ ಮುಕ್ತಾಯಗೊಂಡಿದ್ದು ಏ.24ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದೆ.
ರಾಜ್ಯಾದ್ಯಂತ ಒಟ್ಟು 236 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದೆ. ಈ ಬಾರಿ ಪರೀಕ್ಷೆ ಬರೆದಿರುವ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ 50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. “ಮೌಲ್ಯಮಾಪನ ಕಾರ್ಯಕ್ಕೆ ಒಟ್ಟು 73 ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು ನಿಯೋಜಿಸಲಾಗಿದೆ” ಎಂದು ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ (ಕೆಎಸ್ಇಎಬಿ) ನಿರ್ದೇಶಕ (ಪರೀಕ್ಷೆಗಳು) ಎಚ್.ಎನ್.ಗೋಪಾಲಕೃಷ್ಣ ಅವರು ಮಾಹಿತಿ ನೀಡಿದ್ದಾರೆ.
ಮಾ.31ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಂಡಿತ್ತು. ಶನಿವಾರ ಸಮಾಜ ವಿಜ್ಞಾನ ಪರೀಕ್ಷೆ ಮುಕ್ತಾಯಗೊಳ್ಳುವುದರೊಂದಿಗೆ ಈ ವರ್ಷದ ಪರೀಕ್ಷೆ ಮುಕ್ತಾಯಗೊಂಡಿದೆ. ಬೆಳಗಾವಿ, ಕಲಬುರಗಿಯಲ್ಲಿ ನಕಲಿನ ಪ್ರಕರಣಗಳು ವರದಿಯಾಗಿದ್ದು ಹೊರತು ಪಡಿಸಿ ಉಳಿದಂತೆ ಪರೀಕ್ಷೆ ಸುಸೂತ್ರವಾಗಿ ನಡೆದಿದೆ.
ಈ ಬಾರಿ ಪರೀಕ್ಷೆಗೆ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿಯಾಗಿ ಪರೀಕ್ಷೆ ಬರೆದಿದ್ದರು.
ರಾಜ್ಯಾದ್ಯಂತ 3305 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಏ.24ರಿಂದ ಮೌಲ್ಯಮಾಪನ ಆರಂಭಿಸಲು ನಿರ್ಧರಿಸಲಾಗಿದೆ. ಅಗತ್ಯ ಶಿಕ್ಷಕರನ್ನು ಈಗಾಗಲೇ ನಿಯೋಜಿಸಲಾಗಿದೆ. ಮೌಲ್ಯಮಾಪನ ಕಾರ್ಯ ಸಂಪೂರ್ಣ ಮುಗಿದ ಬಳಿಕ ಫಲಿತಾಂಶವನ್ನು ಕಂಪ್ಯೂಟರೀಕರಣಗೊಳಿಸಿ ಯಾವಾಗ ಪ್ರಕಟಿಸಬಹುದು ಎಂಬುದನ್ನು ಪರಿಶೀಲಿಸಿ ಫಲಿತಾಂಶ ಪ್ರಕಟಣೆಯ ದಿನಾಂಕವನ್ನು ನಿಗದಿಪಡಿಸಲಾಗುತ್ತದೆ ಎಂದು ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು