ಮಾ.31ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭ: ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ..
ಕನ್ನಡ, ಗಣಿತ ಪರೀಕ್ಷೆಯ ದಿನಾಂಕ ಮರು ನಿಗದಿ
Team Udayavani, Jan 18, 2023, 8:59 PM IST
ಬೆಂಗಳೂರು: ಎಸ್ಎಸ್ಎಲ್ಸಿಯ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು ಪ್ರಥಮ ಭಾಷೆಯ ಪರೀಕ್ಷೆ ಮಾರ್ಚ್ 31ಕ್ಕೆ ನಿಗದಿಯಾಗಿದೆ. ಹಾಗೆಯೇ ಗಣಿತ ಮತ್ತು ಸಮಾಜ ಶಾಸ್ತ್ರ ಪರೀಕ್ಷೆ ಏಪ್ರಿಲ್ 3ಕ್ಕೆ ನಡೆಯಲಿದೆ.
ಈ ಮೊದಲು ಏಪ್ರಿಲ್ 3ಕ್ಕೆ ನಿಗದಿಯಾಗಿದ್ದ ಮಹಾವೀರ ಜಯಂತಿಯ ಸಾರ್ವತ್ರಿಕ ರಜೆಯನ್ನು ಏಪ್ರಿಲ್ ನಾಲ್ಕಕ್ಕೆ ಸರ್ಕಾರ ಮರು ನಿಗದಿ ಪಡಿಸಿತ್ತು. ಈ ಹಿನ್ನೆಲೆಯಲ್ಲಿ ಏಪ್ರಿಲ್ ನಾಲ್ಕಕ್ಕೆ ನಿಗದಿಯಾಗಿದ್ದ ಗಣಿತ ಮತ್ತು ಸಮಾಜ ಶಾಸ್ತ್ರ ಪರೀಕ್ಷೆಯ ದಿನಾಂಕದಲ್ಲಿ ಬದಲಾವಣೆ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿತ್ತು.
ಈ ಹಿನ್ನೆಲೆಯಲ್ಲಿ ಏಪ್ರಿಲ್ 1 ಕ್ಕೆ ನಿಗದಿಯಾಗಿದ್ದ ಪ್ರಥಮ ಭಾಷೆಯ ಪರೀಕ್ಷೆಯನ್ನು ಮಾ.31ಕ್ಕೆ ಹಿಂದೂಡಲಾಗಿದೆ. ಏಪ್ರಿಲ್ 4 ಕ್ಕೆ ನಿಗದಿಯಾಗಿದ್ದ ಗಣಿತ ಮತ್ತು ಸಮಾಜ ಶಾಸ್ತ್ರ ಪರೀಕ್ಷೆಯನ್ನು ಏ. 3ಕ್ಕೆ ಮರು ನಿಗದಿ ಮಾಡಲಾಗಿದೆ.
ಏ.15ಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆ ಮುಕ್ತಾಯಗೊಳ್ಳಲಿದೆ. ಹೆಚ್ಚಿನ ಮಾಹಿತಿಗೆ https://sslc.karnataka.gov.in/ ವೆಬ್ಸೈಟ್ ನೋಡಬಹುದು.
ಎಲ್ಲ ಪರೀಕ್ಷೆಗಳು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45ರ ವರೆಗೆ ನಡೆಯಲಿದೆ. ಕೋರ್ ವಿಷಯಗಳಲ್ಲಿ ಸಂಗೀತ ವಿಷಯದ ಪರೀಕ್ಷೆಗಳು ಮಾತ್ರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15ರ ವರೆಗೆ ನಡೆಯಲಿದೆ. ಎನ್ಎಸ್ಕ್ಯೂಎಫ್ ಪರೀಕ್ಷೆಗಳು ಬೆಳಗ್ಗೆ 10.30ರಿಂದ ಮಧ್ಯಾಹ್ನ 12.45ರವರೆಗೆ ನಡೆಯಲಿದೆ.
ಪರಿಷ್ಕೃತ ವೇಳಾಪಟ್ಟಿ
ವೇಳಾಪಟ್ಟಿ:
ಮಾ.31 ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ
ಏ.3 ಗಣಿತ, ಸಮಾಜ ಶಾಸ್ತ್ರ
ಏ.6 ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ
ಏ.8 ಕೋರ್ ವಿಷಯ: ಎಲೆಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಮೆಕಾನಿಕಲ್, ಎಲೆಕ್ಟ್ರಿಕಲ್, ಇಂಜಿನಿಯರಿಂಗ್ ಗ್ರಾಫಿಕ್ಸ್, ಪ್ರೋಗ್ರಾಮಿಂಗ್ – ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್.ಆರ್ಥಶಾಸ್ತ್ರ
ಏ.10 ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ.
ಏ.12 ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಎನ್ಎಸ್ಕ್ಯೂಎಫ್ ವಿಷಯಗಳು- ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್ನೆಸ್.
ಏ.15 ಸಮಾಜ ವಿಜ್ಞಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ