ಕೋವಿಡ್ ವಾರ್ ರೂಂಗೆ ಸಚಿವರಾದ ಎಸ್.ಟಿ. ಸೋಮಶೇಖರ್, ಅಶೋಕ್ ದಿಡೀರ್ ಭೇಟಿ

ಬಿಬಿಎಂಪಿ ಸಿಬ್ಬಂದಿ ಕಾರ್ಯವೈಖರಿ ಪರಿವೀಕ್ಷಣೆ

Team Udayavani, May 9, 2021, 8:50 PM IST

ಕೋವಿಡ್ ವಾರ್ ರೂಂಗೆ ಸಚಿವರಾದ ಎಸ್.ಟಿ. ಸೋಮಶೇಖರ್, ಅಶೋಕ್ ದಿಡೀರ್ ಭೇಟಿ

ಬೆಂಗಳೂರು: ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳಗೊಳ್ಳುತ್ತಿರುವುದರ ಜೊತೆಗೆ ಬಿಬಿಎಂಪಿ ಕಾರ್ಯನಿರ್ವಹಣೆ ಬಗ್ಗೆ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಹಾಗೂ ಕಂದಾಯ ಸಚಿವರಾದ ಆರ್.ಅಶೋಕ್ ಅವರು, ರಾಜರಾಜೇಶ್ವರಿ ನಗರ ವಲಯದ ಕೋವಿಡ್ ವಾರ್ ರೂಂಗೆ ದಿಡೀರ್ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು.

ಯಾವುದೇ ಕಾರಣಕ್ಕೂ ನಾಗರಿಕರಿಗೆ ಸಮಸ್ಯೆಯಾಗಕೂಡದು. ಅವರು ಸಹಾಯಕ್ಕಾಗಿ ಕರೆ ಮಾಡಿದಾಗ ಸಮಾಧಾನವಾಗಿ ಸ್ಪಂದಿಸಿ, ಬೆಡ್ ವ್ಯವಸ್ಥೆ ಬೇಕಿರುವವರಿಗೆ ತಕ್ಷಣ ಅವಕಾಶ ಮಾಡಿಕೊಡಿ ಎಂದು ಸಚಿವದ್ವಯರು ವಾರ್ ರೂಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಸೂಚಿಸಿದರು.

ಬೆಡ್ ಬುಕ್ಕಿಂಗ್ ದಂಧೆಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡಬೇಡಿ. ಅಗತ್ಯ ಇರುವವರಿಗೆ ಬೆಡ್ ಸಿಗುವಂತೆ ಮಾಡಿ, ಒಂದು ವೇಳೆ ನಿಮ್ಮನ್ನು ಈ ದಂಧೆಗಾಗಿ ಯಾರಾದರೂ ಸಂಪರ್ಕಿಸಿದರೆ ನಮ್ಮ ಗಮನಕ್ಕೆ ತನ್ನಿ ಎಂದು ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಆರ್.ಅಶೋಕ್ ಅವರುಗಳು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಸೂಚಿಸಿದರು.

ಇದನ್ನೂ ಓದಿ :250 ಯೂನಿಟ್ ಗಳ ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕ್ ಗೆ ಚಾಲನೆ ನೀಡಿದ ಸಂಸದ ತೇಜಸ್ವೀ ಸೂರ್ಯ

ಹೋಂ ಐಸೋಲೇಶನ್ ನಲ್ಲಿದ್ದವರಿಗೆ ಮೆಡಿಕಲ್ ಕಿಟ್
ರಾಜರಾಜೇಶ್ವರಿ ನಗರ ವಲಯದ ವಲಯ ಆಯುಕ್ತರು ರೆಡ್ಡಿ ಶಂಕರ ಬಾಬು, ದಕ್ಷಿಣ ಉಪವಿಭಾಗಾಧಿಕಾರಿ ಶಿವಣ್ಣ ಸೇರಿ ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವದ್ವಯರಾದ ಎಸ್.ಟಿ.ಸೋಮಶೇಖರ್ ಹಾಗೂ ಆರ್.ಅಶೋಕ್ ಅವರು, ಕೊರೋನಾ ಸೋಂಕು ದೃಢಪಟ್ಟು ಹೋಂ ಐಸೋಲೇಶನ್ ನಲ್ಲಿರುವ ರಾಜರಾಜೇಶ್ವರಿ ವಲಯ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವ್ಯಾಪ್ತಿಯ ಎಲ್ಲರ ಮನೆಗಳಿಗೂ ಮೆಡಿಕಲ್ ಕಿಟ್ ಅನ್ನು ಕೊಡಬೇಕು. ಕೂಡಲೇ ಮೆಡಿಕಲ್ ಕಿಟ್ ತಯಾರಿಸಿ ತುರ್ತಾಗಿ ಕೊಡಲು ಸೂಚಿಸಿದರು.

ನೂತನ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ
ಚೆನ್ನೇನಹಳ್ಳಿಯಲ್ಲಿ ನೂತನ ಪ್ರಾರಂಭವಾಗಿರುವ ಜನಸೇವಾ ಕೇಂದ್ರದ ಕೋವಿಡ್ ಕೇರ್ ಸೆಂಟರ್ ಗೆ ಕಂದಾಯ ಸಚಿವರಾದ ಅಶೋಕ್ ಹಾಗೂ ಸಹಕಾರ ಸಚಿವರಾದ ಸೋಮಶೇಖರ್ ಅವರು ಭೇಟಿ ನೀಡಿ, ವ್ಯವಸ್ಥೆಯನ್ನು ಪರಿಶೀಲಿಸಿದರು. ಅಲ್ಲದೆ, ಸರ್ಕಾರದಿಂದ ಬೇಕಾದ ಎಲ್ಲ ಸೌಲಭ್ಯ ಹಾಗೂ ಸಹಕಾರವನ್ನು ಒದಗಿಸುವ ಭರವಸೆಯನ್ನೂ ಈ ಸಂದರ್ಭದಲ್ಲಿ ನೀಡಲಾಯಿತು. ಈ ವೇಳೆ ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್ ಇದ್ದರು.

ಚಿತಾಗಾರಕ್ಕೆ ಭೇಟಿ
ತಾವರೇಕೆರೆ ಚಿತಾಗಾರದಲ್ಲಿ ಶವಗಳ ಸಂಖ್ಯೆ ಹೆಚ್ಚಳಗೊಂಡು ಒತ್ತಡ ಆಗುತ್ತಿರವ ಕಾರಣ, ಬೆಂಗಳೂರು ಉತ್ತರ ತಾಲೂಕಿನ ಗಿಡೇನಹಳ್ಳಿ ಚಿತಾಗಾರಕ್ಕೆ ಸಚಿವರಾದ ಸೋಮಶೇಖರ್ ಹಾಗೂ ಅಶೋಕ್ ಅವರು ಭೇಟಿ ನೀಡಿ, ಹೆಚ್ಚಿನ ಜಾಗ, ಸೌಲಭ್ಯಗಳನ್ನು ಒದಗಿಸಲು ಸ್ಥಳ ವೀಕ್ಷಣೆ ಮಾಡಿದರು.

ತಲಾ 1 ಲಕ್ಷ ರೂ. ವೈಯುಕ್ತಿಕ ಸಹಾಯಧನ ವಿತರಣೆ

ಕೋವಿಡ್ ನಿಂದ ಮೃತಪಟ್ಟ ಯಶವಂತಪುರ ಮತಕ್ಷೇತ್ರದ ನಾಗರಿಕರಿಗೆ ಸಹಾಯಧನ ನೀಡುವ ಪ್ರಕ್ರಿಯೆಗೆ ಶನಿವಾರವಷ್ಟೇ ಚಾಲನೆ ನೀಡಿರುವ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು, ಭಾನುವಾರ ಕೆಂಗೇರಿ ಹೋಬಳಿ ರಾಮೋಹಳ್ಳಿ ಗ್ರಾಮ ಪಂಚಾಯಿತಿ ಮತ್ತು ತಾವರೆಕೆರೆ ಹೋಬಳಿ ಚುಂಚನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರಿಗೆ ತಲಾ 1 ಲಕ್ಷ ರೂಪಾಯಿ ವೈಯಕ್ತಿಕ ಸಹಯಾಧನ ವಿತರಣೆ ಮಾಡಿದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

train-track

Landslides; ಮಂಗಳೂರು – ಬೆಂಗಳೂರು ರೈಲುಗಳ ಸಂಚಾರ ರದ್ದು

ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

Karnataka ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.