ಕೊಳತ್ತೂರಿನಿಂದ ಸ್ಟಾಲಿನ್‌, ಚೆಪಾಕ್‌ನಿಂದ ಉದಯನಿಧಿ ಸ್ಪರ್ಧೆ?


Team Udayavani, Mar 2, 2021, 6:32 AM IST

ಕೊಳತ್ತೂರಿನಿಂದ ಸ್ಟಾಲಿನ್‌, ಚೆಪಾಕ್‌ನಿಂದ ಉದಯನಿಧಿ ಸ್ಪರ್ಧೆ?

ಹೊಸದಿಲ್ಲಿ: ತಮಿಳುನಾಡು ವಿಧಾನ ಸಭಾ ಚುನಾವಣೆಯಲ್ಲಿ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್‌ ಅವರು ಕೊಳತ್ತೂರು ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗಿಳಿಯಲಿದ್ದಾರೆ. ಸತತ ಎರಡು ಬಾರಿ ಈ ಕ್ಷೇತ್ರದಿಂದ ಅವರು ಗೆದ್ದಿದ್ದಾರೆ. ಇದೇ ವೇಳೆ, ಅವರ ಪುತ್ರ, ಪಕ್ಷದ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್‌ ಚೆಪಾಕ್‌-ಟ್ರಿಪ್ಲಿಕೇನ್‌ ಕ್ಷೇತ್ರದಲ್ಲಿ ಸ್ಪರ್ಧಿಸುವ ಸಾಧ್ಯತೆ ಅಧಿಕವಾಗಿದೆ. ಒಂದು ವೇಳೆ ಅವರಿಗೆ ಪಕ್ಷದ ಟಿಕೆಟ್‌ ದೊರೆತರೆ, ಉದಯನಿಧಿ ಅವರ ಚೊಚ್ಚಲ ಚುನಾವಣಾ ಸ್ಪರ್ಧೆ ಇದಾಗಿರಲಿದೆ.

ಶಾ ವಿರುದ್ಧ ಸ್ಟಾಲಿನ್‌ ಟೀಕೆ: ತಮ್ಮ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿರುವ ಡಿಎಂಕೆ ಅಧ್ಯಕ್ಷ ಸ್ಟಾಲಿನ್‌, “”ತಮಿಳುನಾಡಿನಲ್ಲಿ ಭ್ರಷ್ಟಾಚಾರ ನಡೆಸುತ್ತಿರುವ ಎಐಎಡಿಎಂಕೆ ಪಕ್ಷ ದೊಂದಿಗೆ ಕೈ ಜೋಡಿಸಿರುವ ಬಿಜೆಪಿ ಮೊದಲು ಆತ್ಮವಿಮರ್ಶೆ ಮಾಡಿಕೊಳ್ಳಬೇಕು” ಎಂದಿದ್ದಾರೆ.

ಬಿಜೆಪಿಯನ್ನು ದೂರವಿಡಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ 3 ದಿನಗಳ ತಮಿಳುನಾಡು ಪ್ರವಾಸ ಅಂತ್ಯವಾಗಿದೆ. 3ನೇ ದಿನವಾದ ಸೋಮವಾರವೂ ಅವರು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. “ಭಾಷೆ, ಸಂಸ್ಕೃತಿಯ ಬಗ್ಗೆ ಶತ್ರುತ್ವ ಹೊಂದಿರುವ ಹಾಗೂ ಒಂದು ಸಂಸ್ಕೃತಿ, ಒಂದು ದೇಶ, ಒಂದು ಇತಿಹಾಸ ಎಂಬ ಪರಿಕಲ್ಪನೆಯನ್ನು ಪ್ರತಿಬಿಂಬಿಸುವ ಶಕ್ತಿಗಳಿಂದ ದೂರವಿರುವ ಮೂಲಕ ತಮಿಳುನಾಡು ಇಡೀ ದೇಶಕ್ಕೇ ದಾರಿ ತೋರಿಸಬೇಕಿದೆ’ ಎಂದು ರಾಹುಲ್‌ ಹೇಳಿದ್ದಾರೆ. ಈ ಮೂಲಕ ಬಿಜೆಪಿಯನ್ನು ದೂರವಿಡಿ ಎಂಬ ಸಂದೇಶವನ್ನು ನೀಡಿದ್ದಾರೆ.

ಸುಪ್ರೀಂಗೆ ಅರ್ಜಿ: ಪಶ್ಚಿಮ ಬಂಗಾಲದಲ್ಲಿ 8 ಹಂತಗಳ ಮತದಾನ ಘೋಷಿಸಿರುವ ಚುನಾವಣ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ವಕೀಲ ಎಂ.ಎಲ್‌. ಶರ್ಮಾ ಎಂಬವರು ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿ ಸಿದ್ದು, 8 ಹಂತದ ಮತದಾನ ನಿರ್ಧಾರ ವಾಪಸ್‌ ಪಡೆಯುವಂತೆ ಆಯೋಗಕ್ಕೆ ನಿರ್ದೇಶಿಸುವಂತೆ ಮನವಿ ಮಾಡಿದ್ದಾರೆ.

ಅಸ್ಸಾಂನಲ್ಲಿ ಪ್ರಿಯಾಂಕಾ ಡಾನ್ಸ್‌: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಅಸ್ಸಾಂನಲ್ಲಿ ಭರ್ಜರಿ ಚುನಾವಣ ಪ್ರಚಾರ ಕೈಗೊಂಡಿದ್ದಾರೆ. ಲಖೀಂಪುರದಲ್ಲಿ ಬುಡಕಟ್ಟು ಜನಾಂಗದ ಯುವತಿಯರೊಂದಿಗೆ ಸಾಂಪ್ರದಾಯಿಕ “ಜುಮುರ್‌’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ದೇಶದೆಲ್ಲೆಡೆ ಹೋಗಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡುತ್ತೇವೆ ಎಂದು ಘಂಟಾಘೋಷವಾಗಿ ಹೇಳುತ್ತಾರೆ. ಆದರೆ ಅಸ್ಸಾಂನಲ್ಲಿ ಮಾತ್ರ ಅದರ ಬಗ್ಗೆ ತುಟಿ ಬಿಚ್ಚುವುದಿಲ್ಲವೇಕೆ ಎಂದು ಪ್ರಶ್ನಿಸಿದ್ದಾರೆ.

ದೀದಿಗೆ ತೇಜಸ್ವಿ ಬಲ
ಅಚ್ಚರಿಯ ಬೆಳವಣಿಗೆಯೆಂಬಂತೆ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರು ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿಗೆ ಬೆಂಬಲ ಘೋಷಿಸಿದ್ದಾರೆ. ಬಿಹಾರದಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದ ಆರ್‌ಜೆಡಿ, ಪ.ಬಂಗಾಲದಲ್ಲಿ ಕಾಂಗ್ರೆಸ್‌-ಎಡ ಪಕ್ಷಗಳ ಮೈತ್ರಿಗೆ ಬೆಂಬಲ ಸೂಚಿಸುವ ಬದಲು ಮಮತಾಗೆ ಸಾಥ್‌ ನೀಡಿದ್ದಾರೆ. ಜತೆಗೆ, ಬಿಜೆಪಿಯನ್ನು ನಿಯಂತ್ರಿಸುವುದೇ ನಮ್ಮ ಮೊದಲ ಗುರಿ. ಹೀಗಾಗಿ, ಇಲ್ಲಿ ನೆಲೆ ನಿಂತಿರುವ ಬಿಹಾರಿಗರು ಟಿಎಂಸಿಗೆ ಮತ ಚಲಾಯಿಸಿ ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.