ತಿರುಪತಿ ತಿರುಮಲ ದೇವಾಲಯದಲ್ಲಿ ಭಕ್ತರ ನೂಕುನುಗ್ಗಲು, ಹಲವರಿಗೆ ಗಾಯ: ಆಕ್ರೋಶ
ಎರಡು ದಿನಗಳಿಂದ ಟಿಟಿಡಿ ಆಡಳಿತ ಮಂಡಳಿ ಅಧಿಕಾರಿಗಳು ಉಚಿತ ದರ್ಶನದ ಟೋಕನ್ ವಿತರಣೆಯನ್ನು ನಿಲ್ಲಿಸಿದ್ದರು.
Team Udayavani, Apr 12, 2022, 1:43 PM IST
ಹೈದರಾಬಾದ್: ಆಂಧ್ರಪ್ರದೇಶದ ಪುರಾಣ ಪ್ರಸಿದ್ಧ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರ ನೂಕುನುಗ್ಗಲಿನ ಪರಿಣಾಮ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಗಿ, ಹಲವಾರು ಭಕ್ತರು ಗಾಯಗೊಂಡಿರುವ ಘಟನೆ ಮಂಗಳವಾರ (ಏಪ್ರಿಲ್ 12) ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕೂಡಲೇ ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಬಂಧಿಸಿ: ಡಿಕೆ ಶಿವಕುಮಾರ್ ಆಗ್ರಹ
ಪ್ರಾಥಮಿಕ ವರದಿಗಳ ಪ್ರಕಾರ, ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ಟಿಕೆಟ್ ಕೌಂಟರ್ ಬಳಿ ಸರ್ವದರ್ಶನ ಟೋಕನ್ ಗಾಗಿ ಭಾರೀ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರಿಂದ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
ಸರ್ವದರ್ಶನ ಅಂದರೆ ಎಲ್ಲರಿಗೂ ಉಚಿತ ದೇವರ ದರ್ಶನ. ತಿರುಮಲ ದೇವಾಲಯಕ್ಕೆ ಆಗಮಿಸುವ ಎಲ್ಲಾ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಉಚಿತ ಟೋಕನ್ ವಿತರಿಸುತ್ತದೆ ಎಂದು ವರದಿ ವಿವರಿಸಿದೆ.
ಏತನ್ಮಧ್ಯೆ ಕಳೆದ ಎರಡು ದಿನಗಳಿಂದ ಟಿಟಿಡಿ ಆಡಳಿತ ಮಂಡಳಿ ಅಧಿಕಾರಿಗಳು ಉಚಿತ ದರ್ಶನದ ಟೋಕನ್ ವಿತರಣೆಯನ್ನು ನಿಲ್ಲಿಸಿದ್ದರು. ಇದರ ಪರಿಣಾಮ ತಿರುಮಲದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು ಉಳಿದುಕೊಳ್ಳುವಂತಾಗಿತ್ತು.
ಮಂಗಳವಾರ (ಏಪ್ರಿಲ್ 12) ದೇವರ ದರ್ಶನಕ್ಕಾಗಿ ಕಾದು ಕೊನೆಗೆ ಭಕ್ತರು ದೇವಾಲಯದ ಒಳಗೆ ಪ್ರವೇಶಿಸಲು ಯತ್ನಿಸಿದ್ದರು. ಸಾವಿರ, ಸಾವಿರ ಸಂಖ್ಯೆಯಲ್ಲಿ ಭಕ್ತರು ಗುಂಪುಗೂಡಿದ್ದರಿಂದ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಟಿಟಿಡಿ ತಿಳಿಸಿದೆ.
ಭಕ್ತರ ನೂಕುನುಗ್ಗಲು, ತಳ್ಳಾಟದಲ್ಲಿ ಹಲವಾರು ಭಕ್ತರು ಗಾಯಗೊಂಡಿರುವ ಘಟನೆ ನಡೆದಿದೆ. ಟಿಟಿಡಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ತುಳಿತ ಸಂಭವಿಸಲು ಕಾರಣವಾಗಿದೆ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ತಿರುಮಲ ವೆಂಕಟೇಶ್ವರ ದೇವಾಲಯಕ್ಕೆ ಭಕ್ತರು ಭೇಟಿ ನೀಡುವುದನ್ನು ನಿರ್ಬಂಧಿಸಿತ್ತು. ಮಾರ್ಚ್ 14ರಂದು ತಿರುಮಲ ದೇವಾಲಯ ಕೋವಿಡ್ ನಿರ್ಬಂಧವನ್ನು ತೆರವುಗೊಳಿಸಿತ್ತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ