ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಮಾನವ ಹಕ್ಕುಗಳ ಹೋರಾಟಗಾರ ಸ್ವಾಮಿ ನಿಧನ
ವರು ಹೃದಯ ಸ್ತಂಭನದಿಂದ ಚೇತರಿಸಿಕೊಳ್ಳದೆ, ನಿಧನರಾಗಿರುವುದಾಗಿ ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.
Team Udayavani, Jul 5, 2021, 3:50 PM IST
ಮುಂಬಯಿ: ಎಲ್ಗಾರ್ ಪರಿಷದ್ ಮಾವೋವಾದಿಗಳ ಸಂಪರ್ಕ ಪ್ರಕರಣದ ಆರೋಪಿ, ಭಯೋತ್ಪಾದನಾ ವಿರೋಧಿ ಕಾನೂನಿನಡಿ ಬಂಧಿಸಲ್ಪಟ್ಟಿದ್ದ ಬುಡಕಟ್ಟು ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ (84) ಸೋಮವಾರ (ಜುಲೈ05) ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ನಾಯಿ ಸಿಂಹವನ್ನೂ ನಾಯಿ ಎಂದೆ ಭಾವಿಸುತ್ತದೆ: ಸಿದ್ದರಾಮಯ್ಯ ಹೇಳಿಕೆಗೆ ರವಿ ಕುಮಾರ್ ತಿರುಗೇಟು
ಇಂದು ಬಾಂಬೆ ಹೈಕೋರ್ಟ್ ನಲ್ಲಿ ಸ್ಟಾನ್ ಸ್ವಾಮಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯುವ ಮೊದಲೇ ನಿಧನರಾಗಿದ್ದಾರೆ. 84 ವರ್ಷದ ಸ್ಟಾನ್ ಸ್ವಾಮಿ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ವೆಂಟಿಲೇರ್ ನಲ್ಲಿದ್ದರು.
ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ 1.30ಕ್ಕೆ ನಿಧನರಾಗಿರುವುದಾಗಿ ಬಾಂದ್ರಾದ ಹೋಲಿ ಫ್ಯಾಮಿಲಿ ಆಸ್ಪತ್ರೆಯ ನಿರ್ದೇಶಕ ಡಾ.ಐಯಾನ್ ಡಿಸೋಜಾ ಅವರು ಬಾಂಬೆ ಹೈಕೋರ್ಟ್ ನ ಜಸ್ಟೀಸ್ ಎಸ್ ಎಸ್ ಶಿಂಧೆ ಮತ್ತು ಜಸ್ಟೀಸ್ ಎನ್ ಜೆ ಜಾಮಾದಾರ್ ನೇತೃತ್ವದ ಪೀಠಕ್ಕೆ ಮಾಹಿತಿ ನೀಡಿರುವುದಾಗಿ ವರದಿ ವಿವರಿಸಿದೆ.
ಭಾನುವಾರ ಮುಂಜಾನೆ ಸ್ವಾಮಿ ಅವರು ಹೃದಯ ಸ್ತಂಭನಕ್ಕೊಳಗಾಗಿದ್ದರು, ನಂತರ ಅವರನ್ನು ವೆಂಟಿಲೇಟರ್ ಸಪೋರ್ಟ್ ನಲ್ಲಿ ಇರಿಸಲಾಗಿತ್ತು ಎಂದು ಡಾ.ಐಯಾನ್ ಡಿಸೋಜಾ ಕೋರ್ಟ್ ಗೆ ವಿವರ ನೀಡಿದ್ದಾರೆ. ಅವರು ಹೃದಯ ಸ್ತಂಭನದಿಂದ ಚೇತರಿಸಿಕೊಳ್ಳದೆ, ನಿಧನರಾಗಿರುವುದಾಗಿ ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್