ಬಿಜೆಪಿಯದ್ದು 30 ಪರ್ಸೆಂಟ್ ಸರ್ಕಾರ, ಏನಾದರೂ ಅನುಮಾನ ಇದೆಯಾ? ಸಿದ್ದರಾಮಯ್ಯ
Team Udayavani, Jan 11, 2021, 11:51 AM IST
ಹುಬ್ಬಳ್ಳಿ: ರಾಜ್ಯದ ಬಿಜೆಪಿ ಸರಕಾರ 30 ಪರ್ಸೆಂಟ್ ಕಮಿಷನ್ ಸರಕಾರ ಆಗಿದೆ. ಈ ಬಗ್ಗೆ ನಿಮಗೇನಾದರೂ ಅನುಮಾನ ಇದೆಯೇ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ನೇತೃತ್ವದ ಕಾಂಗ್ರೆಸ್ ಇದ್ದಾಗ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರು ಇದೊಂದು ಶೇ.10ರಷ್ಟು ಸರಕಾರ ಎಂದಿದ್ದರು, ನನ್ನ ಸರಕಾರ ಯಾವುದೇ ಹಗರಣ ನಡೆಸಲಿಲ್ಲ. ಆದರೆ ಸಿಎಂ ಯಡಿಯೂರಪ್ಪ ಅವರ ಪುತ್ರ ಆರ್ ಟಿಜಿಎಸ್ ಮೂಲಕ 7.10 ಕೋಟಿ ರೂ. ಹಣ ಪಡೆದಿದ್ದು, ಹಣ ಇಲ್ಲದೆ ವರ್ಗಾವಣೆ ಆಗದು, ಎಲ್ ಓಸಿ ಬಿಡುಗಡೆಯಾಗದು. ಇದು ಪ್ರಧಾನಿ ಮೋದಿಯವರಿಗೆ ಕಾಣಿಸುತ್ತಿಲ್ಲವೋ ಅಥವಾ ಗೊತ್ತಿದ್ದು, ಸುಮ್ಮನಿದ್ದಾರೋ ಎಂದರು.
ಮೋದಿಯವರು ನೀಡಿದ ಭರವಸೆ ಒಂದಾದರೂ ಈಡೇರಿದೆಯೇ. ಸುಳ್ಳು ಹೇಳುವುದೆ ಅವರ ಸಾಧನೆ ಎಂದರು.
20 ರಂದು ರಾಜಭವನ ಮುತ್ತಿಗೆ
ಕೃಷಿ,ಕೃಷಿ ಮಾರುಕಟ್ಟೆ ಗೆ ಮಾರಕವಾದ ಮೂರು ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ, ಕಾಂಗ್ರೆಸ್ ಪಕ್ಷ ಜ.20ರಂದು ರಾಜಭವನ ಮುತ್ತಿಗೆ ಹೋರಾಟ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮಂದುವರೆಯಲಾರರು. ಬಿಜೆಪಿ ಹಾಗೂ ಆರ್ ಎಸ್ಎಸ್ ಕೆಲ ಸ್ನೇಹಿತರು ನೀಡಿದ ಮಾಹಿತಿಯಂತೆ ಸಿಎಂ ಬದಲಾಗುತ್ತಾರೆ ಎಂದು ಹೇಳುತ್ತಿರುವೆ. ಬದಲಾಗುತ್ತಾರೋ ಬಿಡುತ್ತಾರೊ ಅವರೇ ಹೇಳಬೇಕು ಎಂದರು.
ಸಿಎಂ ಬದಲಾದರೆ ಬಿಜೆಪಿಯ ಬೇರೊಬ್ಬರು ಸಿಎಂ ಸಿಎಂ ಆಗುತ್ತಾರೆ. ಹಣ ವೆಚ್ಚ ಮಾಡಿ ಜನಾದೇಶ ಇಲ್ಲದೆಯೇ ಅಧಿಕಾರಕ್ಕೆ ಬಂದ ಸರಕಾರವನ್ನು ಅವರು ಕಳೆದು ಕೊಳ್ಳುವುದಿಲ್ಲ ಎಂದರು. ಬಿಜೆಪಿ ಸರಕಾರದ ವೈಫಲ್ಯ ವಿರುದ್ದ ಕಾಂಗ್ರೆಸ್ ಹೋರಾಟಕ್ಕಿಳಿಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ