ಅಧಿಕಾರ ಇಲ್ಲದೆ ಇದ್ದರೂ ಜನ ಆಶೀರ್ವಾದ ಮಾಡಿದ್ದಾರೆ: ಜನ್ಮದಿನದಂದು ಬಿಎಸ್ವೈ
ವಿಧಾನಸಭೆ ಅಧಿವೇಶನ ಬಳಿಕ ರಾಜ್ಯ ಪ್ರವಾಸ ಆರಂಭ
Team Udayavani, Feb 27, 2022, 11:56 AM IST
ಬೆಂಗಳೂರು: ಅಧಿಕಾರ ಇಲ್ಲದೆ ಇದ್ದರೂ ಜನ ಆಶೀರ್ವಾದ ಮಾಡಿದ್ದಾರೆ, ಮತ್ತೊಮ್ಮೆ ರಾಜ್ಯದಲ್ಲಿ ಪ್ರವಾಸ ಮಾಡುತ್ತೇನೆ, ಕಾಂಗ್ರೆಸ್ ನವರ ಯಾವುದೇ ಬೂಟಾಟಿಕೆ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ತರಲು ಶಕ್ತಿಮೀರಿ ಕೆಲಸ ಮಾಡುತ್ತೇನೆ. ಜನ ಮುಂದಿನ ಚುನಾವಣೆಯಲ್ಲಿ ನಮಗೆ ಆಶೀರ್ವಾದ ಮಾಡುತ್ತಾರೆ. ವಿಧಾನಸಭೆ ಅಧಿವೇಶನ ಬಳಿಕ ರಾಜ್ಯ ಪ್ರವಾಸ ಆರಂಭ ಮಾಡುತ್ತೇನೆ ಎಂದರು.
ಇದನ್ನೂ ಓದಿ:ಯಡಿಯೂರಪ್ಪ 79 ನೇ ಜನ್ಮ ದಿನಾಚರಣೆ:ವಿಶೇಷ ಪೂಜೆ, ರೈತ ಪರ ಕಾಳಜಿ
ಈ ವೇಳೆ ರಷ್ಯಾ – ಉಕ್ರೇನ್ ಯುದ್ಧ ವಿಚಾರವಾಗಿ ಮಾತನಾಡಿ, ಭಾರತೀಯರನ್ನು ಕರೆತರುವ ಎಲ್ಲ ರೀತಿಯ ಪ್ರಯತ್ನ ನಡೆಯುತ್ತಿದೆ. ಉಕ್ರೇನ್ ನಿಂದ ಎಲ್ಲ ವಿದ್ಯಾರ್ಥಿಗಳು ಮರಳಿ ಬರುತ್ತಿದ್ದಾರೆ. ಯಾರೂ ಗಾಬರಿ ಪಡಬೇಡಿ, ತೊಂದರೆ ಆಗದಂತೆ ಕರೆತರುತ್ತೇವೆ. ಮೋದಿಜೀ ಅವರು ಎಲ್ಲ ರೀತಿಯ ಸಹಕಾರ ಕೊಡುತ್ತಿದ್ದಾರೆ ಎಂದರು.
ಯಾರೂ ಅತಂಕ ಪಡೆದೆ ಇರಲು ಮನವಿ ಮಾಡುತ್ತೇನೆ. ಪೋಷಕರು ಯಾವುದೇ ರೀತಿ ಆತಂಕ ಪಡಬೇಡಿ. ಉಕ್ರೇನ್ನಲ್ಲಿ ಉಳಿದ ಭಾರತೀಯರು ಕೂಡಾ ಗಾಬರಿ ಪಡಬೇಡಿ ಎಂದರು.
ಈಗಾಗಲೇ 219 ವಿದ್ಯಾರ್ಥಿಗಳು ತಾಯಿ ನಾಡಿಗೆ ಮರಳಿ ಬಂದಿದ್ದಾರೆ. ಉಕ್ರೇನ್ನಲ್ಲಿರುವ ಕನ್ನಡಿಗರನ್ನು ಕರೆತರಲು ರಾಜ್ಯ ಸರ್ಕಾರ ಕೂಡ ಶಕ್ತಿ ಮೀರಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
MUST WATCH
ಹೊಸ ಸೇರ್ಪಡೆ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ