ಲಕ್ಷಾಂತರ ರೂ. ವೆಚ್ಚ: ಜಾತ್ರೆಗಷ್ಟೇ ಎಲ್ಲದರ ಬೆಳಕು! ಸಾಲಿಗ್ರಾಮ ಪ.ಪಂಚಾಯತ್‌ ದಾರಿದೀಪದ ಕಥೆ


Team Udayavani, Apr 27, 2021, 1:58 AM IST

ಲಕ್ಷಾಂತರ ರೂ. ವೆಚ್ಚ: ಜಾತ್ರೆಗಷ್ಟೇ ಎಲ್ಲದರ ಬೆಳಕು! ಸಾಲಿಗ್ರಾಮ ಪ.ಪಂಚಾಯತ್‌ ದಾರಿದೀಪದ ಕಥೆ

ಸಾಲಿಗ್ರಾಮ ಪ.ಪಂ. ದಾರಿದೀಪ ನಿರ್ವಹಣೆಗಾಗಿ ವರ್ಷಕ್ಕೆ ಸುಮಾರು 14 ಲಕ್ಷ ರೂ. ವೆಚ್ಚ ಮಾಡುತ್ತದೆ. ಆದರೂ ಎಲ್ಲ ದೀಪ ಸರಿಯಾಗಿ ಉರಿಯುವುದಿಲ್ಲ. ಹಾಳಾದ ದೀಪಗಳು ದುರಸ್ತಿಗೊಳ್ಳಲು ಹಲವು ತಿಂಗಳು ಬೇಕು. ಈ ಬಗ್ಗೆ ದೂರು ಕೇಳಿಬಂದರೂ ಸಾಮಾನ್ಯ ಸಭೆಯ ಚರ್ಚೆಗಷ್ಟೇ ಸೀಮಿತ. ಆಮೇಲೆ ವ್ಯವಸ್ಥೆ ಸರಿಪಡಿಸಬೇಕಾದ ಅಧಿಕಾರಿಗಳು ತಣ್ಣಗಿರುತ್ತಾರೆ, ಜನರು ಕತ್ತಲೆಯಲ್ಲಿರುತ್ತಾರೆ. ಈ ಬಾರಿಯಾದರೂ ವ್ಯವಸ್ಥೆ ಸರಿಯಾಗುತ್ತದೋ ಕಾದು ನೋಡಬೇಕು.

ಕೋಟ: ಬೀದಿ ದೀಪದ ನಿರ್ವಹಣೆ ಸಾಲಿಗ್ರಾಮ ಪಟ್ಟಣ ಪಂಚಾಯತ್‌ ನ ವೈಫ‌ಲ್ಯಗಳಲ್ಲಿ ಒಂದು. ಈ ಬಗ್ಗೆ ಹಲವು ಬಾರಿ ದೂರುಗಳು ಕೇಳಿಬಂದಿವೆ. ಸದಸ್ಯರೂ ಹಲವು ಸಾಮಾನ್ಯಸಭೆಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ವ್ಯವಸ್ಥೆ ಇದುವರೆಗೂ ಸುಧಾರಣೆಗೊಂಡಿಲ್ಲ.

ಇದೇ ಕಾರಣಕ್ಕೆ ನಿರ್ವಹಣಾ ಗುತ್ತಿಗೆದಾರರನ್ನು ಮತ್ತೆ-ಮತ್ತೆ ಬದಲಾಯಿಸಲಾಗುತ್ತದೆ. ಇದೀಗ ಎಪ್ರಿಲ್‌ 1ರಿಂದ ಮತ್ತೆ ಗುತ್ತಿಗೆದಾರರನ್ನು ಬದಲಾಯಿಸಿದ್ದು, ಇವರ ಕಾರ್ಯ ನಿರ್ವ ಹಣೆಯನ್ನು ಕಾದು ನೋಡಬೇಕಿದೆ.

ಸಾಲಿಗ್ರಾಮ ಪ.ಪಂ. ವ್ಯಾಪ್ತಿಯಲ್ಲಿ ಒಟ್ಟು 1,308 ದಾರಿದೀಪಗಳಿವೆ. ಪ್ರತಿ ತಿಂಗಳು 55 ಸಾವಿರ ರೂ.ಗಳಂತೆ ಒಟ್ಟು 6.60 ಲಕ್ಷ ರೂ. ಗಳನ್ನು ನಿರ್ವಹಣೆಗಾಗಿ ಗುತ್ತಿಗೆದಾರರಿಗೆ ಪಾವತಿಸಲಾಗುತ್ತದೆ. ಒಂದು ವರ್ಷ ಅಥವಾ ಆರು ತಿಂಗಳ ಅವಧಿಗೆ ನಿರ್ವಹಣೆ ನೀಡಲಾಗುತ್ತದೆ.

ಪ್ರತಿ ತಿಂಗಳು 70 ಸಾವಿರ ರೂಗಳಂತೆ 8.40 ಲಕ್ಷ ರೂ. ಗಳನ್ನು ವಿದ್ಯುತ್‌ ಬಿಲ್‌ಗಾಗಿ ವ್ಯಯಿಸಲಾಗುತ್ತಿದ್ದು, ವಾರ್ಷಿಕವಾಗಿ ಸುಮಾರು 15 ಲಕ್ಷ ರೂ. ಗಳನ್ನು ನಿರ್ವಹಣೆಗಾಗಿ ಖರ್ಚು ಮಾಡಲಾಗುತ್ತದೆ. ಹಾಳಾದ ದೀಪಗಳ ದುರಸ್ತಿ ಮತ್ತು ಬೀದಿದೀಪಗಳನ್ನು ಪ್ರತಿ ದಿನ ಆನ್‌-ಆಫ್‌ ಮಾಡುವ ಹೊಣೆಗಾರಿಕೆ ಗುತ್ತಿಗೆದಾರರದ್ದು.

ಬಿಲ್‌ ತಡೆ ಹಿಡಿಯಿರಿ
ಗುತ್ತಿಗೆದಾರರು ಸರಿಯಾಗಿ ನಿರ್ವಹಿಸದಿದ್ದರೆ ಬಿಲ್‌ ತಡೆ ಹಿಡಿಯಬೇಕು. ಅದರೊಂದಿಗೆ ಗುತ್ತಿಗೆ ನೀಡುವ ಸಂದರ್ಭದಲ್ಲೇ ಸರಿಯಾದ ಷರತ್ತುಗಳನ್ನು ವಿಧಿಸಬೇಕು ಎನ್ನುವ ಸಲಹೆಯೂ ಸದಸ್ಯರಿಂದ ಹಿಂದೆ ವ್ಯಕ್ತವಾಗಿದೆ. ಆದರೂ ಅಧಿಕಾರಿಗಳು ಅದಕ್ಕೆ ಮನಸ್ಸು ಮಾಡದಿರುವುದು ನಿಗೂಢವಾಗಿದೆ.

ಪ್ರತಿ ಬಾರಿ ದೂರು
ನಿರ್ವಹಣೆ ಹೊಣೆ ಹೊತ್ತ ಗುತ್ತಿಗೆದಾರರು ಸರಿಯಾಗಿ ಕೆಲಸ ನಿರ್ವಹಿಸುವುದಿಲ್ಲ ಎಂಬ ಆರೋಪ ಇದೆ. ಹೀಗಾಗಿಯೇ ದಾರಿ ದೀಪಗಳು ಆಗಾಗ್ಗೆ ಹಾಳಾಗುತ್ತವೆ. ಕೂಡಲೇ ಹಾಳಾದ ಟ್ಯೂಬ್‌ಗಳನ್ನು ಬದಲಾಯಿಸುವುದಿಲ್ಲ. ಕೆಲವೊಮ್ಮೆ ನಿರ್ವಹಣೆಗೆ ತಿಂಗಳುಗಟ್ಟಲೆ ತೆಗೆದುಕೊಳ್ಳಲಾಗುತ್ತದೆ ಎನ್ನುವ ದೂರು ಇದೆ. ಈ ಬಗ್ಗೆ ಸಾಮಾನ್ಯ ಸಭೆಗಳಲ್ಲೂ ಚರ್ಚೆ ನಡೆದಿದೆ. ಆದರೂ ಗುತ್ತಿಗೆದಾರರಿಂದ ಸರಿಯಾಗಿ ಕೆಲಸ ಮಾಡಿಸುವಲ್ಲಿ ಅಧಿಕಾರಿಗಳು ವಿಫ‌ಲವಾಗಿದ್ದಾರೆ ಎಂಬುದು ಕೇಳಿಬರುತ್ತಿರುವ ಅಭಿಪ್ರಾಯ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.