ಕರಾವಳಿಯಲ್ಲಿ ಕೋಮು ಸಾಮರಸ್ಯ ಕೆಡಿಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ
Team Udayavani, Dec 15, 2021, 4:29 PM IST
ಬೆಳಗಾವಿ: ಕರಾವಳಿ ಜಿಲ್ಲೆಯಲ್ಲಿ, ಕೋಮು ಸೌಹಾರ್ದವನ್ನು ಕಲುಷಿತ ಗೊಳಿಸುವ, ಸಮಾಜ ವಿರೋಧಿ ಶಕ್ತಿಗಳನ್ನು ನಿರ್ದಾಕ್ಷಿಣ್ಯವಾಗಿ, ಬಗ್ಗು ಬಡಿಯಲಾಗುವುದು, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಬುಧವಾರ ವಿಧಾನಸಭೆಯಲ್ಲಿ ತೀವ್ರ ಎಚ್ಚರಿಕೆ ನೀಡಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ, ಕಾಂಗ್ರೆಸ್ ಸದಸ್ಯ ಯು ಟಿ ಖಾದರ್ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು, “ಕರಾವಳಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕೋಮು ಸಾಮರಸ್ಯ ವಾತಾವರಣವನ್ನು ಕೆಡಿಸುವ, ಕೆಲವರ, ಪ್ರಯತ್ನಗಳ ಬಗ್ಗೆ ವರದಿಗಳನ್ನು ಗಮನಿಸಿದ್ದೇನೆ, ಅವುಗಳಿಗೆ ನಿಯಂತ್ರಣ ಹೇರುವ ಬಗ್ಗೆ ಗಂಭೀರ ಪ್ರಯತ್ನ ನಡೆದಿದೆ” ಎಂದು ತಿಳಿಸಿದರು.
ಇತ್ತೀಚೆಗೆ, ಉಪ್ಪಿನಂಗಡಿ ಪಟ್ಟಣದಲ್ಲಿ ಪೊಲೀಸರ ಮೇಲೆಯೂ ಹಲ್ಲೆಯಾಗಿದೆ, ಸಾಮಾಜಿಕ ಜಾಲತಾಣ ವನ್ನು ದುರುಪಯೋಗ ಪಡಿಸಿಕೊಂಡು, ದೇಶ ವಿರೋಧಿ ಸಂದೇಶಗಳನ್ನು ಹರಿಬಿಡಲಾಗುತ್ತಿದೆ, ಎಂದ ಸಚಿವರು ” ಸ್ಥಳೀಯ ಪೊಲೀಸರು ಈ ಎಲ್ಲ ವಿದ್ಯಮಾನಗಳನ್ನು ಗಮನಿಸಿ ಕ್ರಮ ಕೈಗೊಂಡಿದ್ದಾರೆ, ಅವರ ಪ್ರಯತ್ನ ದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದೂ ಸಚಿವರು ಹೇಳಿದರು.
ಇದಕ್ಕೆ ಮೊದಲು ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯ ಯು ಟಿ ಖಾದರ್, ಜಿಲ್ಲೆಯಲ್ಲಿ ಅನೈತಿಕ ಗೂಂಡಾಗಿರಿ ಪ್ರಕರಣಗಳು ಹೆಚ್ಚುತ್ತಿದ್ದು,ವಿದ್ಯಾರ್ಥಿಗಳ ಮೇಲೆ ಹಲ್ಲೆ ಘಟನೆಗಳು, ತ್ರಿಶೂಲ ದೀಕ್ಷೆಯಂತ ಕಾರ್ಯಕ್ರಮಗಳಿಂದ ಕೋಮು ಸೌಹಾರ್ದಕ್ಕೆ ಸವಾಲಾಗಿದೆ, ಪೊಲೀಸರಿಗೆ ಪರಿಸ್ಥಿತಿ ಎದುರಿಸಲು, ಮುಕ್ತ ಅವಕಾಶ ನೀಡಬೇಕು, ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ