ನಕ್ಸಲೀಯರ ವಿರುದ್ಧ ಕಠಿನ ಕ್ರಮ ಅತ್ಯಗತ್ಯ


Team Udayavani, Apr 27, 2023, 6:04 AM IST

naxals

ಕೇಂದ್ರ ಸರಕಾರ ಹಳೆಯ 500 ಮತ್ತು 1,000 ರೂ. ನೋಟುಗಳನ್ನು ಅಮಾನ್ಯಗೊಳಿಸಿದ ಅನಂತರ ಮತ್ತು ಉಗ್ರವಾದದ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಅಕ್ಷರಶಃ ಅನುಸರಿಸಲಾರಂಭಿಸಿದ ಬಳಿಕ ದೇಶದಲ್ಲಿ ನಕ್ಸಲ್‌ವಾದ ಕ್ಷೀಣಿಸತೊಡಗಿದೆ. ಇದರ ಹೊರತಾಗಿಯೂ ಛತ್ತೀಸ್‌ಗಢ, ಝಾರ್ಖಂಡ್‌, ತೆಲಂಗಾಣ, ಒಡಿಶಾ, ಪಶ್ಚಿಮ ಬಂಗಾಲ, ಮಧ್ಯಪ್ರದೇಶ, ಆಂಧ್ರಪ್ರದೇಶ, ಮಹಾರಾಷ್ಟ್ರದ ಕೆಲವೆಡೆ ಅದರಲ್ಲೂ ಮುಖ್ಯವಾಗಿ ಈ ರಾಜ್ಯಗಳ ಅರಣ್ಯ ಪ್ರದೇಶಗಳ ತಪ್ಪಲಿನಲ್ಲಿರುವ ಗ್ರಾಮಗಳಲ್ಲಿ ನಕ್ಸಲೀಯರು ಸದ್ದಿಲ್ಲದೆ ತಮ್ಮ ತೀವ್ರಗಾಮಿ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದ್ದಾರೆ. ಆಗೊಮ್ಮೆ ಈಗೊಮ್ಮೆ ಎಂಬಂತೆ ಪೊಲೀಸರು ಮತ್ತು ರಕ್ಷಣ ಪಡೆಗಳನ್ನು ಗುರಿಯಾಗಿಸಿ ದಾಳಿಗಳನ್ನು ನಡೆಸುವ ಮೂಲಕ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ನಕ್ಸಲೀಯರು ನಡೆಸುತ್ತಲೇ ಬಂದಿದ್ದಾರೆ. ನಕ್ಸಲೀಯರ ಇಂತಹ ಕುಕೃತ್ಯಕ್ಕೆ ಸಾಕ್ಷಿ ಬುಧವಾರ ಛತ್ತೀಸ್‌ಗಢದ ದಂತೇವಾಡದಲ್ಲಿ ನಕ್ಸಲೀಯರು ಪೊಲೀಸರನ್ನು ಗುರಿಯಾಗಿಸಿ ನಡೆಸಿದ ದಾಳಿ. ನಕ್ಸಲೀಯರು ದಂತೇವಾಡದ ಅರಣು³ರ ಪ್ರದೇಶದಲ್ಲಿ ನಡೆಸಿದ ಈ ಮಾರಕ ದಾಳಿಗೆ ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಕಾವಲು ಪಡೆ(ಡಿಆರ್‌ಜಿ)ಯ 10 ಸಿಬಂದಿ ಹುತಾತ್ಮರಾದರೆ, ಇವರು ಪ್ರಯಾಣಿಸುತ್ತಿದ್ದ ಸ್ಥಳೀಯ ಮಿನಿ ಗೂಡ್ಸ್‌ ವ್ಯಾನ್‌ನ ಚಾಲಕ ಸಾವನ್ನಪ್ಪಿದ್ದಾರೆ.

ಸರಕಾರ ಪೊಲೀಸ್‌ ಇಲಾಖೆಯ ಡಿಆರ್‌ಜಿಯ ತಂಡವೊಂದು ಬುಧವಾರ ದಂತೇವಾಡದ ನಕ್ಸಲ್‌ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿ, ಸ್ಥಳೀಯ ಗೂಡ್ಸ್‌ ವಾಹನವೊಂದರಲ್ಲಿ ವಾಪಸಾಗುತ್ತಿದ್ದ ವೇಳೆ ಸುಧಾರಿತ ಸ್ಫೋಟಕ ಸಾಧನವನ್ನು ಸ್ಫೋಟಿಸಿ ನಕ್ಸಲೀಯರು ಈ ಕೃತ್ಯ ಎಸಗಿದ್ದಾರೆ. ನಕ್ಸಲರು ಪೂರ್ವನಿಯೋಜಿತವಾಗಿಯೇ ಈ ದಾಳಿ ನಡೆಸಿರುವುದು ಮೇಲ್ನೋಟಕ್ಕೆ ಸ್ಪಷ್ಟ. ಕಳೆದೆರಡು ವರ್ಷಗಳಲ್ಲಿ ನಕ್ಸಲೀಯರು ನಡೆಸಿದ ಅತ್ಯಂತ ಮಾರಕ ದಾಳಿ ಇದಾಗಿದೆ. ಡಿಆರ್‌ಜಿಗೆ ಸ್ಥಳೀಯ ಬುಡಕಟ್ಟು ಮತ್ತು ಆದಿವಾಸಿ ಜನರನ್ನೇ ನೇಮಿಸಿಕೊಳ್ಳುತ್ತಿದೆ. ಅರಣ್ಯ ಪ್ರದೇಶಗಳು ಮತ್ತು ನಕ್ಸಲೀಯರ ಚಲನವಲನಗಳ ಬಗೆಗೆ ಸ್ಥಳೀಯರಿಗೆ ಹೆಚ್ಚಿನ ಮಾಹಿತಿಗಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಡಿಆರ್‌ಜಿಗೆ ಇವರನ್ನೇ ನೇಮಿಸಿಕೊಂಡು ಸೂಕ್ತ ತರಬೇತಿಯನ್ನು ನೀಡುತ್ತಿದೆ. ಇದೇ ಹಿನ್ನೆಲೆಯಲ್ಲಿ ನಕ್ಸಲೀಯರು ಡಿಆರ್‌ಜಿ ಸಿಬಂದಿಯನ್ನು ಗುರಿಯಾಗಿಸಿ ಈ ದಾಳಿ ನಡೆಸಿದ್ದಾರೆ.

ನಕ್ಸಲರ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರಕಾರ ತೀವ್ರ ತೆರನಾದ ಕಾರ್ಯಾಚರಣೆ ಆರಂಭಿಸಿದ ಬಳಿಕ ನಕ್ಸಲೀಯರು ತಮ್ಮ ದಾಳಿಯ ಕಾರ್ಯತಂತ್ರವನ್ನು ಬದಲಾಯಿಸಿದ್ದರು. ಈ ಹಿಂದೆ ಪೊಲೀಸರು ಮತ್ತು ರಕ್ಷಣ ಪಡೆಗಳ ದೊಡ್ಡ ಗುಂಪುಗಳನ್ನು ನಕ್ಸಲೀಯರು ಗುರಿಯಾಗಿಸುತ್ತಿದ್ದರೆ ಈಗ ಸಣ್ಣ ಗುಂಪುಗಳನ್ನು ತಮ್ಮ ಗುರಿಯಾಗಿಸುತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ ಈಗ ನಕ್ಸಲೀಯರು ಈ ಹಿಂದಿನ ಸಾಂಪ್ರದಾಯಿಕ ಶಸ್ತ್ರಾಸ್ತ್ರಗಳ ಬದಲಾಗಿ ಐಇಡಿ ಯಂತಹ ಸ್ಫೋಟಕ ಸಾಧನಗಳನ್ನು ದಾಳಿಗೆ ಬಳಸಿಕೊಳ್ಳತೊಡಗಿದ್ದಾರೆ. ಒಟ್ಟಾರೆ ದೇಶದಲ್ಲಿ ನಕ್ಸಲ್‌ ಚಟುವಟಿಕೆ ಕ್ಷೀಣವಾಗಿದ್ದರೂ ಅಲ್ಲೊಮ್ಮೆ ಇಲ್ಲೊಮ್ಮೆ ಎಂಬಂತೆ ನಕ್ಸಲೀಯರು ದಾಳಿ ನಡೆಸುವ ಮೂಲಕ ಸರಕಾರದ ವಿರುದ್ಧದ ತಮ್ಮ ಹೋರಾಟ ನಿಂತಿಲ್ಲ ಎಂದು ತೋರ್ಪಡಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ.

ನಕ್ಸಲೀಯರನ್ನು ಮಟ್ಟ ಹಾಕಲು ಕೇಂದ್ರ ಮತ್ತು ರಾಜ್ಯ ಸರಕಾರ ಪಣತೊಟ್ಟು ಕಾರ್ಯಾಚರಣೆ ನಡೆಸುತ್ತಿದ್ದರೂ ನಕ್ಸಲೀಯರು ಇಂಥ ದಾಳಿಗಳ ಮೂಲಕ ಪೊಲೀಸರು ಮತ್ತು ಭದ್ರತಾ ಪಡೆಗಳಿಗೆ ಸಡ್ಡು ಹೊಡೆಯುತ್ತಿರುವುದು ಒಂದಿಷ್ಟು ಆತಂಕ ಮೂಡಿಸಿದೆ. ವಿದೇಶಗಳ ಉಗ್ರಗಾಮಿ ಸಂಘಟನೆಗಳು ದೇಶದೊಳಗಿನ ತೀವ್ರಗಾಮಿ ಸಂಘಟನೆಗಳನ್ನು ಬಳಸಿಕೊಂಡು ದೇಶದಲ್ಲಿ ಹಿಂಸಾಚಾರ, ಭಯೋ ತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಬಗೆಗೆ ಈಗಾಗಲೇ ತನಿಖಾ ಸಂಸ್ಥೆಗಳಿಗೆ ಸಾಕಷ್ಟು ಮಾಹಿತಿ, ಸಾಕ್ಷ್ಯಾಧಾರಗಳು ಲಭ್ಯವಾಗಿವೆ. ಇದನ್ನು ಆಧಾರವಾಗಿಸಿ ಆಳ ವಾಗಿ ತನಿಖೆ ನಡೆಸಿದ್ದೇ ಆದಲ್ಲಿ ದೇಶದಲ್ಲಿ ನಕ್ಸಲ್‌ ಹೋರಾಟವನ್ನು ಜೀವಂತ ವಾಗಿಡುವ ಪ್ರಯತ್ನದಲ್ಲಿ ಶಾಮೀಲಾಗಿರುವವರನ್ನು ಪತ್ತೆಹಚ್ಚಲು ಸಾಧ್ಯ. ನಕ್ಸಲ್‌ ನಿಗ್ರಹ ಕಾರ್ಯಾಚರಣೆಯ ಜತೆಯಲ್ಲಿ ದೇಶದಲ್ಲಿ ಹಿಂಸಾತ್ಮಕ ಹೋರಾಟ, ಭಯೋತ್ಪಾದನ ಕೃತ್ಯಗಳಿಗೆ ಪರೋಕ್ಷವಾಗಿ ನೆರವಾಗುತ್ತಿರುವವರ ವಿರುದ್ಧ ಕಠಿನ ಕ್ರಮ ಕೈಗೊಂಡದ್ದೇ ಆದಲ್ಲಿ ನಕ್ಸಲರ ಮೂಲೋತ್ಪಾಟನೆ ಸಾಧ್ಯ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.