ಹಳ್ಳಿಗಳನ್ನು ಮಹಿಳಾ ಶೋಷಣೆ ಮುಕ್ತವಾಗಿಸಲು ಪಣ

ಲಿಂಗ-ಆಧಾರಿತ ದೌರ್ಜನ್ಯ ನಿವಾರಿಸಿ ಮಹಿಳಾ ಸ್ನೇಹಿ ಗ್ರಾಮಗಳನ್ನಾಗಿ ಮಾಡಲು ಅಭಿಯಾನ

Team Udayavani, Nov 26, 2022, 6:25 AM IST

womenಹಳ್ಳಿಗಳನ್ನು ಮಹಿಳಾ ಶೋಷಣೆ ಮುಕ್ತವಾಗಿಸಲು ಪಣಹಳ್ಳಿಗಳನ್ನು ಮಹಿಳಾ ಶೋಷಣೆ ಮುಕ್ತವಾಗಿಸಲು ಪಣ

ಬೆಂಗಳೂರು: ಹಳ್ಳಿಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗು ತ್ತಿರುವ ಬೆನ್ನಲ್ಲೇ, ಗ್ರಾಮೀಣ ಪ್ರದೇಶ ಗಳನ್ನು ಮಹಿಳಾ ಶೋಷಣೆ ಮುಕ್ತವನ್ನಾಗಿ ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಯೋಜನೆ ಹಾಕಿಕೊಂಡಿದೆ.

ಈಗಾಗಲೇ “ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್‌ ಅಭಿಯಾನ’ ಚಾಲನೆಯಲ್ಲಿದೆ. ಇದರ ಜತೆಗೆ ಗ್ರಾಮಗಳನ್ನು “ಮಹಿಳಾ ಸ್ನೇಹಿ’ ಮಾಡಲು ಇಲಾಖೆ ವಿಶೇಷ ಅಭಿಯಾನ ಹಮ್ಮಿಕೊಂಡಿದೆ.

“ಲಿಂಗ ಆಧಾರಿತ ಹಿಂಸಾಚಾರ ಕೊನೆ ಗೊಳಿಸುವುದು’ ಈ ವಿಶೇಷ ಅಭಿಯಾನದ ಘೋಷ ವಾಕ್ಯವಾಗಿದೆ. ರಾಜ್ಯದ ಎಲ್ಲ ಗ್ರಾಮ ಪಂಚಾಯತ್‌ಗಳಲ್ಲಿ ನ.25ರಿಂದ ಅಭಿಯಾನ ಪ್ರಾರಂಭವಾಗಿದ್ದು, ಡಿ. 23ರ ವರೆಗೆ ಒಟ್ಟು ಒಂದು ತಿಂಗಳ ಕಾಲ ಈ ಅಭಿಯಾನ ನಡೆಯಲಿದೆ. ಅಂತಾ ರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನಾಚರಣೆಯಾದ ನ.25ರಂದು ಗ್ರಾಮ ಪಂಚಾಯತ್‌ಗಳಲ್ಲಿ ವಿಶೇಷ ಗ್ರಾಮ ಸಭೆ ನಡೆಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವು ದೀನ್‌ದಯಾಳ್‌ ಅಂತ್ಯೋ ದಯ ಯೋಜನೆಯ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್‌ ಮಹತ್ವಾಕಾಂಕ್ಷಿ ಯೋಜನೆಯಡಿ ಲಿಂಗ ಆಧಾರಿತ ತಾರತಮ್ಯ ತೊಡೆದುಹಾಕಲು, ಲಿಂಗ ನ್ಯಾಯಯುತ ಸಮಾಜವನ್ನು ಸ್ಥಾಪಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಲಿಂಗ-ಆಧಾರಿತ ದೌರ್ಜನ್ಯ ಮತ್ತು ಹಿಂಸಾಚಾರ ಕೊನೆಗಾಣಿಸುವುದು ಹಾಗೂ ಇದರ ಬಗ್ಗೆ ಜಾಗೃತಿ ಮೂಡಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಭಿಯಾನದ ಪ್ರಮುಖ ಚಟುವಟಿಕೆಗಳು
– ನ. 25ರಂದು ಎಲ್ಲ ಗ್ರಾ.ಪಂ.ಗಳಲ್ಲಿ ವಿಶೇಷ ಗ್ರಾಮ ಸಭೆ ಆಯೋಜನೆ.
– ಲಿಂಗ-ಆಧಾರಿತ ದೌರ್ಜನ್ಯ, ಮಾನವ ಕಳ್ಳ ಸಾಗಣೆ ಇತರ ವಿಷಯಗಳ ಕುರಿತು ಚರ್ಚೆ, ಜಾಥಾ ಇತ್ಯಾದಿ ಕಾರ್ಯಕ್ರಮಗಳು ಹಮ್ಮಿಕೊಳ್ಳುವುದು.
– ಲಿಂಗ ಸಮಾನತೆ ಹಾಗೂ ಲಿಂಗ-ಆಧಾರಿತ ದೌರ್ಜನ್ಯ ಕುರಿತು ಗ್ರಾ.ಪಂ. ಸದಸ್ಯರಿಗೆ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸುವುದು.
– ಗ್ರಾಮೀಣ ಮಹಿಳಾ ಕೂಲಿ ಕಾರ್ಮಿಕರಿಗೆ ಲಿಂಗ-ಆಧಾರಿತ ದೌರ್ಜನ್ಯ ಕುರಿತು ಅರಿವು ಮೂಡಿಸುವುದು.
– ದೀನ್‌ದಯಾಳ್‌ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್‌ ಅಡಿಯಲ್ಲಿ ರಚಿಸಲಾದ ಮಹಿಳಾ ಸ್ವಸಹಾಯ ಸಂಘಗಳು, ಗ್ರಾ.ಪಂ. ಮಟ್ಟದ ಒಕ್ಕೂಟಗಳ ಚಟುವಟಿಕೆಗಳಲ್ಲಿ ಮತ್ತು ಕಾರ್ಯಕ್ರಮಗಳನ್ನು ಭಾಗಿಯಾಗುವುದು.

“ನವ ಚೇತನ’ ಅಭಿಯಾನಕ್ಕೆ ಚಾಲನೆ
ಗ್ರಾಮೀಣ ಭಾಗಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಲಿಂಗ ಅಸಮಾನತೆ ಹೋಗಲಾಡಿಸಿ, ಗ್ರಾಮಗಳನ್ನು ಮಹಿಳಾ ಸ್ನೇಹಿಗಳನ್ನಾಗಿಸುವ ನಿಟ್ಟಿನಲ್ಲಿ ದೇಶವ್ಯಾಪಿ ಎಲ್ಲ ಗ್ರಾಮ ಪಂಚಾಯತ್‌ಗಳಲ್ಲಿ ಹಮ್ಮಿಕೊಂಡಿರುವ ವಿಶೇಷ ಅಭಿಯಾನ “ನವ ಚೇತನ’ಕ್ಕೆ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಗಿರಿರಾಜ್‌ ಸಿಂಗ್‌ ಶುಕ್ರವಾರ ಚಾಲನೆ ನೀಡಿದರು. ದಿಲ್ಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರ ಮೇಲೆ ನಡೆಯುವ ಯಾವುದೇ ದೌರ್ಜನ್ಯವನ್ನು ಧರ್ಮದ ಚೌಕಟ್ಟಿನ ಮೂಲಕ ನೋಡಬಾರದು. ಅಂತಹ ಘಟನೆಗಳನ್ನು ಯಾವುದೇ ಪೂರ್ವಾಗ್ರಹವಿಲ್ಲದೆ ಎಲ್ಲರೂ ಸಂಪೂರ್ಣವಾಗಿ ಖಂಡಿಸಬೇಕು ಎಂದು ಹೇಳಿದರು.

ರಾಜ್ಯದ ಎಲ್ಲ ಗ್ರಾಮ ಪಂಚಾಯತ್‌ಗಳಲ್ಲಿ ನಾಲ್ಕು ವಾರಗಳ ಕಾಲ ಲಿಂಗ-ಆಧಾರಿತ ದೌರ್ಜನ್ಯ ನಿವಾರಣೆ ಕುರಿತು ಜಾಗೃತಿ ಮೂಡಿಸುವುದರ ಜತೆಗೆ ಮಹಿಳೆಯ ಅಭಿವೃದ್ಧಿಗೆ ಪೂರಕ ಚಟುವಟಿಕೆಗಳನ್ನು ಕೈಗೊಳ್ಳುವುದರ ಮೂಲಕ ಮಹಿಳಾ ಸ್ನೇಹಿ ಗ್ರಾಮಗಳನ್ನಾಗಿ ಮಾಡಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
– ಉಮಾ ಮಹಾದೇವನ್‌,
ಅಪರ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ

ಟಾಪ್ ನ್ಯೂಸ್

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

joshi

ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

NIA (2)

ಪ್ರವೀಣ್ ನೆಟ್ಟಾರು ಕೇಸ್ : ಸುಳ್ಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಿದ ಎನ್‌ಐಎ

4-shivamogga

ಒಳ ಮೀಸಲಾತಿ ಬೇಗುದಿ ; ಯಡಿಯೂರಪ್ಪ ಮನೆಗೆ ಕಲ್ಲು ತೂರಾಟ, ಪ್ರತಿಭಟನೆ

tdy-16

ಆಕಾಂಕ್ಷಾ ದುಬೆ ಬಳಿಕ ಮತ್ತೊಂದು ಘಟನೆ: ನೇಣು ಬಿಗಿದ ಸ್ಥಿತಿಯಲ್ಲಿ ಯುವ ನಟಿ ಪತ್ತೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shivamogga

ಒಳ ಮೀಸಲಾತಿ ಬೇಗುದಿ ; ಯಡಿಯೂರಪ್ಪ ಮನೆಗೆ ಕಲ್ಲು ತೂರಾಟ, ಪ್ರತಿಭಟನೆ

tdy-9

ಬೊಂಬೆನಗರಿಯಲ್ಲಿ ಕೈ ಅಭ್ಯರ್ಥಿ ಕಗ್ಗಂಟು

ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ?

ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ?

ಇಂದು ರೆಬೆಲ್‌ಸ್ಟಾರ್‌ ಅಂಬರೀಶ್‌ ಸ್ಮಾರಕ ಲೋಕಾರ್ಪಣೆ

ಇಂದು ರೆಬೆಲ್‌ಸ್ಟಾರ್‌ ಅಂಬರೀಶ್‌ ಸ್ಮಾರಕ ಲೋಕಾರ್ಪಣೆ

ಚುನಾವಣಾ ಅಕ್ರಮಗಳ ತಡೆಗೆ ಗಡಿ ಚೆಕ್‌ಪೋಸ್ಟ್‌ ಜಾಲ; ಈಗಾಗಲೇ 171 ತಪಾಸಣಾ ವ್ಯವಸ್ಥೆ ಸ್ಥಾಪನೆ

ಚುನಾವಣಾ ಅಕ್ರಮಗಳ ತಡೆಗೆ ಗಡಿ ಚೆಕ್‌ಪೋಸ್ಟ್‌ ಜಾಲ; ಈಗಾಗಲೇ 171 ತಪಾಸಣಾ ವ್ಯವಸ್ಥೆ ಸ್ಥಾಪನೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

1-weqewqew

ಮಂಗಳೂರಿನಲ್ಲಿ ಗಾಂಜಾ ಜಾಲ; ಪೆಡ್ಲರ್ ಸಹಿತ ನಾಲ್ವರ ಬಂಧನ

joshi

ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ

tdy-19

ಗುಬ್ಬಿ, ತುಮಕೂರು ನಗರ, ಗ್ರಾಮಾಂತರ ಕ್ಷೇತ್ರ ಕಗ್ಗಂಟು

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.