ಸುವರ್ಣಸೌಧದದಲ್ಲಿ ರಾಯಣ್ಣ, ಚೆನ್ನಮ್ಮ ಪ್ರತಿಮೆ ಸ್ವಾಗತಾರ್ಹ:ಸಚಿವ ಎಂಟಿಬಿ
Team Udayavani, Dec 21, 2021, 1:04 PM IST
ಬೆಳಗಾವಿ: ಸುವರ್ಣಸೌಧದ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಅವರ ಪ್ರತಿಮೆ ಅನಾವರಣ ಮಾಡುವ ಮುಖ್ಯಮಂತ್ರಿಗಳ ನಿರ್ಧಾರ ಅತ್ಯಂತ ಸ್ವಾಗತಾರ್ಹ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಮಂಗಳವಾರ ಹೇಳಿದ್ದಾರೆ.
ಬೆಳಗಾವಿಯ ಅನಗೋಳದಲ್ಲಿರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯ ಸ್ಥಳಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ ಗೌರವ ಸಲ್ಲಿಸಿದ ನಂತರ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಭಾಷಾ ಸಾಮರಸ್ಯ ಹಾಳು ಮಾಡುತ್ತ ಒಕ್ಕೂಟ ವ್ಯವಸ್ಥೆಗೆ ಕಳಂಕ ತರುತ್ತಿರುವ ಎಂಇಎಸ್ ನಂತಹ ಕಿಡಿಗೇಡಿ ಸಂಘಟನೆಯ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.
ಸಂಗೊಳ್ಳಿ ರಾಯಣ್ಣ ಮಹಾನ್ ದೇಶಭಕ್ತ,ದೇಶದ ಹೆಮ್ಮೆ, ಸ್ವಾಭಿಮಾನದ ಪ್ರತೀಕ,ಮಹಾನ್ ಯೋಧ-ಅಂತಹ ಸೇನಾನಿಯನ್ನು ಅವಮಾನಿಸುವುದು ಎಂದರೆ ಅದು ದೇಶಕ್ಕೆ ಮಾಡಿದ ಅವಮಾನ.ಹಾಗಾಗಿ, ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ವಿರೂಪಗೊಳಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ತಗೆದುಕೊಂಡಿದ್ದು ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ, ಶಿವಾಜಿ ಮಹಾರಾಜ-ಈ ಎಲ್ಲರೂ ದೇಶದ ಒಳಿತಿಗಾಗಿ ದುಡಿದವರು ಎನ್ನುವುದನ್ನು ಅರಿತು ನಾವೆಲ್ಲರೂ ಪರಸ್ಪರ ಸಹೋದರ ಭಾವದಿಂದ ಕೆಲಸ ಮಾಡಬೇಕಿದೆ ಎಂದು ಸಚಿವ ಎಂಟಿಬಿ ನಾಗರಾಜ್ ಕಿವಿ ಮಾತು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ