Online ಪಾಠಕ್ಕೆ ಸ್ಮಾರ್ಟ್ ಫೋನ್ ಕೊಡಿಸಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ
Team Udayavani, Aug 18, 2020, 3:17 PM IST
ಚಾಮರಾಜನಗರ: ಆನ್ ಲೈನ್ ಪಾಠಕ್ಕೆ ಸ್ಮಾರ್ಟ್ ಫೋನ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯೋರ್ವಳು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ.
ಸಾಗಡೆ ಸರ್ಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ, ರಾಜೇಶ್ ಎಂಬುವರ ಪುತ್ರಿ ಹರ್ಷಿತಾ (15) ಮೃತಪಟ್ಟವಳು.
9ನೇ ತರಗತಿ ತೇರ್ಗಡೆಯಾಗಿ, ಈ ವರ್ಷ 10 ತರಗತಿಗೆ ಹರ್ಷಿತಾ ದಾಖಲಾಗಿದ್ದಳು.
ಶಾಲೆಯಲ್ಲಿ ಆನ್ ಲೈನ್ ಕ್ಲಾಸ್ ನಡೆಯುತ್ತಿದ್ದು, ಸಹಪಾಠಿಗಳ ಬಳಿ ಸ್ಮಾರ್ಟ್ ಫೋನ್ ಇದೆ. ತನಗೂ ಮೊಬೈಲ್ ಬೇಕು ಎಂದು ಮನೆಯಲ್ಲಿ ಹಟ ಮಾಡುತ್ತಿದ್ದಳು. ವೃತ್ತಿಯಲ್ಲಿ ಟೈಲರ್ ಆಗಿರುವ ರಾಜೇಶ್ ಅವರು, ಆರ್ಥಿಕವಾಗಿ ಸಬಲರಾಗಿರಲಿಲ್ಲ. ಸ್ವಲ್ಪ ದಿನಗಳ ನಂತರ ಮೊಬೈಲ್ ತೆಗೆದುಕೊಡುವುದಾಗಿ ಭರವಸೆ ನೀಡಿದ್ದರು ಎಂದು ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಲಾಗಿದೆ.
ಅಪ್ಪನ ಮಾತನ್ನು ಕೇಳದ ಹರ್ಷಿತಾ, ತನಗೆ ಈಗಲೇ ಫೋನ್ ಬೇಕು ಎಂದು ಒತ್ತಾಯಿಸಿ, ಬೆಳೆಗಳಿಗೆ ಸಿಂಪಡಿಸಲು ತಂದಿದ್ದ ಕ್ರಿಮಿನಾಶಕವನ್ನು ಸೇವಿಸಿದ್ದಾಳೆ.
ತೀವ್ರವಾಗಿ ಅಸ್ವಸ್ಥಗೊಂಡ ವಿದ್ಯಾರ್ಥಿನಿಯನ್ನು ತಕ್ಷಣ ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಳು.
ಆನ್ ಲೈನ್ ಪಾಠ ಕೇಳಲು ಮೊಬೈಲ್ ಕೊಡಿಸುವಂತೆ ಹರ್ಷಿತಾ ಕೇಳಿದ್ದಳು. ದುಡ್ಡು ಬಂದ ನಂತರ ಕೊಡಿಸುವುದಾಗಿ ಹೇಳಿದ್ದೆ ಎಂಬುದಾಗಿ ಹರ್ಷಿತಾ ತಂದೆ ದೂರಿನಲ್ಲಿ ತಿಳಿಸಿದ್ದಾರೆ. ಅದರ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಚಾಮರಾಜನಗರ ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಲೋಹಿತ್ ಕುಮಾರ್ ತಿಳಿಸಿದ್ದಾರೆ
ಸಾಗಡೆ ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಗಜೇಂದ್ರ ಪ್ರತಿಕ್ರಿಯಿಸಿ ನಾವು ಆನ್ ಲೈನ್ ತರಗತಿ ಮಾಡುತ್ತಿರಲಿಲ್ಲ. ವಿದ್ಯಾಗಮ ಕಾರ್ಯಕ್ರಮದ ಅಡಿಯಲ್ಲಿ ಊರಿಗೆ ಹೋಗಿ ಮಕ್ಕಳನ್ನು ಒಂದೆಡೆ ಸೇರಿಸಿ ಪಾಠ ಮಾಡುತ್ತಿದ್ದೆವು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
Globant; ಮನೆಯಿಂದಲೇ 30,000 ಮಂದಿ ಕೆಲಸ
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?