ವಿದ್ಯಾಗಮಕ್ಕೆ 10 ಕಿಮೀ ನಡೆಯುವ ಮಕ್ಕಳು! ಶಾಲಾ ಸಮಯಕ್ಕೆ ಸಾರಿಗೆ ವ್ಯವಸ್ಥೆಯಿಲ್ಲದೇ ತೊಂದರೆ


Team Udayavani, Jan 6, 2021, 11:28 AM IST

ವಿದ್ಯಾಗಮಕ್ಕೆ 10 ಕಿಮೀ ನಡೆಯುವ ಮಕ್ಕಳು! ಶಾಲಾ ಸಮಯಕ್ಕೆ ಸಾರಿಗೆ ವ್ಯವಸ್ಥೆಯಿಲ್ಲದೇ ತೊಂದರೆ

ಕೊಪ್ಪಳ: ಶಿಕ್ಷಣ ಇಲಾಖೆಯೇನೋ ಹಲವು ಅಡೆ-ತಡೆಗಳ ಮಧ್ಯೆಯೂ ಶಾಲೆಗಳನ್ನು ಆರಂಭ ಮಾಡಿದೆ. ಆದರೆ ಇಲ್ಲೊಂದು ಶಾಲೆಯ ವಿದ್ಯಾರ್ಥಿಗಳು ವಿದ್ಯಾಗಮ ತರಗತಿಗೆ ಆಗಮಿಸಲು ನಿತ್ಯವೂ ಶಾಲೆಗೆ 10 ಕಿಮೀ ಕಾಲ್ನಡಿಗೆಯಲ್ಲೇ ಬರಬೇಕಾದ ಪರಿಸ್ಥಿತಿ ಎದುರಾಗಿದೆ. ಶಾಲಾ ಸಮಯಕ್ಕೆ ಬಸ್‌ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿನಿಯರು ವೇದನೆ ವ್ಯಕ್ತಪಡಿಸುತ್ತಿದ್ದಾರೆ.

ತಾಲೂಕಿನ ಮೋರನಾಳ ಗ್ರಾಮದಲ್ಲಿನ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂತಹ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅಳವಂಡಿ ಸರ್ಕಾರಿ ಪ್ರೌಢ ಶಾಲೆಗೆ ತೆರಳಲು ಸಕಾಲಕ್ಕೆ ಬಸ್‌ ಸೌಕರ್ಯ ಇಲ್ಲದೇ ಕಾಲ ನಡಿಗೆ ನಮಗೆ ಗತಿ ಎಂದು ಪಾದಯಾತ್ರೆ
ಆರಂಭಿಸುತ್ತಿದ್ದಾರೆ.

ಸರ್ಕಾರವು ಹೊಸ ವರ್ಷದಂದು 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ಯೋಜನೆ ಆರಂಭಿಸಿ ಶಿಕ್ಷಣ ನೀಡಲು ಮುಂದಾಗಿದೆ. ಜೊತೆಗೆ 10ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿ ಆರಂಭ ಮಾಡಿದೆ. 10 ತಿಂಗಳ ಬಳಿಕ ಕ್ರಮೇಣ ವಿದ್ಯಾರ್ಥಿಗಳು
ಶಾಲೆಗೆ ಆಗಮಿಸುತ್ತಿದ್ದಾರೆ. ಆದರೆ ವಿದ್ಯಾಗಮ, ಶಾಲಾ ಅವಧಿ ಹೆಚ್ಚು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ನೂರೆಂಟು ತಾಪತ್ರೆಯ ಅನುಭವಿಸುವಂತಾಗಿದೆ.

ಇದನ್ನೂ ಓದಿ:ಅಗ್ನಿಶಾಮಕದಳದಲ್ಲಿ ಸಿಬ್ಬಂದಿ ಕೊರತೆ :181 ಮಂಜೂರಾತಿ ಹುದ್ದೆಗಳಲ್ಲಿ 106 ಹುದ್ದೆ ಭರ್ತಿ

ಇಲ್ಲಿನ ಮೋರನಾಳ ಗ್ರಾಮ ಕೊಪ್ಪಳ ತಾಲೂಕಿನ ಕೊನೆಯ ಭಾಗದಲ್ಲಿದೆ. ಇಲ್ಲಿನ ನೂರಾರು ವಿದ್ಯಾರ್ಥಿಗಳು ಬಹುಪಾಲು ಅಳವಂಡಿ ಹಾಗೂ ಗದಗ ಜಿಲ್ಲೆಯ ಮುಂಡರಗಿ ಭಾಗದಲ್ಲಿಯೇ ಶಿಕ್ಷಣ ಪಡೆಯುತ್ತಿದ್ದಾರೆ. ಇಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಲಾಕ್‌ಡೌನ್‌ ಮೊದಲು ಸ್ವಲ್ಪ ಮಟ್ಟಿಗೆ ಸಾರಿಗೆ ವ್ಯವಸ್ಥೆಯಿತ್ತು. ಲಾಕ್‌ಡೌನ್‌ ತೆರವು ಮಾಡಿದ ಬಳಿಕ ಗ್ರಾಮಕ್ಕೆ ಸರಿಯಾದ ಬಸ್‌ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳು, ಪಾಲಕರು ತುಂಬಾ ತೊಂದರೆ ಎದುರಿಸುತ್ತಿದ್ದಾರೆ.

ಶಿಕ್ಷಣ ಇಲಾಖೆಯು ವಿದ್ಯಾಗಮ ಹಾಗೂ 10ನೇ ತರಗತಿ ಕ್ಲಾಸ್‌ಗಳನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 4ಗಂಟೆ ವರೆಗೂ ನಡೆಸುತ್ತಿಲ್ಲ. ಎರಡು ತಾಸಿನ ಅವಧಿಗೆ ಮುಗಿಸುತ್ತಿದ್ದಾರೆ. ಮೋರನಾಳ ಗ್ರಾಮದಲ್ಲಿನ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಳವಂಡಿ ಕಾಲೇಜು-ಪ್ರೌಢ ಶಾಲೆಗೆ ತೆರಳುತ್ತಿದ್ದು, ಇವರಿಗೆ ಶಾಲೆ ಸಮಯಕ್ಕೆ ಸಾರಿಗೆ ವ್ಯವಸ್ಥೆ ಇಲ್ಲದೆ ಕಾಲ್ನಡಿಗೆ ಆರಂಭಿಸಿದ್ದಾರೆ. 10ನೇ ತರಗತಿ ವಿದ್ಯಾರ್ಥಿಗಳಿಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆ ವರೆಗೂ ತರಗತಿಗಳು ನಡೆಯುತ್ತವೆ ಆದರೆ 6-8ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ 2 ರಿಂದ 4.30ರ ವರೆಗೂ ವಿದ್ಯಾಗಮದಡಿ ಮಕ್ಕಳಿಗೆ ಬೋಧನೆ ಮಾಡಲಾಗುತ್ತದೆ. ಹಾಗಾಗಿ
6-7-8-9ನೇ ತರಗತಿ ವಿದ್ಯಾರ್ಥಿಗಳು ಮಧ್ಯಾಹ್ನ 1ಕ್ಕೆ ಮೋರನಾಳ ಗ್ರಾಮದಿಂದ ಅಳವಂಡಿ ಗ್ರಾಮಕ್ಕೆ ಕಾಲ್ನಡಿಗೆಯಲ್ಲಿ ತೆರಳಬೇಕಿದೆ. ಶಾಲೆ ಬಿಟ್ಟ ಬಳಿಕ ಸಂಜೆ 4.30ರಿಂದ ಮತ್ತೆ ಕಾಲ್ನಡಿಗೆಯಲ್ಲೇ ಮೋರನಾಳ ಗ್ರಾಮಕ್ಕೆ ನಡೆದುಕೊಂಡು ಬರಬೇಕಿದೆ. 10ನೇ ತರಗತಿ ವಿದ್ಯಾರ್ಥಿಗಳಿಗೆ ಬೆಳಗ್ಗೆ 9.30ಕ್ಕೆ ಒಂದು ಬಸ್‌ ಸಿಕ್ಕರೆ ಅವರಿಗೂ ಮಧ್ಯಾಹ್ನ 12ಕ್ಕೆ ಬಸ್‌ ಇಲ್ಲದೇ ಮನೆಗೆ ತೆರಳಲು ನಡೆದುಕೊಂಡೇ ಬರಬೇಕಿದೆ.

ಮೋರನಾಳ ಗ್ರಾಮದಿಂದ ಅಳವಂಡಿಗೆ 5 ಕಿಮೀ ದೂರವಿದೆ. ಎರಡೂ ಕಡೆ ಸೇರಿ ಪ್ರತಿ ನಿತ್ಯ 10 ಕಿಮೀ ವಿದ್ಯಾರ್ಥಿಗಳು ನಡೆದುಕೊಂಡೇ ವಿದ್ಯಾಗಮದಡಿ ಶಿಕ್ಷಣ ಪಡೆಯುವಂತ ಪರಿಸ್ಥಿತಿ ಬಂದಿದೆ. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ
ವಿದ್ಯಾರ್ಥಿನಿಯರನ್ನು ಹೈಸ್ಕೂಲ್‌ ಹಾಗೂ ಕಾಲೇಜಿಗೆ ಕಳಿಸುವುದೇ ಹೆಚ್ಚು ಆ ಮಧ್ಯೆ ಕಾಲ್ನಡಿಗೆಯಲ್ಲಿ ಶಾಲೆಗೆ ಮಕ್ಕಳನ್ನು ಕಳಿಸಬೇಕೆಂದರೆ ವಿದ್ಯಾರ್ಥಿ ಪಾಲಕರು ನಿತ್ಯವೂ ಆತಂಕದಲ್ಲೇ ಶಾಲೆಗೆ ಕಳಿಸಬೇಕಾದ ಸ್ಥಿತಿ ಬಂದಿದೆ. ಇನ್ನು ಕಾಲೇಜು ವಿದ್ಯಾರ್ಥಿಗಳೂ ಇಂಥ ತೊಂದರೆ ಎದುರಿಸುತ್ತಿದ್ದಾರೆ. ಹೇಗೋ ಖಾಸಗಿ ವಾಹನ, ಇಲ್ಲವೇ ಬೈಕ್‌ಗಳಲ್ಲಿ ತೆರಳುತ್ತಿದ್ದಾರೆ.
ಆದರೆ ವಿದ್ಯಾರ್ಥಿನಿಯರ ಪರದಾಟ ನಿಜಕ್ಕೂ ಹೇಳತೀರದಂತಾಗಿದೆ. ಕೂಡಲೇ ಸರ್ಕಾರ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆಯು ವಿದ್ಯಾರ್ಥಿಗಳ ಕಾಲ್ನಡಿಗೆ ತಪ್ಪಿಸಲು ಪರ್ಯಾಯ ವಿದ್ಯಾರ್ಥಿಗಳ ಶಾಲಾ ಸಮಯಕ್ಕೆ ಸಾರಿಗೆ ವ್ಯವಸ್ಥೆ ಮಾಡಬೇಕಿದೆ.

ಸಮಸ್ಯೆ ಟ್ವಿಟ್‌ ಮಾಡಿದ ರೈತ
ಮೋರನಾಳದಿಂದ ಅಳವಂಡಿಗೆ ಕಾಲ್ನಡಿಗೆಯಲ್ಲಿಯೇ ನಿತ್ಯ ವಿದ್ಯಾರ್ಥಿಗಳು ಶಾಲೆಗೆ ತೆರಳುತ್ತಿರುವುದನ್ನು ಗಮನಿಸಿದ ಬೆಟಗೇರಿ ಗ್ರಾಮದ ರೈತ ಏಳುಕೋಟೇಶ್‌ ಕೋಮಲಾಪುರ ಅವರು ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುವ ಫೋಟೋ ತೆಗೆದು, ಸಾರಿಗೆ ಸಚಿವ ಲಕ್ಷ್ಮಣ ಸವದಿ, ಶಿಕ್ಷಣ ಸಚಿವ ಸೇರಿ ಇತರರಿಗೆ ಟ್ವಿಟ್‌ ಮಾಡಿ ವಿದ್ಯಾರ್ಥಿಗಳ ಸಮಸ್ಯೆ ಗಮನ ಸೆಳೆದಿದ್ದಾರೆ.

– ದತ್ತು ಕಮ್ಮಾರ

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.