ಹಡಪದ ಸಮಾಜ ಕುಲಶಾಸ್ತ್ರ ಅಧ್ಯಯನ,ನಿಗಮ ಸ್ಥಾಪನೆಗೆ ಕ್ರಮ: ಸಿಎಂ ಬೊಮ್ಮಾಯಿ

ಲಿಂಗಾಯತ ಸಮುದಾಯದ ಒಳಪಂಗಡವಾದರೂ ಕೀಳಾಗಿ ಕಾಣಲಾಗುತ್ತಿದೆ

Team Udayavani, Feb 1, 2023, 7:37 PM IST

1-dsf-df-sd

ವಿಜಯಪುರ : ರಾಜ್ಯದಲ್ಲಿ ಕಾಯಕ ಆಧಾರಿತ ಸಮಾಜಗಳ ಅಭಿವೃದ್ಧಿಗಾಗಿ ಯೋಜನೆ ರೂಪಿಸಿದ್ದು, ಅಗತ್ಯ ಅನುದಾನ ಸಹಿತ ಶೀಘ್ರವೇ ಯೋಜನೆ ಜಾರಿಗೆ ತರಲಿದ್ದೇವೆ. ಹಡಪದ ಸಮುದಾಯದ ಕುಲ ಶಾಸ್ತ್ರ ಅಧ್ಯಯನದ ಬಳಿಕ ಸಾಮಾಜಿಕ ನ್ಯಾಯ ಕಲ್ಪಿಸುವ ಹಾಗೂ ಸಮಾಜದ ಅಭಿವೃದ್ಧಿಗೆ ನಿಮಗ ಸ್ಥಾಪಿಸುವ ಕುರಿತು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದರು.

ಮುದ್ಧೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಹಡಪದ ಅಪ್ಪಣ್ಣ ಸಮುದಾಯ ಭವನ ಉದ್ಘಾಟನೆ, ಹಡಪದ ಅಪ್ಪಣ್ಣ ರಾಜ್ಯ ಮಟ್ಟದ ಜನ ಜಾಗೃತಿ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಡಪದ ಅಪ್ಪಣ್ಣ ಪೀಠ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು 1 ಕೋಟಿ ರೂ. ನೀಡಿದ್ದು, ಇದೀಗ ನಾನು 3 ಕೋಟಿ ರೂ. ನೀಡಿ ಅಡಿಗಲ್ಲು ಹಾಕಿದ್ದೇನೆ. ಭವಿಷ್ಯದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಹಡಪದ ಸಮುದಾಯದ ಕುಲಶಾಶ್ತ್ರ ಅಧ್ಯಯನ ನಡೆಸುವ ಪ್ರಕ್ರಿಯೆ ಪೂರ್ಣಗೊಳಿಸಿ, ಸಾಮಾಜಿಕ ನ್ಯಾಯ ಕಲ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಕುಂಭಾರ, ಕಂಬಾರ, ಬಡಿಗೇರ, ಹಡಪದ ಸೇರಿದಂತೆ ವೃತ್ತಿ ಆಧಾರಿತ ಕುಲಕಸಬುಗಳಿಗೆ ವಿಶೇಷ ಕಾರ್ಯಕ್ರಮ ರೂಪಿಸಲು ನಮ್ಮ ಸರ್ಕಾರ ಬದ್ದವಾಗಿದೆ ಎಂದರು.

ಸಣ್ಣ ಸಮುದಾಯಗಳು ಸಂಘಟಿತವಾದಲ್ಲಿ ಕೆಲವು ಹಿತಾಸಕ್ತಿಗಳು ತಮ್ಮ ಅಸ್ತಿತ್ವಕ್ಕೆ ಧಕ್ಕೆ ಬರುತ್ತದೆ ಎಂಬ ಭಯದ ಕಾರಣಕ್ಕೆ ಶೋಷಿತ ಹಾಗೂ ಸಣ್ಣ ಸಮುದಾಯಗಳ ಸಂಘಟನೆ ಆಗದಂತೆ ಬಸವಾದಿ ಶರಣರ ಕಾಲದಿಂದ, ಶತಮಾನದಿಂದಲೂ ವಿರೋಧಿಸುತ್ತಲೇ ಇವೆ. ಆದರೆ ರಾಜ್ಯದಲ್ಲಿ ಮುಕ್ತ ವಾತಾವರಣವಿದ್ದು, ಗುರು ಸಿಕ್ಕಿದ್ದಾರೆ, ಮಠ ಸಿಕ್ಕಿದೆ, ಸಂಘಟನೆ ಸಿಕ್ಕಿದೆ. ಹೀಗಾಗಿ ಸಣ್ಣ ಸಮುದಾಯಗಳ ಧ್ವನಿ ಅಡಗಿಸಲು ಇನ್ನು ಯಾರಿಂದಲೂ ಸಾಧ್ಯವಿಲ್ಲ ಎಂದರು.

ಶಿವಶರಣ ಹಡಪದ ಅಪ್ಪಣ ಅವರ ಜನ್ಮಸ್ಥಳ ಮಸಬಿನಾಳ ಹಾಗೂ ಹಡಪದ ಲಿಂಗಮ್ಮ ಅವರ ಜನ್ಮಸ್ಥಳ ರೆಬಿನಾಳ ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿಸುವ ಬೇಡಿಕೆ ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಮುಂದಿನ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಹಡಪದ ಅಪ್ಪಣ್ಣ ಇಲ್ಲದೆ ಬಸವೇಶ್ವರರು ಯಾವ ನಿರ್ಣಯ ಕೈಗೊಳ್ಳುತ್ತಿದ್ದರು. ಸಮಾಜದ ಆಶೋತ್ತರ ಈಡೇರಿಸುವಲ್ಲಿ ಸಮುದಾಯದ ಅಭಿವೃದ್ಧಿ ವಿಷಯದಲ್ಲಿ ಹೊರಗೆ ವಿರೋಧ ಹಾಗೂ ಒಳಗೆ ಕುತಂತ್ರ ಇರುತ್ತದೆ. ಆದರೆ ರಾಜ್ಯದಲ್ಲಿ ಇನ್ನು ತಳ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ಸಿಗಲಿದೆ ಎಂದರು.

ಹಡಪದ ಅಪ್ಪಣ್ಣ ಪೀಠದ ಅನ್ನದಾನಿ ಭಾರತೀ ಸ್ವಾಮಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮುದ್ಧೇಬಿಹಾಳ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಬೋವಿ ಪೀಠದ ಇಮ್ಮಡಿ ಸಿದ್ಧರಾಮೇಶ್ವರಶ್ರೀ, ಕಾಗಿನೆಲೆ ಗುರುಪೀಠದ ಈಶ್ವರಾನಂದ ಶ್ರೀಗಳು, ಜಿಲ್ಲಾಧಿಕಾರಿ ಡಾ.ವಿ.ಬಿ.ದಾನಮ್ಮನವರ, ಎಸ್ಪಿ ಆನಂದಕುಮಾರ, ಹಡಪದ ಸಮಾಜದ ರಾಜ್ಯಾಧ್ಯಕ್ಷ ಸಿದ್ದರ್ಣಣ ಹಡಪದ, ನಾಗರಾಜ ಸರ್ಜಾಪುರ, ಎಚ್.ಡಿ.ವೈದ್ಯ, ಬಸವರಾಜ ಬೆಳಗಾವಿ, ಚಿದಾನಂದ ಬಸರಕೋಡ, ಸಂತೋಷ ಹಡಪದ, ಶಿವಶಂಕರ ಹಡಪದ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಡಪದ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೆ ಮನವಿ
ಲಿಂಗಾಯತ ಸಮುದಾಯದ ಒಳಪಂಗಡವಾದರೂ ಹಡಪದ ಸಮುದಾಯವನ್ನು ಸಮಾಜದಲ್ಲಿ ಇನ್ನೂ ಕೀಳಾಗಿ ಕಾಣಲಾಗುತ್ತಿದೆ. ಹೀಗಾಗಿ ಸಾಮಾಜಿಕ ನ್ಯಾಯಕ್ಕಾಗಿ ಪ್ರವರ್ಗ 2-ಎ ಗುಂಪಿನಲ್ಲಿರುವ ಹಡಪದ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು.- ಅನ್ನದಾನಿ ಭಾರತೀಸ್ವಾಮಿಜಿ ಹಡಪದ ಅಪ್ಪಣ್ಣ ಪೀಠ, ತಂಗಡಗಿ.

ಟಾಪ್ ನ್ಯೂಸ್

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

tdy-17

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

1-wqewqe

ನೀತಿ ಸಂಹಿತೆ ಉಲ್ಲಂಘನೆ : ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಕೇಸ್

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ

ಚುನಾವಣ ಆಯೋಗವೇ “ಸೂಪರ್‌ ಪವರ್‌’; ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿ

ಚುನಾವಣ ಆಯೋಗವೇ “ಸೂಪರ್‌ ಪವರ್‌’; ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

tdy-17

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

1-wqewqe

ನೀತಿ ಸಂಹಿತೆ ಉಲ್ಲಂಘನೆ : ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಕೇಸ್

TDY-16

ದೂರು ವಿರುದ್ದ ಕಾನೂನು ಹೋರಾಟ: ಕೆಎಂಶಿ