ಹಡಪದ ಸಮಾಜ ಕುಲಶಾಸ್ತ್ರ ಅಧ್ಯಯನ,ನಿಗಮ ಸ್ಥಾಪನೆಗೆ ಕ್ರಮ: ಸಿಎಂ ಬೊಮ್ಮಾಯಿ

ಲಿಂಗಾಯತ ಸಮುದಾಯದ ಒಳಪಂಗಡವಾದರೂ ಕೀಳಾಗಿ ಕಾಣಲಾಗುತ್ತಿದೆ

Team Udayavani, Feb 1, 2023, 7:37 PM IST

1-dsf-df-sd

ವಿಜಯಪುರ : ರಾಜ್ಯದಲ್ಲಿ ಕಾಯಕ ಆಧಾರಿತ ಸಮಾಜಗಳ ಅಭಿವೃದ್ಧಿಗಾಗಿ ಯೋಜನೆ ರೂಪಿಸಿದ್ದು, ಅಗತ್ಯ ಅನುದಾನ ಸಹಿತ ಶೀಘ್ರವೇ ಯೋಜನೆ ಜಾರಿಗೆ ತರಲಿದ್ದೇವೆ. ಹಡಪದ ಸಮುದಾಯದ ಕುಲ ಶಾಸ್ತ್ರ ಅಧ್ಯಯನದ ಬಳಿಕ ಸಾಮಾಜಿಕ ನ್ಯಾಯ ಕಲ್ಪಿಸುವ ಹಾಗೂ ಸಮಾಜದ ಅಭಿವೃದ್ಧಿಗೆ ನಿಮಗ ಸ್ಥಾಪಿಸುವ ಕುರಿತು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದರು.

ಮುದ್ಧೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಹಡಪದ ಅಪ್ಪಣ್ಣ ಸಮುದಾಯ ಭವನ ಉದ್ಘಾಟನೆ, ಹಡಪದ ಅಪ್ಪಣ್ಣ ರಾಜ್ಯ ಮಟ್ಟದ ಜನ ಜಾಗೃತಿ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಡಪದ ಅಪ್ಪಣ್ಣ ಪೀಠ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು 1 ಕೋಟಿ ರೂ. ನೀಡಿದ್ದು, ಇದೀಗ ನಾನು 3 ಕೋಟಿ ರೂ. ನೀಡಿ ಅಡಿಗಲ್ಲು ಹಾಕಿದ್ದೇನೆ. ಭವಿಷ್ಯದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಹಡಪದ ಸಮುದಾಯದ ಕುಲಶಾಶ್ತ್ರ ಅಧ್ಯಯನ ನಡೆಸುವ ಪ್ರಕ್ರಿಯೆ ಪೂರ್ಣಗೊಳಿಸಿ, ಸಾಮಾಜಿಕ ನ್ಯಾಯ ಕಲ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಕುಂಭಾರ, ಕಂಬಾರ, ಬಡಿಗೇರ, ಹಡಪದ ಸೇರಿದಂತೆ ವೃತ್ತಿ ಆಧಾರಿತ ಕುಲಕಸಬುಗಳಿಗೆ ವಿಶೇಷ ಕಾರ್ಯಕ್ರಮ ರೂಪಿಸಲು ನಮ್ಮ ಸರ್ಕಾರ ಬದ್ದವಾಗಿದೆ ಎಂದರು.

ಸಣ್ಣ ಸಮುದಾಯಗಳು ಸಂಘಟಿತವಾದಲ್ಲಿ ಕೆಲವು ಹಿತಾಸಕ್ತಿಗಳು ತಮ್ಮ ಅಸ್ತಿತ್ವಕ್ಕೆ ಧಕ್ಕೆ ಬರುತ್ತದೆ ಎಂಬ ಭಯದ ಕಾರಣಕ್ಕೆ ಶೋಷಿತ ಹಾಗೂ ಸಣ್ಣ ಸಮುದಾಯಗಳ ಸಂಘಟನೆ ಆಗದಂತೆ ಬಸವಾದಿ ಶರಣರ ಕಾಲದಿಂದ, ಶತಮಾನದಿಂದಲೂ ವಿರೋಧಿಸುತ್ತಲೇ ಇವೆ. ಆದರೆ ರಾಜ್ಯದಲ್ಲಿ ಮುಕ್ತ ವಾತಾವರಣವಿದ್ದು, ಗುರು ಸಿಕ್ಕಿದ್ದಾರೆ, ಮಠ ಸಿಕ್ಕಿದೆ, ಸಂಘಟನೆ ಸಿಕ್ಕಿದೆ. ಹೀಗಾಗಿ ಸಣ್ಣ ಸಮುದಾಯಗಳ ಧ್ವನಿ ಅಡಗಿಸಲು ಇನ್ನು ಯಾರಿಂದಲೂ ಸಾಧ್ಯವಿಲ್ಲ ಎಂದರು.

ಶಿವಶರಣ ಹಡಪದ ಅಪ್ಪಣ ಅವರ ಜನ್ಮಸ್ಥಳ ಮಸಬಿನಾಳ ಹಾಗೂ ಹಡಪದ ಲಿಂಗಮ್ಮ ಅವರ ಜನ್ಮಸ್ಥಳ ರೆಬಿನಾಳ ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿಸುವ ಬೇಡಿಕೆ ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಮುಂದಿನ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಹಡಪದ ಅಪ್ಪಣ್ಣ ಇಲ್ಲದೆ ಬಸವೇಶ್ವರರು ಯಾವ ನಿರ್ಣಯ ಕೈಗೊಳ್ಳುತ್ತಿದ್ದರು. ಸಮಾಜದ ಆಶೋತ್ತರ ಈಡೇರಿಸುವಲ್ಲಿ ಸಮುದಾಯದ ಅಭಿವೃದ್ಧಿ ವಿಷಯದಲ್ಲಿ ಹೊರಗೆ ವಿರೋಧ ಹಾಗೂ ಒಳಗೆ ಕುತಂತ್ರ ಇರುತ್ತದೆ. ಆದರೆ ರಾಜ್ಯದಲ್ಲಿ ಇನ್ನು ತಳ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ಸಿಗಲಿದೆ ಎಂದರು.

ಹಡಪದ ಅಪ್ಪಣ್ಣ ಪೀಠದ ಅನ್ನದಾನಿ ಭಾರತೀ ಸ್ವಾಮಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮುದ್ಧೇಬಿಹಾಳ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಬೋವಿ ಪೀಠದ ಇಮ್ಮಡಿ ಸಿದ್ಧರಾಮೇಶ್ವರಶ್ರೀ, ಕಾಗಿನೆಲೆ ಗುರುಪೀಠದ ಈಶ್ವರಾನಂದ ಶ್ರೀಗಳು, ಜಿಲ್ಲಾಧಿಕಾರಿ ಡಾ.ವಿ.ಬಿ.ದಾನಮ್ಮನವರ, ಎಸ್ಪಿ ಆನಂದಕುಮಾರ, ಹಡಪದ ಸಮಾಜದ ರಾಜ್ಯಾಧ್ಯಕ್ಷ ಸಿದ್ದರ್ಣಣ ಹಡಪದ, ನಾಗರಾಜ ಸರ್ಜಾಪುರ, ಎಚ್.ಡಿ.ವೈದ್ಯ, ಬಸವರಾಜ ಬೆಳಗಾವಿ, ಚಿದಾನಂದ ಬಸರಕೋಡ, ಸಂತೋಷ ಹಡಪದ, ಶಿವಶಂಕರ ಹಡಪದ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಡಪದ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೆ ಮನವಿ
ಲಿಂಗಾಯತ ಸಮುದಾಯದ ಒಳಪಂಗಡವಾದರೂ ಹಡಪದ ಸಮುದಾಯವನ್ನು ಸಮಾಜದಲ್ಲಿ ಇನ್ನೂ ಕೀಳಾಗಿ ಕಾಣಲಾಗುತ್ತಿದೆ. ಹೀಗಾಗಿ ಸಾಮಾಜಿಕ ನ್ಯಾಯಕ್ಕಾಗಿ ಪ್ರವರ್ಗ 2-ಎ ಗುಂಪಿನಲ್ಲಿರುವ ಹಡಪದ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು.- ಅನ್ನದಾನಿ ಭಾರತೀಸ್ವಾಮಿಜಿ ಹಡಪದ ಅಪ್ಪಣ್ಣ ಪೀಠ, ತಂಗಡಗಿ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.