
ಸುಬ್ರಹ್ಮಣ್ಯ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು
Team Udayavani, Jun 3, 2023, 5:34 AM IST

ಸುಬ್ರಹ್ಮಣ್ಯ: ಅನಾರೋಗ್ಯದಿಂದ ಹಠಾತ್ ಕುಸಿದು ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ, ರೆಂಜಿಲಾಡಿ ಗ್ರಾಮದ ನಿಡೆ¾àರು ರವೀಂದ್ರ ಅವರ ಪುತ್ರಿ ರಶ್ಮಿತಾ ಎನ್. (19) ಮೃತಪಟ್ಟ ಘಟನೆ ರೆಂಜಿಲಾಡಿಯಲ್ಲಿ ಸಂಭವಿಸಿದೆ.
ರಶ್ಮಿತಾ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ನರ್ಸಿಂಗ್ ಓದುತ್ತಿದ್ದು, ಕೆಲವು ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ವೈದ್ಯಕೀಯ ಪರೀಕ್ಷೆ ವೇಳೆ ಯಾವುದೇ ಸಮಸ್ಯೆ ಕಂಡುಬಂದಿರಲಿಲ್ಲ ಎನ್ನಲಾಗಿದೆ. ಆದರೆ ಜೂ.1ರ ರಾತ್ರಿ ಮನೆಯಲ್ಲಿ ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ನೆಟ್ಟಣ: ನಿರ್ಮಾಣ ಹಂತದ ಮನೆಯಿಂದ ಬಿದ್ದು ಯುವಕ ಸಾವು
ಕಡಬ: ನಿರ್ಮಾಣ ಹಂತದ ಮನೆಯ ಮೇಲ್ಛಾವಣಿ ಯಿಂದ ಬಿದ್ದು ಕಾರ್ಮಿಕ ನೋರ್ವ ಮೃತಪಟ್ಟ ಘಟನೆ ಬಿಳಿನೆಲೆ ಗ್ರಾಮದ ನೆಟ್ಟಣದಲ್ಲಿ ಶುಕ್ರವಾರ ಸಂಭವಿಸಿದೆ.
ಆಲಂಕಾರು ಗ್ರಾಮದ ಶರವೂರು ನಗ್ರಿ ನಿವಾಸಿ ಪದ್ಮನಾಭ ಅವರ ಪುತ್ರ ಹರಿಪ್ರಸಾದ್ (28) ಮೃತಪಟ್ಟವರು. ನೆಟ್ಟಣದ ಮೇರೊಂಜಿ ಎಂಬಲ್ಲಿ ಮನೆಯ ಮೇಲ್ಛಾವಣಿಯ ಕೆಲಸದಲ್ಲಿ ನಿರತರಾಗಿದ್ದಾಗ ಆಯತಪ್ಪಿ ಕೆಳಗೆ ಬಿದ್ದ ಹರಿಪ್ರಸಾದ್ ಅವರ ತಲೆಗೆ ಗಂಭೀರ ಗಾಯ ವಾಗಿತ್ತು. ಕೂಡಲೇ ಅವರನ್ನು ನೆಟ್ಟಣದ ಪ್ರಕಾಶ್ ಅವರ ಜೀಪಿನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆ ವೇಳೆಗಾಗಲೇ ಅವರ ಮೃತಪಟ್ಟಿದ್ದರು.
ಪದ್ಮನಾಭ ಅವರ ಏಕೈಕ ಪುತ್ರರಾಗಿದ್ದ ಹರಿಪ್ರಸಾದ್ ದುಡಿಮೆಯೇ ಮನೆಗೆ ಆಧಾರವಾಗಿತ್ತು. ಅವರಿಗೆ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದು, ತಂದೆ, ಪತ್ನಿ, ಸಹೋದರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Fraud Case ಮೆಸ್ ಮ್ಯಾನೇಜರ್, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

CCB Police ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ
MUST WATCH
ಹೊಸ ಸೇರ್ಪಡೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ