ಸೀತಾಫಲದ ಸಿಹಿ ಹಂಚುತ್ತಿವೆ ಚಿತ್ತಾಪುರದ ಗುಡ್ಡಗಳು


Team Udayavani, Sep 21, 2021, 1:49 PM IST

ಸೀತಾಫಲದ ಸಿಹಿ ಹಂಚುತ್ತಿವೆ ಚಿತ್ತಾಪುರದ ಗುಡ್ಡಗಳು

ವಾಡಿ (ಚಿತ್ತಾಪುರ): ಸೀತಾಫಲ ಹಣ್ಣಿನ ಹೆಸರು ಕೇಳಿದರೆ ಸಾಕು ನಾಲಿಗೆ ಒದ್ದೆಯಾಗಿ ತುಟಿಗಳು ರುಚಿಯೇರುತ್ತವೆ. ಮೈತುಂಬಾ ಕಣ್ಣು ಹೊದ್ದು ಹೃದಯದೊಳಗೆ ಸಿಹಿ ಬೆಣ್ಣೆ ಅಡಗಿಸಿಟ್ಟುಕೊಂಡ ಈ ಹಣ್ಣು ಮೂಲತಃ ವೆಸ್ಟ್ ಇಂಡೀಸ್ ದ್ವೀಪಗಳಲ್ಲಿ ಇದರ ಬೇರುಗಳು ಕಂಡು ಬರುತ್ತವೆ. ರಾಜ್ಯದ ಅರಣ್ಯ ಇಲಾಖೆಯೂ ಕೂಡ ಅದರ ಬೀಜಗಳನ್ನು ಗುಡ್ಡಗಾಡು ಪ್ರದೇಶದಲ್ಲಿ ಹರಡುವ ಮೂಲಕ ಸೀತಾಫಲದ ಕೃಷಿ ಕೈಗೊಂಡಿದ್ದರಿಂದ ನಮ್ಮಲ್ಲಿ ಕಡಿಮೆ ದರದಲ್ಲಿ ರುಚಿಯಾದ ಹಣ್ಣುಗಳು ನಮ್ಮ ಕೈಗೆಟಕುತ್ತಿವೆ.

ಚಿತ್ತಾಪುರ ತಾಲೂಕಿನ ಗುಡ್ಡಗಾಡು ಪ್ರದೇಶಗಳಲ್ಲೂ ಸೀತಾಫಲ ಹಣ್ಣಿನ ಕೃಷಿ ಸಾಗಿದ್ದು, ಯಾಗಾಪುರ, ಶಿವನಗರ ತಾಂಡಾ, ಬೆಳಗೇರಾ, ದಂಡಗುಂಡ, ಅಣ್ಣಿಕೇರಾ ಹಾಗೂ ಲಾಡ್ಲಾಪುರ ಗ್ರಾಮಗಳಲ್ಲಿ ಈ ಹಣ್ಣುಗಳು ಅರಳುತ್ತಿರುವುದು ಗಮನಾರ್ಹ ಸಂಗತಿಯಾಗಿದೆ. ಗುಡ್ಡ ಬೆಟ್ಟಗಳಿಂದ ಕೂಡಿರುವ ಈ ಅರಣ್ಯ ಪರಿಸರದಲ್ಲಿ ಸೀತಾಫಲದ ಸಾವಿರಾರು ಗಿಡಗಳನ್ನು ಕಾಣಬಹುದಾಗಿದೆ. ಕಲ್ಲು ಬಂಡೆಗಳ ಕಾವಲಿನಲ್ಲಿ ಕಾಲು ದಾರಿ ಸೀಳಿ ಸಾಗಿದರೆ ಸಿಹಿಯಾದ ಹಣ್ಣುಗಳು ನಿಮ್ಮ ಕೈಗಳಿಗೆ ತಾಕುತ್ತವೆ. ಗುಡ್ಡಗಳೇ ಇಲ್ಲಿ ಸಿಹಿ ಹಂಚಲು ಸಾಲುಗಟ್ಟಿ ನಿಂತಿವೆಯಾ ಎಂಬ ಭಾವ ಮೂಡುತ್ತದೆ.

ಇದನ್ನೂ ಓದಿ : ಹಿಂದೂವಿರೋಧಿ ಬೊಮ್ಮಾಯಿಯವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ: ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ

ಮಳೆಗಾಲದಲ್ಲಿ ಹಸಿರು ಹೊದ್ದು ನಿಂತ ಇಲ್ಲಿನ ಗುಡ್ಡಗಳು ಅಕ್ಷರಶಃ ಮಲೆನಾಡ ನೋಟ ಬೀರುತ್ತವೆ. ಗುಡ್ಡದೂರಿನ ಜನರೇ ವರ್ಷಕ್ಕೊಮ್ಮೆ ಹಣ್ಣಿನ ವ್ಯಾಪಾರಿಗಳಾಗಿ ಪರಿವರ್ತನೆಯಾಗುತ್ತಾರೆ. ಸೀತಾಫಲದ ಅರಣ್ಯ ಬನವನ್ನು ಆಸಕ್ತರು ಗುತ್ತಿಗೆ ಪಡೆದು ಗಿಡಗಳ ಹಕ್ಕು ತಮ್ಮದಾಗಿಸಿಕೊಳ್ಳುತ್ತಾರೆ. ಹಣ್ಣುಗಳನ್ನು ಕೊಯ್ದು ಪಟ್ಟಣ ಪ್ರದೇಶಗಳಿಗೆ ಸಾಗಿಸುತ್ತಾರೆ. ವಿವಿಧ ತಾಂಡಾಗಳ ಲಂಬಾಣಿ ಸಮುದಾಯದ ಮಹಿಳೆಯರೇ ಹೆಚ್ಚಾಗಿ ಸೀತಾಫಲ ಮಾರಾಟಕ್ಕೆ ಮುಂದಾಗುತ್ತಾರೆ. ಬೆಳ್ಳಂಬೆಳಗ್ಗೆ ಗುಡ್ಡದತ್ತ ನಡೆದು ಹಣ್ಣಾದ ಫಲಗಳನ್ನು ಬುಟ್ಟಿಗೆ ಹಾಕುತ್ತಾರೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ ಎರಡು ತಿಂಗಳು ಮಾತ್ರ ಮಾರುಕಟ್ಟೆಗಳಲ್ಲಿ ಸೀತಾಫಲದ ದರ್ಬಾರ್ ನಡೆಯುತ್ತದೆ.

ಸೀತಫಲದಲ್ಲಿ ಔಷಧೀಯ ಗುಣ:
ಪ್ರತಿಯೊಂದು ಹಣ್ಣು ಮತ್ತು ಸಸ್ಯ ಪ್ರಬೇಧಗಳಲ್ಲಿ ಔಷಧೀಯ ಗುಣವಿರುತ್ತದೆ. ಅಂತೆಯೇ ಈ ಸೀತಫಲವೂ ವಿಶೇಷ ಔಷಧೀಯ ಗುಣ ಹೊಂದಿದೆ. ಇದರ ತೊಗಟೆ ಜಜ್ಜಿ ಬಿಸಿ ನೀರಿನಲ್ಲಿ ಬತ್ತಿಸಿ ಜೇನು ತುಪ್ಪದೊಂದಿಗೆ ಸೇವಿಸಿದರೆ ಜ್ವರ, ಕೆಮ್ಮು, ಉಬ್ಬಸ ಗುಣವಾಗುತ್ತದೆ ಎನ್ನಲಾಗಿದೆ. ಸಿತಾಫಲದ ಎಲೆಗಳನ್ನು ನುಣ್ಣಗೆ ಅರೆದು ಹುಣ್ಣು, ಗಾಯಗಳು, ಕುರು, ಗಡ್ಡೆ (ಗ್ರಂಥಿ)ಗಳಿಗೆ ಹಚ್ಚಿದರೆ ವಾಸಿಯಾಗುತ್ತವೆ. ಪಚನಕ್ರೀಯೆ ಹೆಚ್ಚಿಸಲು ಈ ಹಣ್ಣು ಉಪಕಾರಿಯಾಗಿದೆ. ಇದರ ಬೀಜ ಮತ್ತು ಎಲೆಗಳು ಕೀಟನಿರೋಧಕ ಗುಣಗಳನ್ನು ಹೊಂದಿವೆ. ಅತ್ಯಂತ ರುಚಿಯಾದ ಮತ್ತು ಆರೋಗ್ಯಕರವಾದ ಈ ಹಣ್ಣು ಅಡಿಯಿಂದ ಮುಡಿಯವರೆಗೂ ಯಾವೂದೇ ಸಮಸ್ಯೆಯಿದ್ದರೂ ಸೀತಾಫಲ ಅದನ್ನು ಹೋಗಲಾಡಿಸುತ್ತದೆ. ಶೇ.70 ರಷ್ಟು ತೇವಾಂಶವನ್ನು ಹೊಂದಿರುವ ಹೈಡ್ರೇಟಿಂಗ್ ಹಣ್ಣುಗಳಾಗಿದ್ದು, 100 ಗ್ರಾಂ. ಸೀತಾಫಲದಲ್ಲಿ 80-100 ಕ್ಯಾಲೊರಿ ಪೌಷ್ಠಿಕಾಂಶ ಇರುತ್ತದೆ. ಪ್ರೋಟೀನ್, ಕೊಬ್ಬು ಮತ್ತು ಕಬ್ಬಿಣದ ಪ್ರಮಾಣವು ಹೆಚ್ಚಿದೆ ಎಂಬುದು ಆಯೂರ್ವೇದ ವೈದ್ಯರ ಅಭಿಪ್ರಾಯವಾಗಿದೆ.

– ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

1-wewqeqwe

NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.