ಸುನಂದಾ ಪುಷ್ಕರ್ ಸಾವಿನ ಪ್ರಕರಣ: ಶಶಿ ತರೂರ್ ಎಲ್ಲಾ ಆರೋಪದಿಂದ ಮುಕ್ತ: ದೆಹಲಿ ಕೋರ್ಟ್
ವಿಚಾರಣೆ ನಡೆಸಿದ್ದ ದೆಹಲಿ ಸೆಷನ್ಸ್ ಕೋರ್ಟ್ 2021ರ ಏಪ್ರಿಲ್ 12ರಂದು ತೀರ್ಪಿನ ಆದೇಶವನ್ನು ಕಾಯ್ದಿರಿಸಿತ್ತು.
Team Udayavani, Aug 18, 2021, 12:37 PM IST
ನವದೆಹಲಿ: ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ, ಪತಿ ಶಶಿ ತರೂರ್ ಅವರನ್ನು ದೆಹಲಿ ಸೆಷನ್ಸ್ ಕೋರ್ಟ್ ಎಲ್ಲಾ ಆರೋಪದಿಂದ ಮುಕ್ತಗೊಳಿಸಿ ನಿರ್ದೋಷಿ ಎಂದು ಬುಧವಾರ (ಆಗಸ್ಟ್ 18) ತೀರ್ಪು ನೀಡಿದೆ.
ಇದನ್ನೂ ಓದಿ:ಇದೇ ಮೊದಲ ಬಾರಿ 56 ಸಾವಿರ ಅಂಕ ದಾಟಿದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್; ಸಾರ್ವಕಾಲಿಕ ದಾಖಲೆ
2014ರ ಜನವರಿಯಲ್ಲಿ ಸುನಂದಾ ಪುಷ್ಕರ್ ಅವರ ಶವ ಹೋಟೆಲ್ ಕೋಣೆಯಲ್ಲಿ ಪತ್ತೆಯಾಗಿತ್ತು. ಶಶಿ ತರೂರ್ ಮತ್ತು ಸುನಂದಾ ಜತೆಯಾಗಿ ಹೋಟೆಲ್ ರೂಂನಲ್ಲಿ ಉಳಿದುಕೊಂಡಿದ್ದರು. ಶಶಿ ತರೂರ್ ಅವರ ಅಧಿಕೃತ ಬಂಗಲೆಯ ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ದಂಪತಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರು.
ಆದರೆ ಸುನಂದಾ ಪುಷ್ಕರ್ ಅವರನ್ನು ಡ್ರಗ್ಸ್ ಚುಚ್ಚಿ ಸಾಯಿಸಲಾಗಿದೆ ಎಂದು ವೈದ್ಯಕೀಯ ವರದಿಯಲ್ಲಿ ಪತ್ತೆಯಾಗಿತ್ತು. ಇದರೊಂದಿಗೆ ಪತ್ನಿ ಸುನಂದಾ ಸಾವಿನ ಹಿಂದೆ ಪತಿ ತರೂರ್ ಕೈವಾಡ ಇದೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಇದೊಂದು ಕೊಲೆಯೇ ಎಂಬ ಬಗ್ಗೆ ಆರಂಭಿಕ ತನಿಖೆ ನಡೆಸಿದ್ದರು. ಕೊನೆಗೆ ಪೊಲೀಸರು ಇದೊಂದು ಆತ್ಮಹತ್ಯೆ ಎಂದು ಆರೋಪ ಪಟ್ಟಿ ಸಲ್ಲಿಸಿದ್ದರು.
ಪೊಲೀಸರು ಸಲ್ಲಿಸಿದ್ದ ಆರೋಪ ಪಟ್ಟಿಯಲ್ಲಿ ಶಶಿ ತರೂರ್ ವಿರುದ್ಧ ಐಪಿಸಿ ಸೆಕ್ಷನ್ 498 ಎ(ವೈವಾಹಿಕ ಹಿಂಸೆ) ಮತ್ತು 306 (ಆತ್ಮಹತ್ಯೆಗೆ ಪ್ರೇರಣೆ)ರ ಕಾಯ್ದೆಯಡಿ ಆರೋಪಿ ಎಂದು ಉಲ್ಲೇಖಿಸಿದ್ದರು. ಪ್ರಕರಣದಲ್ಲಿ ತರೂರ್ ಗೆ 2018ರ ಜುಲೈ 5ರಂದು ಜಾಮೀನು ನೀಡಲಾಗಿತ್ತು. ಶಶಿ ತರೂರ್ ವಿರುದ್ಧದ ಆರೋಪದ ಕುರಿತು ವಿಚಾರಣೆ ನಡೆಸಿದ್ದ ದೆಹಲಿ ಸೆಷನ್ಸ್ ಕೋರ್ಟ್ 2021ರ ಏಪ್ರಿಲ್ 12ರಂದು ತೀರ್ಪಿನ ಆದೇಶವನ್ನು ಕಾಯ್ದಿರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ