ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Dec 12, 2021, 7:46 AM IST
ಮೇಷ: ದೀರ್ಘ ಪ್ರಯಾಣ. ನಷ್ಟ ದ್ರವ್ಯವನ್ನು ಪಡೆಯಲು ಪ್ರಯತ್ನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೂರದ ವ್ಯವಹಾರಗಳಿಂದ ಧನಾಗಮನ. ಅಧ್ಯಯನ ಪ್ರವೃತ್ತರಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಲಾಭ.
ವೃಷಭ: ಅನಿರೀಕ್ಷಿತ ಸ್ಥಾನ ವೃದ್ಧಿ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ವಾಕ್ ಚತುರತೆಯಿಂದ ಕೂಡಿದ ನಡೆ. ಧನ ಸಂಪತ್ತಿನ ಅಭಿವೃದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮಾನಸಿಕ ತೃಪ್ತಿ.
ಮಿಥುನ: ಮಕ್ಕಳಿಂದ ಸಂತೋಷ ವೃದ್ಧಿ. ಅಧ್ಯಯನ ಪ್ರವೃತ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ ಮಾರ್ಗದರ್ಶನ. ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಧನಾಗಮನಕ್ಕೆ ಸರಿಯಾಗಿ ಧನ ವ್ಯಯ ಸಂಭವ.
ಕರ್ಕ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಿ. ದಂಪತಿಗಳಿಗೆ ಪರಸ್ಪರ ಪ್ರೋತ್ಸಾಹ ಅಗತ್ಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಸ್ಪಷ್ಟನೆ ಇರಲಿ. ಆಸ್ತಿ ಕ್ರಯವಿಕ್ರಯ ವಿಚಾರದಲ್ಲಿ ಮುನ್ನಡೆ.
ಸಿಂಹ: ಆರೋಗ್ಯ ಗಮನಿಸಿ. ಹಠಮಾರಿತನದಿಂದ ನಷ್ಟ ಸಂಭವ. ಆರ್ಥಿಕ ವಿಚಾರಗಳಲ್ಲಿ ಪ್ರಗತಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ಮಧ್ಯಮ.
ಕನ್ಯಾ: ಉತ್ತಮ ವಾಕ್ಚತುರತೆಯಿಂದ ಪ್ರದರ್ಶನ. ಉದ್ಯೋಗ ವ್ಯವಹಾರಗಲ್ಲಿ ಪ್ರಗತಿ. ಗೌರವ ಸುಖಾದಿ ಲಭ್ಯ. ಉತ್ತಮ ಧನಾರ್ಜನೆ. ಅಧ್ಯಯನ ಪ್ರವೃತ್ತರಿಗೆ ಸರ್ವ ಸೌಲಭ್ಯ ಪ್ರಾಪ್ತಿ. ದಂಪತಿಗಳಿಗೆ ಪರಸ್ಪರರಿಂದ ಲಾಭ.
ತುಲಾ: ಅವಿವಾಹಿತರಿಗೆ ಸೂಕ್ತ ಸಂಬಂಧ ಒದಗುವ ಸಮಯ. ದಾಂಪತ್ಯ ಸುಖ ವೃದ್ಧಿ. ರಾಜಕೀಯ ಕ್ಷೇತ್ರದವರಿಗೂ, ಸರಕಾರಿ ವರ್ಗದವರಿಗೂ ಅಭ್ಯುದಯ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ.
ವೃಶ್ಚಿಕ: ನಿರೀಕ್ಷಿತ ಸ್ಥಾನ ಸುಖ. ಮೇಲಧಿಕಾರಿಗಳಿಂದ ಸಹಾಯ. ಉತ್ತಮ ಧನ ಸಂಪತ್ತು. ಸಾಂಸಾರಿಕ ಸುಖ, ವಿದ್ಯಾರ್ಥಿಗಳಿಗೆ ಅವಿವಾಹಿತರಿಗೆ ಅನುಕೂಲಕರ ಪರಿಸ್ಥಿತಿ. ಆಹಾರೋದ್ಯಮ ಹೈನುಗಾರಿಕೆ ವಸ್ತ್ರೋದ್ಯಮ, ಆಭರಣ ವ್ಯವಹಾರಸ್ಥರಿಗೆ ಲಾಭ.
ಧನು: ಆರೋಗ್ಯ ಗಮನಿಸಿ. ನಿರೀಕ್ಷಿತ ಸಹಾಯ ಸಿಗದು. ಸ್ವಂತ ಪ್ರಯತ್ನದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿಕೊಳ್ಳಿ. ಮೇಲಧಿಕಾರಿಗಳಲ್ಲಿ ಸಂಯಮದಿಂದ ವ್ಯವಹರಿಸಿ. ಪಾಲುದಾರಿಕಾ ಕ್ಷೇತ್ರದವರು ತಾಳ್ಮೆ ಕಳೆದುಕೊಳ್ಳಬಾರದು. ದೇವತಾ ಸ್ಥಳ ಸಂದರ್ಶನದಿಂದ ನೆಮ್ಮದಿ.
ಮಕರ: ಮಾತೃ ಸಮಾನರ ಕಾರ್ಯ ನಿರ್ವಹಿಸಿದ ಸಮಾದಾನ. ಆರೋಗ್ಯ ಸ್ಥಿರ ಧನಾರ್ಜನೆಗೆ ಸಮನಾದ ವ್ಯಯ. ನೇರ ಮಾತುಗಾರಿಕೆ ಸಲ್ಲದು. ಅಧ್ಯಯನ ಪ್ರವೃತ್ತರಿಗೆ ಅನುಕೂಲಕರ. ಉದ್ಯೋಗದಲ್ಲಿ ಅಧಿಕ ಜವಾಬ್ದಾರಿ. ನೂತನ ಮಿತ್ರರ ಸಮಾಗಮ.
ಕುಂಭ: ಬಂದ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ. ಆತುರತೆ ಸಲ್ಲದು. ಪ್ರಯಾಣದಿಂದ ಸುಖ ಸಮೃದ್ಧಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ಆರೋಗ್ಯದಲ್ಲಿ ಗಮನವಿರಲಿ. ವ್ಯಾಪಾರಸ್ಥರಿಗೆ ಉತ್ತಮ ದಿನ.
ಮೀನ: ಮಕ್ಕಳ ಆರೋಗ್ಯದ ಕಡೆ ಗಮನಿಸಿ. ಪ್ರಯಾಣದಿಂದ ಲಾಭ. ದೂರಕಾರ್ಯದಲ್ಲಿ ಜಯ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ. ಧನಾರ್ಜನೆ ಉತ್ತಮವಿದ್ದರೂ ವಿಳಂಬವಾಗಿ ದೊರಕುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಈ ರಾಶಿ ಅವರಿಗಿಂದು ಶುಭಫಲಗಳ ದಿನ
Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ
Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ