ಸರ್ಕಾರಿ ಕಚೇರಿಗಳಿಂದಲೇ ಹೆಚ್ಚಿನ ವಿದ್ಯುತ್ ಬಿಲ್ ಬಾಕಿ : ಸುನಿಲ್ ಕುಮಾರ್
Team Udayavani, Sep 7, 2021, 1:16 PM IST
ಬೆಂಗಳೂರು : ರಾಜ್ಯದಲ್ಲಿ ಸರಕಾರಿ ಕಚೇರಿಗಳಿಂದಲೇ ಹೆಚ್ಚಿನ ವಿದ್ಯುತ್ ಬಿಲ್ ಬಾಕಿಯಾಗಿದ್ದು ಇದರಿಂದ ಸರಕಾರಕ್ಕೆ ಹೆಚ್ಚಿನ ಹೊರೆಯಾಗಿದೆ ಹಾಗಾಗಿ ವಿದ್ಯುತ್ ಬಳಕೆ ಮಾಡಿದರೆ ಬಿಲ್ ಕಟ್ಟುವುದು ಎಲ್ಲರಿಗೂ ಅನ್ವಯವಾಗಲಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು ಎರಡು ಇಲಾಖೆಯಲ್ಲಿ ಒಂದಷ್ಟು ಯೋಚನೆ ಆರಂಭವಾಗಿದೆ. ಎಲ್ಲ ಇಲಾಖೆಗಳಲ್ಲಿ ತಯಾರಿ ಮಾಡಿಕೊಳ್ಳಲು ಸೂಚಿಸಿದ್ದೇನೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಎಲ್ಲ ಮನೆಗಳಿಗೆ ವಿದ್ಯುತ್ ನೀಡುವ ಬೆಳಕು ಯೋಜನೆ ಅಡಿಯಲ್ಲಿ ವಿದ್ಯುತ್ ಸಂಪರ್ಕಕ್ಕೆ ಯೋಚಿಸಲಾಗಿದೆ ಅದಕ್ಕಾಗಿ ಸ್ಥಳೀಯ ಸಂಸ್ಥೆಗಳಿಂದ ಎನ್ ಒ ಸಿ ಅಗತ್ಯವಿಲ್ಲ ಎಂದರು.
ರಾಜ್ಯದ ಎಲ್ಲ ಡಿವಿಜನಲ್ ಗಳಲ್ಲಿ ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಮಾಡಲು ತೀರ್ಮಾನಿಸಲಾಗಿದ್ದು. ಟಿಸಿ ಸುಟ್ಟರೆ 24 ಗಂಟೆಯಲ್ಲಿ ದುರಸ್ತಿ ಮಾಡಲಾಗುವುದು, ಗಂಗಾ ಕಲ್ಯಾಣದ ಯೋಜನೆಗಳಿಗೆ 30 ದಿನದಲ್ಲಿ ಸಂಪರ್ಕ ನೀಡಲು ಸೂಚಿಸಲಾಗಿದೆ, ಅಲ್ಲದೆ ಸರ್ಕಾರಿ ಕಚೇರಿಗಳಲ್ಲಿ ಪ್ರಿಪೇಡ್ ಮೀಟರ್ ಅಳವಡಿಕೆಗೆ ತೀರ್ಮಾನಿಸಲಾಗಿದೆ ಎಂದರು.
ಉತ್ತರ ಕರ್ನಾಕಟದ ಜಿಲ್ಲೆಗಳಲ್ಲಿ 7 ಗಂಟೆ ನಿರಂತರ ವಿದ್ಯುತ್ ನೀಡಲು ತೀರ್ಮಾನಿಸಿದೆ. ಅದಕ್ಕಾಗಿ 60ಕ್ಕೂ ಹೆಚ್ಚು ಸಬ್ ಸ್ಟೇಶನ್ ಮಾಡಲು ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ :ಭಾರತಕ್ಕೆ ಇಸ್ಲಾಂ ಎಂಬ ಪದವು ಆಕ್ರಮಣಕಾರರೊಂದಿಗೆ ಬಂದಿದ್ದು : ಮೋಹನ್ ಜಿ ಭಾಗವತ್
ಈಗಾಗಲೇ ರಾಜ್ಯದಲ್ಲಿ ಹೊಸ ನೇಮಕಾತಿಗಳ ಬಗ್ಗೆ ಸಾಕಷ್ಟು ಬೇಡಿಕೆ ದೂರು ಬಂದಿದ್ದು ಲೈನ್ ಮೆನ್, ಜೆಇ ನೇಮಕದ ಬಗ್ಗೆ ಬೇಡಿಕೆ ಇದೆ . ವರ್ಗಾವಣೆ ದಂಧೆಯನ್ನು ವರ್ಷಪೂರ್ತಿ ನಡೆಸುವುದನ್ನು ನಿಯಂತ್ರಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವ ವ್ಯವಸ್ಥೆ ಕಡಿಮೆ ಮಾಡಲು ತೀರ್ಮಾನ. 100 ದಿನದಲ್ಲಿ ಕಲಾವಿದರ ಡಾಟಾ ಸಂಗ್ರಹ ಮಾಡಲು ತೀರ್ಮಾನಿಸಲಾಗಿದೆ. ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಇಲಾಖೆ ವತಿಯಿಂದ ನಡೆಸಲು ನಿರ್ಧರಿಸಲಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನ ನಡೆಸಲಾಗುವುದು ಎಂದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು