ಮೃತನ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ
ಮಂಗಳೂರು ವಿಮಾನ ದುರಂತ: ಸು.ಕೋ. ಆದೇಶ
Team Udayavani, May 22, 2020, 5:50 AM IST
ಹೊಸದಿಲ್ಲಿ: ಮಂಗಳೂರಿನ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ದುರಂತದಲ್ಲಿ ಮಡಿದಿದ್ದ ವ್ಯಕ್ತಿಯೊಬ್ಬರ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ಒದಗಿಸುವಂತೆ ಆದೇಶಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ದುರಂತದಲ್ಲಿ ಮೃತಪಟ್ಟಿದ್ದ 45 ವರ್ಷದ ಮಹೇಂದ್ರ ಕೋಡ್ಕಣಿ ಅವರ ಕುಟುಂಬಕ್ಕೆ 7.64 ಕೋಟಿ ರೂ. ಪರಿಹಾರ ನೀಡುವಂತೆ ಏರ್ ಇಂಡಿಯಾ ಸಂಸ್ಥೆಗೆ ನ್ಯಾ| ಡಿ.ವೈ. ಚಂದ್ರಚೂಡ್ ಮತ್ತು ನ್ಯಾ| ಅಜಯ್ ರಸ್ತೋಗಿ ಅವರನ್ನೊಳಗೊಂಡ ಸು.ಕೋ. ನ್ಯಾಯಪೀಠ ಸೂಚಿಸಿದೆ.ಮಹೇಂದ್ರ ಕೋಡ್ಕಣಿ ಯುಎಇ ಮೂಲದ ಕಂಪೆನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಅವರ ಸಾವಿನ ಅನಂತರ ಪತ್ನಿ, ಮಗಳು ಮತ್ತು ಮಗನಿಗೆ 7.35 ಕೋಟಿ ರೂ. ಪರಿಹಾರ ಘೋಷಿಸಿ ರಾಷ್ಟ್ರೀಯ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ (ಎನ್ಸಿಡಿಆರ್ಸಿ) ಆದೇಶ ಹೊರಡಿಸಿತ್ತು. ಪ್ರಕರಣ ಸಂಬಂಧ ತೀರ್ಪು ನೀಡಿದ ನ್ಯಾಯಪೀಠವು ಮಹೇಂದ್ರ ಅವರಿಗೆ ಸಲ್ಲಬೇಕಾದ ಪರಿಹಾರದ ಲೆಕ್ಕಾಚಾರದ ವೇಳೆ ಅವರ ವೇತನದ ಮೊತ್ತದಿಂದ ಹಣ ಕಡಿತಗೊಳಿಸಿರುವುದು ಮತ್ತು ಅದಕ್ಕೆ ರಾಷ್ಟ್ರೀಯ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗವು ನೀಡಿರುವ ಕಾರಣವು ಒಪ್ಪತಕ್ಕದ್ದಲ್ಲ ಎಂದಿದೆ. ಹೀಗಾಗಿ ಮಹೇಂದ್ರ ಅವರ ಕುಟುಂಬಕ್ಕೆ ಈಗ ನೀಡಿರುವ 7.35 ಕೋಟಿ ರೂ. ಪರಿಹಾರವನ್ನು 7.64 ಕೋಟಿ ರೂ.ಗಳಿಗೆ ಏರಿಕೆ ಮಾಡುತ್ತಿದ್ದೇವೆ. ಈಗ ಅವರಿಗೆ 7.64 ಕೋಟಿ ರೂ. ಪರಿಹಾರ ಮೊತ್ತ ಮತ್ತು ಹೆಚ್ಚುವರಿ ಮೊತ್ತಕ್ಕೆ ವಾರ್ಷಿಕ ಶೇ.9 ಬಡ್ಡಿ ಸಮೇತ ಪಾವತಿಸಬೇಕು ಎಂದು ಸು.ಕೋರ್ಟ್ ಏರ್ ಇಂಡಿಯಾಗೆ ನಿರ್ದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ