ಸುಪ್ರೀಂಕೋರ್ಟ್: ಇಬ್ಬರು ಜಡ್ಜ್ಗಳ ಪ್ರಮಾಣ
ಪ್ರಮಾಣ ಬೋಧಿಸಿದ ಸಿಜೆಐ ಚಂದ್ರಚೂಡ್: ಜೂನ್, ಜುಲೈನಲ್ಲಿ ನಾಲ್ವರು ನ್ಯಾಯಮೂರ್ತಿಗಳ ನಿವೃತ್ತಿ
Team Udayavani, May 20, 2023, 7:35 AM IST
ನವದೆಹಲಿ: ಸುಪ್ರೀಂಕೋರ್ಟ್ನ ಹೊಸ ನ್ಯಾಯಮೂರ್ತಿಗಳಾಗಿ ಆಂಧ್ರಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ನ್ಯಾ.ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ನ್ಯಾಯವಾದಿ ಕಲ್ಪಾತಿ ವೆಂಕಟರಮಣನ್ ವಿಶ್ವನಾಥನ್ ಶುಕ್ರವಾರ ಪ್ರಮಾಣ ಸ್ವೀಕರಿಸಿದ್ದಾರೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಬ್ಬರಿಗೆ ಪ್ರಮಾಣ ವಚನ ಬೋಧಿಸಿದರು. ಸಿಜೆಐ ಸೇರಿದಂತೆ 34 ನ್ಯಾಯಮೂರ್ತಿಗಳ ಸಂಖ್ಯೆ ಸದ್ಯಕ್ಕೆ ಪೂರ್ಣಗೊಂಡಿದ್ದರೂ, ಮುಂದಿನ ತಿಂಗಳು ಮೂವರು ನ್ಯಾಯಮೂರ್ತಿಗಳು ನಿವೃತ್ತರಾಗಲಿದ್ದಾರೆ.
ನ್ಯಾ.ಕೆ.ಎಂ.ಜೋಸೆಫ್ ಜೂ.16, ನ್ಯಾ.ಅಜಯ ರಸ್ತೋಗಿ ಜೂ.16 ಮತ್ತು ನ್ಯಾ.ವಿ.ರಾಮಸುಬ್ರಮಣಿಯನ್ ಜೂ.29, ನ್ಯಾ.ಕೃಷ್ಣ ಮುರಾರಿ ಜೂ.8ರಂದು ನಿವೃತ್ತಿಯಾಗಲಿದ್ದಾರೆ. ಹೀಗಾಗಿ, ಶುಕ್ರವಾರ ಸುಪ್ರೀಂಕೋರ್ಟ್ನ ಎಲ್ಲಾ ನ್ಯಾಯಮೂರ್ತಿಗಳು ಕಾರ್ಯಕಲಾಪದಲ್ಲಿ ಭಾಗವಹಿಸಿದ್ದರು. ಮೇ 22ರಿಂದ ಜು.2ರ ವರೆಗೆ ಬೇಸಗೆ ರಜೆ ಇರಲಿದೆ.
ಪ್ರಮಾಣ ವಚನ ಬೋಧಿಸುವ ಕಾರ್ಯಕ್ರಮದಲ್ಲಿ ಮುಂದಿನ ತಿಂಗಳು ನಿವೃತ್ತಿಯಾಗಲಿರುವ ಮೂವರು ನ್ಯಾಯಮೂರ್ತಿಗಳ ಕಾರ್ಯ ವೈಖರಿಗೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. ವಕೀಲರ ಕಡೆಯಿಂದ ನ್ಯಾಯಮೂರ್ತಿಯಾಗಿರುವ ವಿಶ್ವನಾಥನ್ ಇಂಥ ಹೆಗ್ಗಳಿಕೆಗೆ ಭಾಜನಾರಾಗಿರುವ ಮೂರನೇಯವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು