
ಸುರತ್ಕಲ್: ತಲವಾರು ಝಳಪಿಸಿ ಹಲ್ಲೆ; ಓರ್ವನ ಬಂಧನ,ಇನ್ನೋರ್ವ ಪರಾರಿ
ಗಾಂಜಾ ಸೇವಿಸಿ ಅಮಲಿನಲ್ಲಿ ಕೃತ್ಯ...
Team Udayavani, Feb 26, 2023, 6:08 PM IST

ಮಂಗಳೂರು : ಸುರತ್ಕಲ್ ನ ಚಿತ್ರಾಪುರ ಸಮೀಪದ ಕಡಲ ಕಿನಾರೆಯಲ್ಲಿ ಮಾದಕ ವ್ಯಸನಿ ದುಷ್ಕರ್ಮಿಗಳು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ,ಬೆದರಿಕೆ ಹಾಕಿದ ಘಟನೆ ಭಾನುವಾರ ಸಂಜೆ ನಡೆದಿದೆ.
ಗಾಂಜಾ ಸೇವಿಸಿದ ಅಮಲಿನಲ್ಲಿ ಈ ಕೃತ್ಯ ಎಸಗಿದ್ದು, ಸುನಿಲ್ ಎಂಬ ರಿಕ್ಷಾ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಆರೋಪಿ ಅಮನ್ ಎಂಬಾತನನ್ನು ಪೊಲೀಸರು ಸ್ಥಳೀಯರ ಸಹಕಾರದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೋರ್ವ ಸ್ಥಳದಿಂದ ಪರಾರಿಯಾಗಿದ್ದು ಆತನಿಗಾಗಿ ಶೋಧ ನಡೆಸಲಾಗುತ್ತಿದೆ.
ಕಡಲು ಕೊರೆತ ತಡೆಗೆ ಹಾಕಲಾಗಿದ್ದ ಕಲ್ಲುಗಳಲ್ಲಿ ಕಳೆದ ಹಲವು ತಿಂಗಳಿನಿಂದ ಮಾದಕ ವ್ಯಸನಿಗಳು ಅನೈತಿಕ ದಂಧೆ ನಡೆಸುತ್ತಿದ್ದು, ಈ ಕುರಿತು ಸ್ಥಳೀಯರು ಎಚ್ಚರಿಕೆ ನೀಡಿದ್ದರು ಎಂದು ತಿಳಿದು ಬಂದಿದೆ. ಸೇಡಿನಲ್ಲಿ ಈ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಸುರತ್ಕಲ್ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Fraud Case ಮೆಸ್ ಮ್ಯಾನೇಜರ್, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

CCB Police ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ

Karnataka Bandh; ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ; ಬಸ್ ಸಂಚಾರ ಎಂದಿನಂತೆ
MUST WATCH
ಹೊಸ ಸೇರ್ಪಡೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ