ಆರ್.ಡಿ.ಪಾಟೀಲ್ ಹೇಳಿಕೆ ಬಗ್ಗೆ ತನಿಖೆಗೆ ಸುರ್ಜೇವಾಲಾ ಆಗ್ರಹ
Team Udayavani, Jan 25, 2023, 7:41 PM IST
ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಸರಕಾರ ಎಂದರೆ ಸರಕಾರಿ ಹುದ್ದೆ ಮಾರಾಟ ಮಾಡುವ ಮಂಡಿಯಂತಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಸ್ಐ ನೇಮಕಾತಿ ಅಕ್ರಮದ ಕಿಂಗ್ಪಿನ್ ಆರ್. ಡಿ. ಪಾಟೀಲ್, ತಮ್ಮ ಪ್ರಕರಣ ಮುಚ್ಚಿಹಾಕಲು ಸಿಐಡಿ ಡಿವೈಎಸ್ಪಿ 3 ಕೋಟಿ ರೂ. ಲಂಚ ಕೇಳಿ 76 ಲಕ್ಷ ರೂ. ಪಡೆದಿದ್ದಾರೆ ಎಂದು ಸಾಕ್ಷ್ಯ ಸಮೇತ ಲೋಕಾಯುಕ್ತರಿಗೆ ದೂರು ನೀಡಿರುವುದು ಬಿಜೆಪಿ ಸರಕಾರದಲ್ಲಿ ನಡೆಯುತ್ತಿರುವ ಹಗರಣಕ್ಕೆ ಸಾಕ್ಷಿ ಎಂದು ದೂರಿದರು.
ಈ ಹಗರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್ ಪೊಲೀಸರನ್ನು ದಬ್ಬಿ ಬಂಧನದಿಂದ ತಪ್ಪಿಸಿಕೊಂಡಿದ್ದ. ಅಲ್ಲದೆ ಆತ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದ. ಈಗ ಒಂದು ಪತ್ರ ಬೆಳಕಿಗೆ ಬಂದಿದ್ದು, ಇದರಲ್ಲಿ ಪ್ರಕರಣದ ತನಿಖಾಧಿಕಾರಿ 3 ಕೋಟಿ ರೂ. ಲಂಚದ ಬೇಡಿಕೆ ಇಟ್ಟಿದ್ದು, ಅದರಲ್ಲಿ 76 ಲಕ್ಷ ರೂ. ಅನ್ನು ನೀಡಿದ್ದೇನೆ ಎಂದು ಹೇಳಿದ್ದಾನೆ. ಇಡೀ ಹಗರಣವನ್ನು ಮುಚ್ಚಲು ಈ ಬೇಡಿಕೆ ಇಡಲಾಗಿತ್ತು ಎಂದು ಲೋಕಾಯುಕ್ತಕ್ಕೆ ಬರೆದ ಪತ್ರದಲ್ಲಿ ಆರೋಪಿಸಲಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ಅವರ ಮೂಗಿನ ಕೆಳಗೆ ಇದೆಲ್ಲವೂ ಆಗುತ್ತಿದ್ದು ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿರುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಪ್ರಶ್ನಿಸಿದರು.
ಕರ್ನಾಟಕದಲ್ಲಿ ಸಿಎಂ ಹುದ್ದೆಯ ಹೆಸರನ್ನು ಬದಲಿಸಬೇಕಿದೆ. ರಾಜ್ಯದಲ್ಲಿ ಸರಕಾರಿ ಹುದ್ದೆಗಳನ್ನು ಹೆಚ್ಚು ಮೊತ್ತ ನೀಡಿದವರಿಗೆ ಹರಾಜು ಮಾಡಲಾಗುತ್ತಿದೆ. ಇದು ಸರಕಾರಿ ಉದ್ಯೋಗಗಳು ಮಾರಾಟವಾಗುವ ಮಂಡಿ ಮಾರುಕಟ್ಟೆಯಂತಾಗಿದೆ ಎಂದು ಆರೋಪಿಸಿದರು.
ರಾಜ್ಯ ಸರಕಾರದಿಂದ ನ್ಯಾಯಯುತ ತನಿಖೆ ಅಸಾಧ್ಯ. ಈ ಪ್ರಕರಣದ ತನಿಖಾಧಿಕಾರಿಗಳನ್ನು ತನಿಖೆ ನಡೆಸುವ ಅಗತ್ಯವಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತದೆ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಮಾತನಾಡಿ, ಈ ಪ್ರಕರಣದ ಹಿಂದೆ ಕೇವಲ ಎಸ್ಐ ಅಥವಾ ಅಧಿಕಾರಿಗಳು ಮಾತ್ರವಲ್ಲ, ಇಡೀ ವ್ಯವಸ್ಥೆಯೇ ಭಾಗಿಯಾಗಿದೆ. ಈ ನೇಮಕಾತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದ್ದರು. ಈಗ ಪ್ರಮುಖ ಆರೋಪಿಯೇ ಪ್ರಕರಣದ ತನಿಖಾಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಯಾರೆಲ್ಲ ಆರೋಪಿಗಳನ್ನು ಮುಕ್ತಗೊಳಿಸಲು ಎಷ್ಟು ವಸೂಲಿ ಮಾಡಲಾಗಿದೆ ಎಂಬುದರ ಬಗ್ಗೆ ಲೋಕಾಯುಕ್ತದಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಈ ಪ್ರಕರಣದಲ್ಲಿ ಕೆಲವರು ಮಂತ್ರಿಗಳ ಹೆಸರು ಹೇಳಿದರೆ, ಮತ್ತೆ ಕೆಲವರು ಗೃಹ ಸಚಿವರು, ಮುಖ್ಯಮಂತ್ರಿಗಳು, ಡಿಜಿಪಿ ಹೆಸರು ಹೇಳುತ್ತಿದ್ದಾರೆ. ಬಂಧನವಾಗಿರುವ ಐಪಿಎಸ್ ಅಧಿಕಾರಿಗೆ ನ್ಯಾಯಾಲಯದ ಮುಂದೆ ಹೇಳಿಕೆ ನೀಡಲು ಅವಕಾಶ ನೀಡುತ್ತಿಲ್ಲ ಎಂದು ದೂರಿದರು.
ಆರ್.ಡಿ. ಪಾಟೀಲ್ ಲೋಕಾಯುಕ್ತಕ್ಕೆ ಪತ್ರ ಬರೆದಿದ್ದು ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರಕ್ಕೆ ಸಾಕ್ಷಿ. ಗೃಹಸಚಿವರು ಈ ಹುದ್ದೆಯಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಹೊಂದಿಲ್ಲ. ಹೀಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅಥವಾ ಅವರನ್ನು ವಜಾಗೊಳಿಸಬೇಕು.
– ರಣದೀಪ್ ಸಿಂಗ್ ಸುರ್ಜೇವಾಲಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ