ಜಗದ ಅಧಿನಾಯಕ ಸೂರ್ಯ


Team Udayavani, Feb 19, 2021, 6:30 AM IST

ಜಗದ ಅಧಿನಾಯಕ ಸೂರ್ಯ

ಇಂದು ರಥಸಪ್ತಮಿ. ಸೂರ್ಯ ಪಥ ಬದಲಿಸುವ ದಿನ. ಈ ನಿಮಿತ್ತ ಆರೋಗ್ಯದಾಯಕನಾದ ಭಾಸ್ಕರನನ್ನು ನಮಿಸುವ ಕುರಿತು ಈ ಲೇಖನ.

ಜಗತ್ತಿನ ಸಮಸ್ತ ಜೀವಗಳ ಅಸ್ತಿತ್ವಕ್ಕೆ ಕಾರಣವಾಗಿರುವ ಸೂರ್ಯನಿಗೆ ಯಾವುದೇ ಜಾತಿ, ಧರ್ಮವಿಲ್ಲ. ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಆರೋಗ್ಯ ವನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಲು ನೆರವಾಗುವ ಪುರಾತನ ಭಾರತೀಯ ವ್ಯಾಯಾಮಗಳಲ್ಲಿ ಅತ್ಯಂತ ಮಹತ್ವದ ಸ್ಥಾನ ಪಡೆದಿರುವುದು ಸೂರ್ಯ ನಮಸ್ಕಾರ. ಇದಕ್ಕೆ ವೇದ ಕಾಲದಿಂದಲೂ ತನ್ನದೇ ಆದ ಮಹತ್ವವಿದೆ.

ಸಪ್ತ ಕುದುರೆಗಳ ರಥವನ್ನೇರಿದ ಸೂರ್ಯ ತನ್ನ ಪಥವನ್ನು ಉತ್ತರದತ್ತ ತಿರುಗಿಸಿ, ಹೊರಡುವ ಪರ್ವಕಾಲವೇ ಈ ರಥಸಪ್ತಮಿ. ಜಗದ ಅಧಿನಾಯಕ ಸೂರ್ಯ. ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿ ಈ ದಿನ ಸೂರ್ಯೋದಯದ ಸಮಯದಲ್ಲಿ ನದಿಯಲ್ಲಿ ಸ್ನಾನ ಮಾಡಿ, ಸೂರ್ಯನಿಗೆ ಅರ್ಘ್ಯ ನೀಡಿದರೆ ಸಕಲ ದುಃಖಗಳು ಪರಿಹಾರವಾಗುತ್ತವೆ ಎಂಬ ನಂಬಿಕೆಯೂ ಇದೆ. ರಥಸಪ್ತಮಿಯ ಅನಂತರ ಚಳಿ ಕಡಿಮೆಯಾಗಿ ಬಿಸಿಲಿನ ಪ್ರಖರತೆ ಹೆಚ್ಚುತ್ತದೆ.

ಸೂರ್ಯನ ಪೂಜೆ ಎಕೆ? : ಸೂರ್ಯ ಆರೋಗ್ಯ ಮತ್ತು ಐಶ್ವರ್ಯ ದತ್ತ ಎಂಬ ಕಾರಣಕ್ಕೆ ಆತನನ್ನು ಭಕ್ತಿ- ಭಾವದಿಂದ ಪೂಜಿಸಲಾಗುತ್ತದೆ. ಅಲ್ಲದೆ ಬೆಳಗ್ಗಿನ ಸೂರ್ಯನ ಎಳೆಬಿಸಿಲಲ್ಲಿ ದೇಹಕ್ಕೆ ಶಕ್ತಿ ನೀಡುವ ಅಂಶಗಳಿವೆ ಎಂಬುದೂ ವೈಜ್ಞಾನಿಕವಾಗಿ ಸಾಬೀತಾಗಿದೆ. ದೇಹಕ್ಕೆ ದೇಹಕ್ಕೆ ಅತ್ಯಗ್ಯವಾದ ವಿಟಮಿನ್‌ ಡಿ ಅಂಶ ಸೂರ್ಯಕಿರಣದಲ್ಲಿ ಹೇರಳವಾಗಿರುತ್ತದೆ. ಆದ್ದರಿಂದ ಸೂರ್ಯನನ್ನು ಪೂಜಿಸಲಾಗುತ್ತದೆ.

ಸೂರ್ಯ ನಮಸ್ಕಾರ ಎಂದರೆ ಆಸನ ಮತ್ತು ಪ್ರಾಣಾಯಾಮಗಳ ಮಿಶ್ರಣ. ದೇಹದ ಜಡತ್ವ ಹೋಗಿ, ಮೃದುತ್ವ , ಲಘುತ್ವ ಬರಲು ಸೂರ್ಯ ನಮಸ್ಕಾರ ಸಹಕಾರಿಯಾಗಿದೆ. ಬೆಳಿಗ್ಗೆ ಎದ್ದ ಕೂಡಲೇ ನೇರವಾಗಿ ಯೋಗ ಮಾಡಲು ಕಷ್ಟವಾಗುತ್ತದೆ. ಆರಂಭದಲ್ಲಿ ಸರಳ ವ್ಯಾಯಾಮ ಆನಂತರ ಸೂರ್ಯ ನಮಸ್ಕಾರ ಮಾಡಬೇಕು. ಜ್ಞಾನಿಗಳು ಸೂರ್ಯದೇವನ ಅನುಗ್ರಹವಿದ್ದರೆ ಆರೋಗ್ಯ ಭಾಗ್ಯ ಲಭಿಸುತ್ತದೆ ಎಂದಿದ್ದಾರೆ.

ಮಾನವನ ದೈನಂದಿನ ಚಟುವಟಿಕೆ ಆರಂಭವಾಗುವುದೇ ಸೂರ್ಯೋದಯದ ವೇಳೆ. ಆದ್ದರಿಂದ ಭಾಸ್ಕರನಿಗೆ ನಮಿಸುತ್ತಾ ಸೂರ್ಯದೇವನ ಮಂತ್ರಗಳನ್ನು ಹೇಳುತ್ತಾ ಸೂರ್ಯ ನಮಸ್ಕಾರ ಮಾಡುವುದು ನಮ್ಮ ಕರ್ತವ್ಯ.

ಸೂರ್ಯ ನಮಸ್ಕಾರ ಮಾಡುವಲ್ಲಿ ಮುಖ್ಯವಾಗಿ ಎರಡು ಪ್ರಕಾರಗಳಿವೆ.

12 ಹಂತಗಳಲ್ಲಿ (ಶಶಾಂಕಾಸನ ಸಹಿತ) 10 ಹಂತಗಳಲ್ಲಿ (ಶಶಾಂಕಾಸನ ರಹಿತ)
ಸೂರ್ಯ ನಮಸ್ಕಾರಗಳನ್ನು ಸಾಮೂಹಿಕವಾಗಿ ಅಭ್ಯಾಸ ಮಾಡುವುದರಿಂದ ಆನಂದ ಉತ್ಸಾಹ ಹೆಚ್ಚು ಒದಗಿ ಬರುತ್ತದೆ. ಸೂರ್ಯ ನಮಸ್ಕಾರ ಅಭ್ಯಾಸ ಮಾಡಲು ಸ್ವತ್ಛವಾದ ಗಾಳಿ ಬೆಳಕು ಇರಬೇಕು ಮತ್ತು ಶಾಂತ ಸ್ಥಳದಲ್ಲಿ ಜಮಖಾನ ಹಾಸಿ ಅಭ್ಯಾಸ ಮಾಡಬೇಕು. ಸೂರ್ಯ ನಮಸ್ಕಾರವನ್ನು ಯಾವಾಗಲೂ ಸೂರ್ಯೋದಯ (ಪೂರ್ವ) ಅಥವಾ ಸೂರ್ಯಾಸ್ತದ (ಪಶ್ಚಿಮ) ದಿಕ್ಕಿನಲ್ಲಿ ಮುಖಮಾಡಿ ಮಾಡಲಾಗುವುದು. ಅಭ್ಯಾಸ ಆದ ಮೇಲೆ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆಯಬೇಕು.

ಸೂರ್ಯ ನಮಸ್ಕಾರದ ಭಂಗಿಯಲ್ಲಿ ಕೆಲವು ಆಸನಗಳು ಬರುತ್ತವೆ.

ನಮಸ್ಕಾರ ಮುದ್ರೆ 2. ಅರ್ಧಚಕ್ರಾಸನ(ಊರ್ಧ್ವಸನ) 3.ಉತ್ತಾನಾಸನ
4.ಏಕಪಾದ ಪ್ರಸರಣಾಸನ 5. ಚತುರಂಗ ದಂಡಾಸನ ( ದ್ವಿಪಾದ ಪ್ರಸರಣಾಸನ)
6. ಶಶಾಂಕಾಸನ 7. ಸಾಷ್ಟಾಂಗ ನಮನ(ಅಷ್ಟಾಂಗ ನಮಸ್ಕಾರ) 8 ಊರ್ಧ್ವ ಮುಖ ಶ್ವಾನಾಸನ 9. ಅಧೋಮುಖ ಶ್ವಾನಾಸನ

ಸೂರ್ಯ ನಮಸ್ಕಾರದ ಪ್ರಯೋಜನಗಳು: ದೈಹಿಕ ನಿಲುವು ಮತ್ತು ಚಲನಾ ವ್ಯವಸ್ಥೆ ಸುಗಮವಾಗುವುದು. ಹೃದಯ ಕ್ರಿಯೆ ಮತ್ತು ರಕ್ತ ಚಲನೆ ಸುಸೂತ್ರವಾ ಗುವುದು. ಜೀರ್ಣಕ್ರಿಯೆ ಆರೋಗ್ಯಕರವಾಗುವುದು. ಶ್ವಾಸಕೋಶಗಳು ಬಲಿಷ್ಠವಾ ಗುವುವು. ನರವ್ಯೂಹ ಮತ್ತು ಮೆದುಳು ಚುರುಕಾಗುವುದು. ಜ್ಞಾನೇಂದ್ರಿಯಗಳು ಚುರುಕುಗೊಳ್ಳುವುವು, ಕ್ರಿಯಾಶೀಲವಾಗುವುವು. ಶರೀರ ಮೃದುತ್ವ, ಲಘುತ್ವ ಉಂಟಾಗಿ ಮಾನಸಿಕ ಜಡತ್ವ ಮಾಯವಾಗುವುದು.

– ಗೋಪಾಲಕೃಷ್ಣ ದೇಲಂಪಾಡಿ, ಮಂಗಳೂರು

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

ಧೀರೋದಾತ್ತ ಕೆದಂಬಾಡಿ ರಾಮಯ್ಯ ಗೌಡ

ಧೀರೋದಾತ್ತ ಕೆದಂಬಾಡಿ ರಾಮಯ್ಯ ಗೌಡ

ನವ ನಾಮ, ನವ ರೂಪ ಧಾರಿಣೀ ನಮೋಸ್ತುತೇ

ನವ ನಾಮ, ನವ ರೂಪ ಧಾರಿಣೀ ನಮೋಸ್ತುತೇ

ಸಮಗ್ರ ಕರ್ನಾಟಕದ ಸಾಕ್ಷಿ ಪ್ರಜ್ಞೆ ಕಯ್ಯಾರ ರ ಕಿಂಞಣ್ಣ ರೈ

ಸಮಗ್ರ ಕರ್ನಾಟಕದ ಸಾಕ್ಷಿ ಪ್ರಜ್ಞೆ ಕಯ್ಯಾರ ರ ಕಿಂಞಣ್ಣ ರೈ

ಸತ್ಯಜ್ಞಾನದ ಶಕ್ತಿಯಿಂದ ರಾರಾಜಿಸುತ್ತಿದ್ದ ಯತೀಶ್ವರ

ಸತ್ಯಜ್ಞಾನದ ಶಕ್ತಿಯಿಂದ ರಾರಾಜಿಸುತ್ತಿದ್ದ ಯತೀಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.