ಇಂದಿನಿಂದ ಉತ್ತರಾಧಿವೇಶನ; ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಮಂಡಲ ಕಲಾಪ

ಗಡಿ ವಿವಾದ, ಚಿಲುಮೆ, ಕುಕ್ಕರ್‌ ಬ್ಲಾಸ್ಟ್‌ , 40 ಪರ್ಸೆಂಟ್‌ ಸದ್ದು

Team Udayavani, Dec 19, 2022, 7:05 AM IST

 ಇಂದಿನಿಂದ ಉತ್ತರಾಧಿವೇಶನ; ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಮಂಡಲ ಕಲಾಪ

ಬೆಳಗಾವಿ: ಕುಂದನಗರಿಯ ಸುವರ್ಣಸೌಧದಲ್ಲಿ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಬೆಳಗಾವಿ ಗಡಿ ವಿವಾದ, ಮತದಾರರ ಮಾಹಿತಿ ಕಳವು, 40 ಪರ್ಸೆಂಟ್‌ ಕಮಿಷನ್‌, ಕುಕ್ಕರ್‌ ಬ್ಲಾಸ್ಟ್‌ ವಿವಾದಾತ್ಮಕ ಹೇಳಿಕೆ, ಕಬ್ಬು ಬೆಳೆಗಾರರ ಪ್ರತಿಭಟನೆ ಬಲವಾದ ಸದ್ದು ಮಾಡುವ ಲಕ್ಷಣಗಳು ಕಂಡುಬರುತ್ತಿವೆ.

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ನಡೆ ಯುತ್ತಿರುವ ಈ ಬಾರಿಯ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ರಾಜಕೀಯ ಜಿದ್ದಾ ಜಿದ್ದಿ ವಿಚಾರಗಳೇ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದ ಕಿರಿಕಿರಿ, ಮತದಾರರ ಮಾಹಿತಿ ಕಳವು, 40 ಪರ್ಸೆಂಟ್‌ ಕಮಿಷನ್‌, ಪಿಎಸ್‌ಐ ಹಗ ರಣದ ಆಡಿಯೋ ವಿಚಾರದ ಬಗ್ಗೆ ತನಿಖೆಗೆ ಒತ್ತಾಯಿಸಿ ಸರಕಾರದ ಮೇಲೆ ಮುಗಿ ಬೀಳಲು ಕಾಂಗ್ರೆಸ್‌ ಸಜ್ಜಾಗುತ್ತಿದೆ.

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್‌ ಹಾಗೂ ವಿಧಾನಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ನಡುವೆ ಆಪರೇಷನ್‌ ಕಮಲ ಸಂದರ್ಭದಲ್ಲಿ ಕೋಟ್ಯಂತರ ರೂ. ಹಣದ ವಹಿವಾಟು ನಡೆದಿರುವ ಬಗ್ಗೆ ಬಹಿರಂಗ ಹೇಳಿಕೆಗಳನ್ನು ಪ್ರಸ್ತಾವಿಸಿ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್‌ ತೀರ್ಮಾ ನಿಸಿದೆ. ಇದಕ್ಕೆ ಪ್ರತಿಯಾಗಿ ಕೆಪಿಸಿಸಿ ಅಧ್ಯಕ್ಷರ ಕುಕ್ಕರ್‌ ಬ್ಲಾಸ್ಟ್‌ ಹೇಳಿಕೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನಡೆದಿದೆ ಎನ್ನಲಾದ ಹಗರಣ-ನೇಮಕಾತಿ ಮುಂದಿಟ್ಟು ತಿರುಗೇಟು ನೀಡಲು ಆಡಳಿತಾರೂಢ ಬಿಜೆಪಿ ಕಾರ್ಯತಂತ್ರ ರೂಪಿಸಿದೆ.

ಸದ್ದು-ಗದ್ದಲ
ಕುಕ್ಕರ್‌ ಬ್ಲಾಸ್ಟ್‌ ವಿಚಾರಕ್ಕೆ ಸಂಬಂಧಿಸಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷಡಿ.ಕೆ. ಶಿವಕುಮಾರ್‌ ವಿರುದ್ಧ ಸೋಮ ವಾರ ದಿಂದ ಬುಧವಾರದ ವರೆಗೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಹೀಗಾಗಿ ಅಧಿವೇಶನ ವಾಕ್ಸಮರಕ್ಕೆ ವೇದಿಕೆಯಾಗುವ ಸಾಧ್ಯತೆಯಿದೆ.

ಪಂಚರತ್ನ ಯಾತ್ರೆಯಲ್ಲಿರುವ ಎಚ್‌.ಡಿ. ಕುಮಾರಸ್ವಾಮಿ ಅಧಿವೇಶನಕ್ಕೆ ಬರುವುದಿಲ್ಲ ಎಂದು ಹೇಳಿದ್ದು, ಉಪ ನಾಯಕ ಬಂಡೆಪ್ಪ ಕಾಶೆಂಪುರ್‌ ಜೆಡಿಎಸ್‌ ಶಾಸಕರಿಗೆ ಈ ಬಾರಿ ನಾಯಕ. ಸರಕಾರದ ವಿರುದ್ಧ ಹೋರಾಟದಲ್ಲಿ ಕಾಂಗ್ರೆಸ್ಸಿಗೆ ಜೆಡಿಎಸ್‌ ಸಾಥ್‌ ನೀಡುತ್ತದೆಯೇ ಅಥವಾ ಪ್ರತ್ಯೇಕವಾಗಿ ಹೋರಾಟ ಮಾಡುತ್ತದೆಯೇ ಕಾದು ನೋಡಬೇಕಾಗಿದೆ.

ಎಸ್‌ಸಿ-ಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಳ, ಒಳ ಮೀಸಲಾತಿಗಾಗಿ ಸಂಪುಟ ಉಪ ಸಮಿತಿ ರಚನೆ, ನೇಕಾರ ಸಮುದಾಯಕ್ಕೆ ಪ್ಯಾಕೇಜ್‌, ಸರಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಅಂಕಿ ಅಂಶಗಳೊಂದಿಗೆ ಅಧಿವೇಶನದಲ್ಲಿ ಪ್ರಸ್ತಾವಿಸಿ ವಿಪಕ್ಷಗಳ ಬಾಯಿ ಮುಚ್ಚಿಸಲು ಬಿಜೆಪಿ ಶಾಸಕರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.

ಕಬ್ಬು ಬೆಳೆಗಾರರ ಹೋರಾಟ
ಕಬ್ಬು ಬೆಳೆಗಾರರ ಸಮಸ್ಯೆ ಈ ಬಾರಿಯ ಅಧಿವೇಶನದಲ್ಲೂ ಪ್ರತಿಧ್ವನಿಸಲಿದ್ದು, ಪ್ರತೀ ಟನ್‌ಗೆ ಕೇಂದ್ರ ಸರಕಾರ ಘೋಷಿಸಿರುವ 3,050 ರೂ. ಜತೆಗೆ 500 ರೂ. ರಾಜ್ಯ ಸರಕಾರ ಕೊಡಬೇಕು ಎಂಬುದು ಅವರ ಬೇಡಿಕೆ. ಡಿ. 26ರಂದು ಸುವರ್ಣಸೌಧ ಮುತ್ತಿಗೆ ಹಾಕಲು ಕಬ್ಬು ಬೆಳೆಗಾರರು ಮುಂದಾಗಿದ್ದಾರೆ.

ಹಗರಣ, ಭ್ರಷ್ಟಾಚಾರ ಪ್ರಸ್ತಾವ
ಅಧಿವೇಶನದಲ್ಲಿ ಬಿಜೆಪಿ ಸರಕಾರದ ಭ್ರಷ್ಟಾಚಾರ, ಹಗರಣ ಪ್ರಸ್ತಾವಿಸಲಿದ್ದೇವೆ. ಜತೆಗೆ ಮೂರು ವರ್ಷಗಳಿಂದ ಅಧಿಕಾರ ನಡೆಸುತ್ತಿರುವ ಬಿಜೆಪಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಸ್ಪಂದಿಸದ ಬಗ್ಗೆಯೂ ವಾಸ್ತವಾಂಶ ತಿಳಿಸುತ್ತೇವೆ ಎಂದು ವಿಪಕ್ಷ ನಾಯಕ  ಸಿದ್ದರಾಮಯ್ಯ ಹೇಳಿದ್ದಾರೆ.

ಸುಮ್ಮನೆ ಬಿಡುವುದಿಲ್ಲ
ಪ್ರತೀ ಅಧಿವೇಶನದಲ್ಲೂ ಬಿಜೆಪಿ ಹಾಗೂ ಕಾಂಗ್ರೆಸ್‌ ವೈಯಕ್ತಿಕ ಅಜೆಂಡಾಗಳ ಮೇಲೆ ಕಿತ್ತಾಡಿಕೊಂಡು ಈ ಭಾಗದ ಸಮಸ್ಯೆಗಳಿಗೆ ಸ್ಪಂದಿಸದೆ ಅನ್ಯಾಯ ಮಾಡುತ್ತಿವೆ. ಈ ಬಾರಿ ನಾವು ಸುಮ್ಮನೆ ಬಿಡುವುದಿಲ್ಲ. ನಮ್ಮ ಭಾಗದ ಬೇಡಿಕೆಗಳಿಗೆ ಶಾಶ್ವತ ಪರಿಹಾರ ಸಿಗಲೇಬೇಕು ಎಂದು ಜೆಡಿಎಸ್‌ ಉಪ ನಾಯಕ  ಬಂಡೆಪ್ಪ ಕಾಶೆಂಪುರ್‌ ಹೇಳಿದ್ದಾರೆ.

ಬೆಳಗಾವಿ ಗಡಿ ತಂಟೆ ಚರ್ಚೆ
ಅಧಿವೇಶನ ಸಂದರ್ಭದಲ್ಲೇ ಮಹಾ ರಾಷ್ಟ್ರ ಗಡಿ ವಿಚಾರದಲ್ಲಿ ತಂಟೆ ತೆಗೆದಿದೆ. ಅಲ್ಲಿನ ಸಚಿವರು, ಸಂಸದರು ಬೆಳಗಾವಿಗೆ ಬರುವುದಕ್ಕೆ ರಾಜ್ಯ ಸರಕಾರ ನಿರ್ಬಂಧ ಹೇರಿದೆ. ಆದರೂ ಸೋಮವಾರ ಎಂಇ ಎಸ್‌ ಮಹಾಮೇಳಾವ ಹಮ್ಮಿಕೊಂಡಿದ್ದು, ಅಲ್ಲಿ ರಾಜ್ಯದ ಹಿತಾಸಕ್ತಿಗೆ ಧಕ್ಕೆ ತರುವ ಪ್ರಚೋದನಕಾರಿ ಮಾತು ಹೊರಬಿದ್ದರೆ ಅಧಿವೇಶನದಲ್ಲಿ ಬಿಸಿ ಏರಬಹುದು. ಜತೆಗೆ ಎರಡೂ ರಾಜ್ಯಗಳಲ್ಲಿ ಬಿಜೆಪಿಯೇ ಆಡಳಿತದಲ್ಲಿರುವುದರಿಂದ ವಿವಾದವನ್ನು ಬೇಗ ಇತ್ಯರ್ಥ ಮಾಡಿಕೊಳ್ಳಿ ಎಂದು ವಿಪಕ್ಷಗಳು ಒತ್ತಾಯಿಸಬಹುದು.

ಸದನದ ಒಳಗೆ ಸಾವರ್ಕರ್‌ ಭಾವಚಿತ್ರ?
ಅಧಿವೇಶನ ಸಂದರ್ಭದಲ್ಲಿ ಸುವರ್ಣಸೌಧ ಸದನದೊಳಗೆ ಕೆಲವು ಮಹ ನೀಯರ ಭಾವಚಿತ್ರ ಅನಾವರಣ ನಡೆಯಲಿದ್ದು, ಸಾವರ್ಕರ್‌ ಭಾವಚಿತ್ರವೂ ಸೇರಿದೆ ಎನ್ನಲಾಗುತ್ತಿದೆ. ನಿರ್ಣಯ ಆಗಿರುವಂತೆ ಮಹಾಪುರುಷರ ಭಾವಚಿತ್ರ ಅನಾವರಣವಾಗಲಿದೆ. ಯಾರ ಭಾವಚಿತ್ರ ಎಂಬುದು ಅನಂತರ ತಿಳಿಯಲಿದೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಪರಿಷತ್‌ನಲ್ಲಿ ಸಾವರ್ಕರ್‌ ಭಾವಚಿತ್ರ ಅನಾವರಣವಾಗುತ್ತಿಲ್ಲ ಎಂದು ಸಭಾಪತಿ ರಘುನಾಥ್‌ ರಾವ್‌ ಮಲ್ಕಾಪುರೆ ಹೇಳಿದರೆ, ಸಾವರ್ಕರ್‌ ಚಿತ್ರ ಅನಾವರಣ ಆಗಲಿದೆ ಎಂದು ಮೇಲ್ಮನೆ ಸದಸ್ಯ ರವಿಕುಮಾರ್‌ ಹೇಳಿದರು.

 

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.