ಬೇಡ ಬೇಡ ಎಂದರೂ ಕಲಾವಿದನ ಸಂಗೀತ ಪರಿಕರವನ್ನೇ ಸುಟ್ಟು ಹಾಕಿ ವಿಕೃತಿ ಮೆರೆದ ತಾಲಿಬಾನಿಗಳು
Team Udayavani, Jan 16, 2022, 12:53 PM IST
ಕಾಬೂಲ್ : ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಳ್ಳುತ್ತಿದ್ದಂತೆ ಅಲ್ಲಿನ ಜನರ ಪರಿಸ್ಥಿತಿ ಅಯೋಮಯವಾಗಿದೆ.
ಅಲ್ಲದೆ ತಾಲಿಬಾನಿಗಳು ಅಫ್ಘಾನಿಸ್ತಾನದವರ ಮೇಲೆ ಮನ ಬಂದಂತೆ ದಾಳಿ ನಡೆಸುವುದು, ಕ್ರೌರ್ಯ ಮೆರೆಯುವುದು ಹೆಚ್ಚಾಗತೊಡಗಿದೆ ಅದಕ್ಕೆ ಪುಷ್ಟಿ ಎಂಬಂತೆ ಅಫ್ಘಾನಿಸ್ತಾನ ಜಜೈಅರುಬ್ ಜಿಲ್ಲೆಯಲ್ಲಿ ಕಲಾವಿದನೋರ್ವನ ಸಂಗೀತ ಪರಿಕರವನ್ನು ಆತನ ಮುಂದೆಯೇ ತಾಲಿಬಾನಿಗಳು ಸುಟ್ಟು ಹಾಕಿ ವಿಕೃತಿ ಮೆರೆದಿದ್ದಾರೆ ಈ ವೇಳೆ ಕಲಾವಿದ ಸಂಗೀತ ಪರಿಕರವನ್ನು ಸುಡಬೇಡಿ ಎಂದು ಪರಿಪರಿಯಾಗಿ ಬೇಡಿಕೊಂಡು ಅಳುತಿದ್ದರೂ ಅದನ್ನು ಲೆಕ್ಕಿಸದೆ ಸುಟ್ಟು ಹಾಕಿದ್ದಾರೆ ಈ ವೇಳೆ ಅಲ್ಲಿದ್ದ ತಾಲಿಬಾನಿಗಳು ಇದರ ವಿಡಿಯೋವನ್ನು ಅಲ್ಲಿನ ಪತ್ರಕರ್ತರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ಪಡೆದ ತಾಲಿಬಾನಿಗಳು ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ ಅದರಂತೆ ಅಲ್ಲಿನ ವಾಹನಗಳಲ್ಲಿ ಸಂಗೀತ ಹಾಕುವುದು, ಸಭೆ- ಸಮಾರಂಭಗಳಲ್ಲಿ ಸಂಗೀತ ಹಾಕಿ ಮನರಂಜನೆಗಳನ್ನು ನಿಷೇಧಿಸಿದೆ.
ತಾಲಿಬಾನ್ ಮದುವೆಗಳಲ್ಲಿ ಸಂಗೀತವನ್ನು ನಿಷೇಧಿಸಿದೆ ಅಲ್ಲದೆ ಪುರುಷರು ಮತ್ತು ಮಹಿಳೆಯರಿಗೆ ಬೇರೆ ಬೇರೆ ಹಾಲ್ ನಲ್ಲಿ ಕುಳಿತು ಸಂಭ್ರಮ ಆಚರಿಸಲು ಆದೇಶಿಸಿದೆ.
20 ವರ್ಷಗಳ ನಂತರ ತಾಲಿಬಾನ್ ಮತ್ತೊಮ್ಮೆ ಅಫ್ಘಾನಿಸ್ತಾನದ ಮೇಲೆ ಹಿಡಿತ ಸಾಧಿಸಿರುವುದರಿಂದ, ಭಯೋತ್ಪಾದಕ ಗುಂಪಿನ ಆಡಳಿತದಲ್ಲಿ ಅಫ್ಘಾನ್ ಮಹಿಳೆಯರು ಅನಿಶ್ಚಿತ ಭವಿಷ್ಯವನ್ನು ಎದುರಿಸುವ ಸಾಧ್ಯತೆಯಿದೆ ಎಂದು ಇಲ್ಲಿನ ತಜ್ಞರು ನಂಬಿದ್ದಾರೆ.
Video : Taliban burn musician’s musical instrument as local musicians weeps. This incident happened in #ZazaiArub District #Paktia Province #Afghanistan . pic.twitter.com/zzCp0POeKl
— Abdulhaq Omeri (@AbdulhaqOmeri) January 15, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ