ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ರಣಕೇಕೆ: ತಂದೆ ಮೇಲಿನ ಸೇಡಿಗೆ ಮಗುವಿಗೆ ಮರಣದಂಡನೆ
ಎಚ್ಚರಿಕೆಯ ಸಂದೇಶ ರವಾನಿಸಲು ತಾಲಿಬಾನ್ ಇಂತಹ ಕ್ರೂರ ಕೃತ್ಯಕ್ಕೆ ಮುಂದಾಗುತ್ತಿದೆ
Team Udayavani, Sep 28, 2021, 10:55 AM IST
ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸ ಮಿತಿಮೀರಿದ್ದು, ಮಗುವೊಂದನ್ನು ತಾಲಿಬಾನ್ ಬಂಡುಕೋರರು ಬಹಿರಂಗವಾಗಿ ಮರಣದಂಡನೆ ಶಿಕ್ಷೆ ವಿಧಿಸಿದ್ದಾರೆ. ಮಗುವಿನ ತಂದೆ ಪಂಜ್ ಶೀರ್ ನ ಅಫ್ಘಾನ್ ಪ್ರತಿರೋಧ ಪಡೆಯಲ್ಲಿ ಸದಸ್ಯನಾಗಿರಬೇಕೆಂಬ ಸಂಶಯ ಪರಿಣಾಮ ಈ ಕೃತ್ಯ ಎಸಗಲು ಕಾರಣ ಎಂದು ವರದಿ ತಿಳಿಸಿದೆ!
ಇದನ್ನೂ ಓದಿ:ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್
ಮಗುವಿಗೆ ಮರಣದಂಡನೆ ಶಿಕ್ಷೆ ವಿಧಿಸಿರುವ ಘಟನೆಯನ್ನು ಪಂಜ್ ಶೀರ್ ನ ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ಮಗುವಿನ ತಂದೆ ಪ್ರತಿರೋಧ ಪಡೆಯ ಸದಸ್ಯ ಎಂಬ ಸಂಶಯದಿಂದ ತಖಾರ್ ಪ್ರಾಂತ್ಯದಲ್ಲಿ ಮಗುವನ್ನು ತಾಲಿಬಾನ್ ಹತ್ಯೆಗೈದಿರುವುದಾಗಿ ವರದಿ ವಿವರಿಸಿದೆ.
ಯಾರು ತಾಲಿಬಾನ್ ವಿರುದ್ಧ ಧ್ವನಿ ಎತ್ತುತ್ತಾರೋ ಅವರಿಗೆ ಎಚ್ಚರಿಕೆಯ ಸಂದೇಶ ರವಾನಿಸಲು ತಾಲಿಬಾನ್ ಇಂತಹ ಕ್ರೂರ ಕೃತ್ಯಕ್ಕೆ ಮುಂದಾಗುತ್ತಿದೆ ಎಂದು ಖಾಸಗಿ ಮಾಧ್ಯಮ ಟ್ವೀಟ್ ನಲ್ಲಿ ತಿಳಿಸಿದೆ.
ಅಫ್ಘಾನಿಸ್ತಾನದ ಆಡಳಿತವನ್ನು ತಾಲಿಬಾನ್ ವಶಕ್ಕೆ ಪಡೆದ ನಂತರ ತಾಲಿಬಾನ್ ಬಂಡುಕೋರರು ಅಂತರಾಷ್ಟ್ರೀಯ ಮಟ್ಟದ ದೇಶಗಳ ನಾಯಕರನ್ನು ಸೆಳೆಯಲು ತಾವು ಬದಲಾಗಿದ್ದೇವೆ ಎಂಬಂತೆ ನಟಿಸಿದ್ದವು. ಆದರೆ ತಜ್ಞರ ಪ್ರಕಾರ, ತಾಲಿಬಾನ್ ಬಂಡುಕೋರರು ಅದೇ ಹಿಂಸಾತ್ಮಕ ಮನೋಭಾವವನ್ನೇ ಹೊಂದಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ