ಅಟ್ಟಹಾಸ: ತಾಲಿಬಾನ್ ಉಗ್ರರಿಂದ ಅಫ್ಘಾನ್ ಸರ್ಕಾರದ ಉನ್ನತ ಮಾಧ್ಯಮ ಅಧಿಕಾರಿ ಹತ್ಯೆ
ನ್ಯಾಯಾಧೀಶರು ಮತ್ತು ಸಾರ್ವಜನಿಕರು ತಾಲಿಬಾನ್ ಉಗ್ರರಿಂದ ಕೊಲ್ಲಲ್ಪಟ್ಟಿರುವುದಾಗಿ ವರದಿ ಹೇಳಿದೆ
Team Udayavani, Aug 6, 2021, 5:54 PM IST
ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಶುಕ್ರವಾರ ಅಫ್ಘಾನ್ ಸರ್ಕಾರದ ಮಾಧ್ಯಮ ಮತ್ತು ಮಾಹಿತಿ ಅಧಿಕಾರಿಯನ್ನು ಹತ್ಯೆಗೈದಿರುವ ಘಟನೆ ಶುಕ್ರವಾರ(ಆಗಸ್ಟ್ 06) ಕಾಬೂಲ್ ನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಮಹೇಂದ್ರ ಸಿಂಗ್ ಧೋನಿ ಟ್ವಿಟರ್ ಖಾತೆಯಿಂದ ‘ಬ್ಲೂ ಟಿಕ್’ ಮಾಯ!
ಸರ್ಕಾರಿ ಮಾಧ್ಯಮ ಮತ್ತು ಮಾಹಿತಿ ಕೇಂದ್ರದ (ಜಿಎಂಐಸಿ) ಮುಖ್ಯಸ್ಥ ದವಾ ಖಾನ್ ಮೆನಾಪಾಲ್ ಅವರನ್ನು ಉಗ್ರರು ಹತ್ಯೆಗೈದಿರುವುದಾಗಿ ಫೆಡರಲ್ ಆಂತರಿಕ ಸಚಿವಾಲಯದ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಖಾನ್ ಅವರನ್ನು ಭಯೋತ್ಪಾದಕರು ಕೊಂದಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.
ಮೆನಾಪಾಲ್ ಯುವಕನಾಗಿದ್ದು, ಉಗ್ರರ ಪ್ರಚಾರದ ವಿರುದ್ಧ ಬಂಡೆಯಂತೆ ನಿಂತಿದ್ದ ಅವರು ಅಫ್ಘಾನ್ ಸರ್ಕಾರದ ಬೆಂಬಲಿಗರಾಗಿದ್ದರ ಎಂದು ಆಂತರಿಕ ಸಚಿವಾಲಯದ ವಕ್ತಾರ ಮಿರ್ವೈಸ್ ಸ್ಟಾನಿಕ್ ಝೈ ವಿವರಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಲಿಬರಲ್ (ಉದಾರವಾದಿ) ಇಸ್ಲಾಮಿಕ್ ಆಡಳಿತವನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದ ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಅಧಿಕಾರಿಗಳು, ನ್ಯಾಯಾಧೀಶರು ಮತ್ತು ಸಾರ್ವಜನಿಕರು ತಾಲಿಬಾನ್ ಉಗ್ರರಿಂದ ಕೊಲ್ಲಲ್ಪಟ್ಟಿರುವುದಾಗಿ ವರದಿ ಹೇಳಿದೆ.
ಅಫ್ಘಾನಿಸ್ತಾನದಲ್ಲಿ ಅಮೆರಿಕ ಪಡೆ ವಾಪಸ್ ತೆರಳಿದ ನಂತರ ದಶಕಗಳ ಕಾಲ ಶಾಂತವಾಗಿದ್ದ, ದೇಶದಲ್ಲಿ ಈಗ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದಿದೆ. ಸಾವಿರಾರು ಮಂದಿ ಮನೆ ಬಿಟ್ಟು ಓಡಿ ಹೋಗುವಂತಾಗಿದೆ. ಹಲವರನ್ನು ಬಲವಂತವಾಗಿ ಹೊರದಬ್ಬಲಾಗಿದೆ, ನೂರಾರು ಮಂದಿಯನ್ನು ಹತ್ಯೆಗೈದಿರುವ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ