ಬಂಟ್ವಾಳ: ತಾ.ಪಂ.ನಲ್ಲಿ 6 ಸ್ಥಾನ ಇಳಿಕೆ; ಜಿಲ್ಲಾ ಪಂಚಾಯತ್‌ 1 ಸ್ಥಾನ ಏರಿಕೆ

ಬಂಟ್ವಾಳ ತಾಲೂಕು: ಕ್ಷೇತ್ರ ಪುನರ್‌ ವಿಂಗಡಣೆ

Team Udayavani, Feb 12, 2021, 4:30 AM IST

ಬಂಟ್ವಾಳ: ತಾ.ಪಂ.ನಲ್ಲಿ 6 ಸ್ಥಾನ ಇಳಿಕೆ; ಜಿಲ್ಲಾ ಪಂಚಾಯತ್‌ 1 ಸ್ಥಾನ ಏರಿಕೆ

ಬಂಟ್ವಾಳ: ಈ ಬಾರಿಯ ಜಿ.ಪಂ.ಹಾಗೂ ತಾ.ಪಂ.ಚುನಾವಣೆಗೆ ಕ್ಷೇತ್ರ ಪುನರ್‌ ವಿಂಗಡಣೆ ಮಾಡುವ ನಿಟ್ಟಿನಲ್ಲಿ ರಾಜ್ಯ ಚುನಾವಣ ಆಯೋಗವು ಆದೇಶ ಹೊರಡಿಸಿದ್ದು, ಅದರ ಪ್ರಕಾರ ಈ ಬಾರಿ ಬಂಟ್ವಾಳ ತಾ.ಪಂ.ನಲ್ಲಿ 28 ಹಾಗೂ ತಾಲೂಕು ವ್ಯಾಪ್ತಿಯಲ್ಲಿ 10 ಜಿ.ಪಂ.ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಇಡೀ ಜಿಲ್ಲೆಯಲ್ಲೇ ಹೆಚ್ಚಿನ ತಾ.ಪಂ.ಕ್ಷೇತ್ರಗಳನ್ನು ಹೊಂದಿರುವ ಬಂಟ್ವಾಳ ತಾಲೂಕಿನಲ್ಲಿ ಈ ಹಿಂದೆ 34 ಕ್ಷೇತ್ರಗಳಿದ್ದು, ಪ್ರಸ್ತುತ ಅದು 28ಕ್ಕೆ ಇಳಿದಿದೆ. ಜತೆಗೆ ಈ ಹಿಂದೆ 9 ಜಿ.ಪಂ.ಕ್ಷೇತ್ರಗಳಿದ್ದದ್ದು 10ಕ್ಕೆ ಏರಿಕೆಯಾಗಿದೆ. ಪ್ರಸ್ತುತ ತಾ.ಪಂ.ಹಾಗೂ ಜಿ.ಪಂ.ಸ್ಥಾನಗಳನ್ನು ಆಯೋಗ ನೀಡಿದ್ದು, ಪುನರ್‌ ವಿಂಗಡನೆಯ ಕಾರ್ಯ ಇನ್ನಷ್ಟೇ ಆಗಬೇಕಿದೆ.

ಸದ್ಯಕ್ಕೆ ಬಂಟ್ವಾಳ ತಾಲೂಕಿನ ಯಾವುದೇ ಭಾಗವು ಇತರ ತಾಲೂಕಿಗೆ ಇಬ್ಭಾಗವಾಗದೇ ಇದ್ದರೂ, ತಾ.ಪಂ.ಕ್ಷೇತ್ರದಲ್ಲಿ 6 ಸ್ಥಾನಗಳು ಕಡಿಮೆಯಾಗಿದೆ. ಈಗಾಗಲೇ ಉಳ್ಳಾಲ ತಾಲೂಕು ಘೋಷಣೆಯಾಗಿ ಬಂಟ್ವಾಳದ ಬಾಳೆಪುಣಿ, ಕುರ್ನಾಡು, ನರಿಂಗಾನ, ಫಜೀರು, ಸಜೀಪನಡು ಹಾಗೂ ಸಜೀಪಪಡು ಗ್ರಾ.ಪಂ.ಗಳು ಸೇರ್ಪಡೆಯಾಗಲಿವೆ. ಆದರೆ ಅದರ ಅನುಷ್ಠಾನ ಕಾರ್ಯ ಇನ್ನೂ ಆಗದೇ ಇರುವುದರಿಂದ ಈ ಬಾರಿ ಎಲ್ಲ ಪ್ರದೇಶಗಳು ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲೇ ಇರಲಿವೆ.

ಕ್ಷೇತ್ರಗಳ ಸಂಖ್ಯೆ ವ್ಯತ್ಯಾಸ
ತಾ.ಪಂ.ಹಾಗೂ ಜಿ.ಪಂ.ಸ್ಥಾನಗಳಲ್ಲಿ ವ್ಯತ್ಯಾಸವಾಗಿರುವುದು ನಮ್ಮ ಗಮನಕ್ಕೆ ಬಂದಿದ್ದು, ಕ್ಷೇತ್ರ ಪುನರ್‌ ವಿಂಗಡನೆಯ ಕಾರ್ಯ ಇನ್ನಷ್ಟೇ ನಡೆಯಬೇಕಿದೆ. ಮುಂದೆ ಯಾವ ರೀತಿಯಲ್ಲಿ ಪುನರ್‌ ವಿಂಗಡಣೆ ಕಾರ್ಯ ನಡೆಯುತ್ತದೆ ಎಂಬುದರ ಕುರಿತು ಇನ್ನೂ ಕೂಡ ಮಾಹಿತಿ ಬಂದಿಲ್ಲ.
-ರಶ್ಮಿ ಎಸ್‌.ಆರ್‌., ತಹಶೀಲ್ದಾರ್‌, ಬಂಟ್ವಾಳ

ರಾಜಕೀಯ ಲೆಕ್ಕಾಚಾರ
ಬಂಟ್ವಾಳ ತಾಲೂಕಿನಲ್ಲಿ ಯಾವುದೇ ಗ್ರಾ.ಪಂ.ಗಳು ನಗರ ಸ್ಥಳೀಯ ಸಂಸ್ಥೆಯಾಗಿ ಮೇಲ್ದರ್ಜೆಗೇರಿಲ್ಲ. ಪುದು ಮೇಲ್ದರ್ಜೆಗೇರುತ್ತದೆ ಎಂಬ ಪ್ರಸ್ತಾವವಿದ್ದರೂ, ಅದು ಇನ್ನೂ ಕೂಡ ಗ್ರಾ.ಪಂ.ಆಗಿಯೇ ಇದೆ. ಹೀಗಿದ್ದರೂ, 6 ಸ್ಥಾನಗಳು ಕಡಿಮೆಯಾಗಿವೆ. ಜತೆಗೆ ಒಂದು ಜಿ.ಪಂ.ಕ್ಷೇತ್ರ ಹೆಚ್ಚಾಗಿರುವುದು ವಿಶೇಷವಾಗಿದೆ.

ಈ ರೀತಿಯ ಪುನರ್‌ ವಿಂಗಡನೆ ಜನಸಾಮಾನ್ಯರಿಗೆ ಹೆಚ್ಚಿನ ತೊಂದರೆ ನೀಡದಿದ್ದರೂ, ರಾಜಕೀಯ ಪಕ್ಷಗಳಿಗೆ ಬಹಳ ಮಹತ್ವ ಎನಿಸಿಕೊಳ್ಳಲಿದೆ. ತಾ.ಪಂ., ಜಿ.ಪಂ.ಸ್ಥಾನಗಳಿಗೆ ಕಣ್ಣಿಟ್ಟಿರುವ ಅಭ್ಯರ್ಥಿಗಳಿಗೆ ಲಾಭ-ನಷ್ಟದ ವಿಚಾರವಾಗಿದೆ. ಅಂದರೆ ಪುನರ್‌ ವಿಂಗಡನೆಯ ಮೇಲೆ ನಮ್ಮ ಪ್ರಾಬಲ್ಯವಿರುವ ಗ್ರಾಮದ ಭಾಗಗಳು ಸೇರ್ಪಡೆ ಅಥವಾ ತಪ್ಪಿ ಹೋಗಲಿವೆಯೇ ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.